Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...