Homeಕರ್ನಾಟಕಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ' ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

ಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ’ ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

3ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟ, ರಾಜ್ಯಪಾಲರು ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ

- Advertisement -
- Advertisement -

ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ  ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. 11 ಗಂಟೆಗೆ ರಾಜ್ಯಪಾಲರು ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ನೋಡಿ:

‘ಬೆಂಗಳೂರು ಚಲೋ’ ಮೂಲಕ ಹುಬ್ಬಳ್ಳಿಯಿಂದ ರಾಜಧಾನಿಗೆ ಆಗಮಿಸಿರುವ ರೈತರು ಮಹದಾಯಿಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ರಾಜ್ಯಪಾಲರು, ರೈತರ ಮನವಿ ಸ್ವೀಕರಿಸುತ್ತಿಲ್ಲ ಹೀಗಾಗಿ ಪಟ್ಟು ಬಿಡದ ಹೋರಾಟಗಾರರು ರಾತ್ರಿಯಿಡೀ ಮಳೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಧಾರಾಕಾರ ಮಳೆಯಲ್ಲೇ ಕುಳಿತ ಪರಿಣಾಮ ಮಹಿಳೆಯರು ಪರದಾಡಿದ್ರು. ಇನ್ನು ಕೆಲವರಿಗೆ ಚಳಿ, ಜ್ವರ ಬಂದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊದಿಕೆಯಿಲ್ಲದೇ ರಾತ್ರಿಯಿಡೀ ಚಳಿಯಲ್ಲೇ ಪ್ರತಿಭಟನಾಕಾರರು ಮಲಗುವಂತಾಯಿತು. ಮಳೆಯಲ್ಲಿ ಟರ್ಪಲ್ ಹಿಡಿದು ಧರಣಿ ನಡೆಸಿದರು.

ಇದನ್ನೂ ಓದಿ: ಚುನಾವಣೆಗಾಗಿ ರಾಜ್ಯದ ಹಿತ ಬಲಿಕೊಟ್ಟ ಸಿಎಂ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಬೊಮ್ಮಾಯಿ..

ಇನ್ನು ಬೆಳಗ್ಗೆ 11 ಗಂಟೆಯೊಳಗೆ ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ರಾಜ್ಯಪಾಲರ ಮೇಲೆ ಮಾತ್ರ ನಂಬಿಕೆಯಿದೆ. ಡಿಸಿಎಂ ಗೋವಿಂದ ಕಾರಜೋಳ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ನಮ್ಮನ್ನು ಮೊದಲು ರಾಜ್ಯಪಾಲರ ಬಳಿ ಕರೆದುಕೊಂಡು ಹೋಗಿ, ಅವರು ನಮ್ಮ ಮನವಿಯನ್ನು ಸ್ವೀಕರಿಸಲಿ, ರಾಜ್ಯಪಾಲರ ಮೇಲೆ ಮಾತ್ರ ನಮಗೆ ನಂಬಿಕೆಯಿದೆ. ಸರ್ಕಾರ ಹಾಗೂ ಯಾವುದೇ ಪಕ್ಷಗಳ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿ ಅವರ ತತ್ವವನ್ನು ಪಾಲಿಸುವ ಮೂಲಕ ನಿರಶನ ಕೈಗೊಳ್ಳಲಿದ್ದೇವೆ. ನಮಗೆ ಏನಾದರೂ ತೊಂದರೆ ಆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು. ರಾಜ್ಯಪಾಲರು ಮಧ್ಯಪ್ರವೇಶಿಸಿ, ಮಹದಾಯಿ ವಿಚಾರದಲ್ಲಿ ನ್ಯಾಯ ಒದಗಿಸಿಕೊಡಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ, ರಾಜ್ಯದ ರೈತರ ಸಂಕಷ್ಟ ನಿವಾರಿಸಬೇಕು. ಸುದೀರ್ಘ ವರ್ಷಗಳ ಹೋರಾಟದಿಂದ ಮಹದಾಯಿ ಉತ್ತರಕರ್ನಾಟಕ ಭಾಗದ ರೈತರಿಗೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...