Homeಕರ್ನಾಟಕಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ' ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

ಅಹೋರಾತ್ರಿ ಮಳೆಯಲ್ಲೆ `ಮಹಾದಾಯಿ’ ರೈತರ ಧರಣಿ: ತಿರುಗಿ ನೋಡದ ರಾಜ್ಯಪಾಲರು!

3ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟ, ರಾಜ್ಯಪಾಲರು ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ

- Advertisement -
- Advertisement -

ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ  ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. 11 ಗಂಟೆಗೆ ರಾಜ್ಯಪಾಲರು ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ನೋಡಿ:

‘ಬೆಂಗಳೂರು ಚಲೋ’ ಮೂಲಕ ಹುಬ್ಬಳ್ಳಿಯಿಂದ ರಾಜಧಾನಿಗೆ ಆಗಮಿಸಿರುವ ರೈತರು ಮಹದಾಯಿಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ರಾಜ್ಯಪಾಲರು, ರೈತರ ಮನವಿ ಸ್ವೀಕರಿಸುತ್ತಿಲ್ಲ ಹೀಗಾಗಿ ಪಟ್ಟು ಬಿಡದ ಹೋರಾಟಗಾರರು ರಾತ್ರಿಯಿಡೀ ಮಳೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಧಾರಾಕಾರ ಮಳೆಯಲ್ಲೇ ಕುಳಿತ ಪರಿಣಾಮ ಮಹಿಳೆಯರು ಪರದಾಡಿದ್ರು. ಇನ್ನು ಕೆಲವರಿಗೆ ಚಳಿ, ಜ್ವರ ಬಂದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊದಿಕೆಯಿಲ್ಲದೇ ರಾತ್ರಿಯಿಡೀ ಚಳಿಯಲ್ಲೇ ಪ್ರತಿಭಟನಾಕಾರರು ಮಲಗುವಂತಾಯಿತು. ಮಳೆಯಲ್ಲಿ ಟರ್ಪಲ್ ಹಿಡಿದು ಧರಣಿ ನಡೆಸಿದರು.

ಇದನ್ನೂ ಓದಿ: ಚುನಾವಣೆಗಾಗಿ ರಾಜ್ಯದ ಹಿತ ಬಲಿಕೊಟ್ಟ ಸಿಎಂ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಬೊಮ್ಮಾಯಿ..

ಇನ್ನು ಬೆಳಗ್ಗೆ 11 ಗಂಟೆಯೊಳಗೆ ಮನವಿ ಸ್ವೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ರಾಜ್ಯಪಾಲರ ಮೇಲೆ ಮಾತ್ರ ನಂಬಿಕೆಯಿದೆ. ಡಿಸಿಎಂ ಗೋವಿಂದ ಕಾರಜೋಳ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ನಮ್ಮನ್ನು ಮೊದಲು ರಾಜ್ಯಪಾಲರ ಬಳಿ ಕರೆದುಕೊಂಡು ಹೋಗಿ, ಅವರು ನಮ್ಮ ಮನವಿಯನ್ನು ಸ್ವೀಕರಿಸಲಿ, ರಾಜ್ಯಪಾಲರ ಮೇಲೆ ಮಾತ್ರ ನಮಗೆ ನಂಬಿಕೆಯಿದೆ. ಸರ್ಕಾರ ಹಾಗೂ ಯಾವುದೇ ಪಕ್ಷಗಳ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿ ಅವರ ತತ್ವವನ್ನು ಪಾಲಿಸುವ ಮೂಲಕ ನಿರಶನ ಕೈಗೊಳ್ಳಲಿದ್ದೇವೆ. ನಮಗೆ ಏನಾದರೂ ತೊಂದರೆ ಆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು. ರಾಜ್ಯಪಾಲರು ಮಧ್ಯಪ್ರವೇಶಿಸಿ, ಮಹದಾಯಿ ವಿಚಾರದಲ್ಲಿ ನ್ಯಾಯ ಒದಗಿಸಿಕೊಡಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ, ರಾಜ್ಯದ ರೈತರ ಸಂಕಷ್ಟ ನಿವಾರಿಸಬೇಕು. ಸುದೀರ್ಘ ವರ್ಷಗಳ ಹೋರಾಟದಿಂದ ಮಹದಾಯಿ ಉತ್ತರಕರ್ನಾಟಕ ಭಾಗದ ರೈತರಿಗೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...