Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...