Homeಕರ್ನಾಟಕಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ' ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

ಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ’ ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

3ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟ, ರಾಜ್ಯಪಾಲರು ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ

- Advertisement -
- Advertisement -

ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ  ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. 11 ಗಂಟೆಗೆ ರಾಜ್ಯಪಾಲರು ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ನೋಡಿ:

‘ಬೆಂಗಳೂರು ಚಲೋ’ ಮೂಲಕ ಹುಬ್ಬಳ್ಳಿಯಿಂದ ರಾಜಧಾನಿಗೆ ಆಗಮಿಸಿರುವ ರೈತರು ಮಹದಾಯಿಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ರಾಜ್ಯಪಾಲರು, ರೈತರ ಮನವಿ ಸ್ವೀಕರಿಸುತ್ತಿಲ್ಲ ಹೀಗಾಗಿ ಪಟ್ಟು ಬಿಡದ ಹೋರಾಟಗಾರರು ರಾತ್ರಿಯಿಡೀ ಮಳೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಧಾರಾಕಾರ ಮಳೆಯಲ್ಲೇ ಕುಳಿತ ಪರಿಣಾಮ ಮಹಿಳೆಯರು ಪರದಾಡಿದ್ರು. ಇನ್ನು ಕೆಲವರಿಗೆ ಚಳಿ, ಜ್ವರ ಬಂದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊದಿಕೆಯಿಲ್ಲದೇ ರಾತ್ರಿಯಿಡೀ ಚಳಿಯಲ್ಲೇ ಪ್ರತಿಭಟನಾಕಾರರು ಮಲಗುವಂತಾಯಿತು. ಮಳೆಯಲ್ಲಿ ಟರ್ಪಲ್ ಹಿಡಿದು ಧರಣಿ ನಡೆಸಿದರು.

ಇದನ್ನೂ ಓದಿ: ಚುನಾವಣೆಗಾಗಿ ರಾಜ್ಯದ ಹಿತ ಬಲಿಕೊಟ್ಟ ಸಿಎಂ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಬೊಮ್ಮಾಯಿ..

ಇನ್ನು ಬೆಳಗ್ಗೆ 11 ಗಂಟೆಯೊಳಗೆ ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ರಾಜ್ಯಪಾಲರ ಮೇಲೆ ಮಾತ್ರ ನಂಬಿಕೆಯಿದೆ. ಡಿಸಿಎಂ ಗೋವಿಂದ ಕಾರಜೋಳ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ನಮ್ಮನ್ನು ಮೊದಲು ರಾಜ್ಯಪಾಲರ ಬಳಿ ಕರೆದುಕೊಂಡು ಹೋಗಿ, ಅವರು ನಮ್ಮ ಮನವಿಯನ್ನು ಸ್ವೀಕರಿಸಲಿ, ರಾಜ್ಯಪಾಲರ ಮೇಲೆ ಮಾತ್ರ ನಮಗೆ ನಂಬಿಕೆಯಿದೆ. ಸರ್ಕಾರ ಹಾಗೂ ಯಾವುದೇ ಪಕ್ಷಗಳ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿ ಅವರ ತತ್ವವನ್ನು ಪಾಲಿಸುವ ಮೂಲಕ ನಿರಶನ ಕೈಗೊಳ್ಳಲಿದ್ದೇವೆ. ನಮಗೆ ಏನಾದರೂ ತೊಂದರೆ ಆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು. ರಾಜ್ಯಪಾಲರು ಮಧ್ಯಪ್ರವೇಶಿಸಿ, ಮಹದಾಯಿ ವಿಚಾರದಲ್ಲಿ ನ್ಯಾಯ ಒದಗಿಸಿಕೊಡಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ, ರಾಜ್ಯದ ರೈತರ ಸಂಕಷ್ಟ ನಿವಾರಿಸಬೇಕು. ಸುದೀರ್ಘ ವರ್ಷಗಳ ಹೋರಾಟದಿಂದ ಮಹದಾಯಿ ಉತ್ತರಕರ್ನಾಟಕ ಭಾಗದ ರೈತರಿಗೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...