Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...