Homeಮುಖಪುಟಮಹದಾಯಿಯ ವಿವಾದದ ಮಾಯೆ : ಕರ್ನಾಟಕದ ತಪ್ಪೇನು? ಗೋವಾದ ಕ್ಯಾತೆಯೇನು?

ಮಹದಾಯಿಯ ವಿವಾದದ ಮಾಯೆ : ಕರ್ನಾಟಕದ ತಪ್ಪೇನು? ಗೋವಾದ ಕ್ಯಾತೆಯೇನು?

ʻಜಗತ್ತಿನಲ್ಲಿ ಮಾನವರು ಇಲ್ಲವಾದರೆ ಭೂಮಿ ಹಾಳಾಗಲಾರದು. ಆದರೆ ಈ ವಿಶ್ವದಲ್ಲಿ ಜೇನುಹುಳುಗಳು ಇಲ್ಲವಾದರೆ ಮನುಷ್ಯರು ಒಂದು ದಶಕದಲ್ಲಿಯೇ ನಾಶವಾದಾರುʼʼ

- Advertisement -
- Advertisement -

ಅಪ್ರತಿಮ ನೀರಾವರಿ ತಜ್ಞ ಹಾಗೂ ಅತಿ ದೂರದೃಷ್ಟಿಯ ರಾಜಕಾರಣಿ ರಮೇಶ ಜಾರಕಿಹೊಳಿ ಅವರು ಮೊನ್ನೆ ಮಹದಾಯಿ ನದಿ ಹುಟ್ಟುವ ಕಣಕುಂಬಿ ಜಂಗಲ್ಲಿಗೆ ಹೋಗಿದ್ದರು. ಅಲ್ಲಿ ಹೋದಮ್ಯಾಲೆ ರೈತರು ಆಯೋಜಿಸಿದ ಸಭೆಗೆ ಹೋಗಲು ಒಲ್ಲೆ ಅಂದರು. ಸಭೆ ಕಟ್ಟಿ ಹತ್ತಿದವರು ಇಳದರು. ನಾನು ಬರಬಾರದಾಗಿತ್ತು. ಬಂದಿದ್ದು ತಪ್ಪು. ಈ ವಿವಾದ ಸುಪ್ರೀಂ ಕೋರ್ಟಿನ್ಯಾಗ ಅದ. ನಾನು ಇಲ್ಲಿ ಇವತ್ತು ಬಂದದ್ದು ಗೋವಾದವರಿಗೆ ಗೊತ್ತಾದರ ಅವರು ತಕರಾರು ಮಾಡತಾರ. ಆಗ ರಾಜ್ಯದ ಹಿತಾಸಕ್ತಿಗೆ ಕುಂದು ಆಗಬಹುದು. ಇದನ್ನ ಟೀವಿಯೊಳಗ ತೋರಿಸಬ್ಯಾಡ್ರಿ. ದಯವಿಟ್ಟು ತೋರಿಸಬ್ಯಾಡ್ರಿ, ಅಂತ ಅವಲತ್ತು ಕೊಂಡರು.

ಇಷ್ಟು ಶಾಣ್ಯಾ ಮನುಷ್ಯ ಅಷ್ಟು ದೊಡ್ಡ ತಪ್ಪು ಹೆಂಗ ಮಾಡಿದಾ? ಅಷ್ಟಾಗಿಯೂ ಆ ವಿವಾದ ಏನು?

ಭಾರತದೊಳಗ ಎರಡು ರೀತಿ ನದಿ ಅದಾವು. ಕೆಲವು ಬಲಗಡೆ ಹರಿದು ಬಂಗಾಳ ಕೊಲ್ಲಿಯೊಳಗ ಕೂಡತಾವು. ಇನ್ನು ಕೆಲವು ಎಡಗಡೆ ಹರಕೊಂಡು ಹೋಗಿ ಅರಬ್ಬೀ ಸಮುದ್ರದೊಳಗ ಸೇರತಾವು ಕರಾವಳಿ ಮಂದಿ ಅವಕ್ಕ ಪಶ್ಚಿಮವಾಹಿನಿ ಅಂತಾರ. ಮಜಾ ಅಂದರ ಆದರ ತಮ್ಮೂರಾಗ ಹರಿಯುವ ನದಿಗಳಿಗೆ ಅವರು ಪೂರ್ವವಾಹಿನಿ ಅನ್ನಂಗಿಲ್ಲ.

ಮಹದಾಯಿ ಅಥವಾ ಮ್ಹಾದೇಯಿ ಅಥವಾ ಮಾಂಡೋವಿ ಅನ್ನೋದು ಪಶ್ಚಿಮಘಟ್ಟದೊಳಗ ಹುಟ್ಟಿ ಎಡಗಡೆ ಹರದು ಮೀರಾಮಾರ ಅನ್ನೋ ಗೋವಾದ ಪ್ರದೇಶದಾಗ ಅರಬ್ಬೀ ಸಮುದ್ರಕ್ಕೆ ಸೇರೋ ಪಶ್ಚಿಮ ವಾಹಿನಿ. ಸುಮಾರು 90 ಕಿಲೋಮಿಟರ್ ಹರಿಯುವ ಇದು ದೇಶದ ಅತಿ ಸಣ್ಣ ನದಿಗಳಲ್ಲಿ ಒಂದು. ಅದರಾಗ ಹರಿಯೋ ನೀರಿನ ಪ್ರಮಾಣ ಸುಮಾರು 175 ಟಿಎಂಸಿ ಫೀಟು ನೀರು ಅಂದರ ಸುಮಾರು 4.81 ಲಕ್ಷ ಕೋಟಿ ಲೀಟರು ನೀರು ಇರಬಹುದು ಅಂತ ಕೇಂದ್ರ ನದಿ ನೀರು ಮಂಡಳಿ ಅಂದಾಜು. ಅದರಾಗ ಗೋವಾ 122 ಟಿಎಂಸಿ, ಕರ್ನಾಟಕ 34 ಹಾಗೂ ಮಹಾರಾಷ್ಟ್ರ 6.5 ಟಿಎಂಸಿ ನೀರು ಕೇಳಿದ್ದವು. ಮಹದಾಯಿ ಮಂಡಳಿ ಕರ್ನಾಟಕ 13, ಗೋವಾ 24 ಹಾಗೂ ಮಹಾರಾಷ್ಟ್ರ 1.3 ಟಿಎಂಸಿ ನೀರು ತೊಗೋಬಹುದು ಅಂತ ಹೇಳೇದ.

ಆದರ ಕರ್ನಾಟಕ ತಯಾರಿಸಿರುವ ಯೋಜನೆಗಳಿಂದ ಅರಣ್ಯ ಹಾಗೂ ಪರಿಸರ ನಾಶ ಆಗತದ, ವನ್ಯಜೀವಿಗಳಿಗೆ ನೀರು ಸಿಗೋದಿಲ್ಲ, ನದಿಪಾತ್ರದೊಳಗ ನೀರು ಕಮ್ಮಿ ಆಗತದ, ಗೋವಾದ ಜೀವ ದ್ರವ್ಯವಾದ ಮೀನುಗಾರಿಕೆ ಬಂದ್ ಆಗತದ ಅಂತೆಲ್ಲಾ ಹೇಳಿ ಗೋವಾದವರು ಸುಪ್ರೀಂಕೋರ್ಟಿಗೆ ಹೋಗ್ಯಾರ. ಅಲ್ಲಿನ ಪರಿಸರವಾದಿಗಳು, ಸಂಘಟನೆಗಳು ಸಹಿತ ಆಂದೋಲನ ನಡಿಸ್ಯಾವ.

ಕಾವೇರಿ, ಕೃಷ್ಣ ಹಾಗೂ ಗೋದಾವರಿಗೂ, ಮಹದಾಯಿಗೂ ಏನು ವ್ಯತ್ಯಾಸ ಅಂದರ ಮೊದಲಿನ ಮೂರರಾಗ ನದಿ ನೀರು ಹಂಚಿಕೆಯ ಪ್ರಮಾಣದ ಬಗ್ಗೆ ವಿವಾದ ಇದ್ದರ, ಮಹದಾಯಿಯೊಳಗ ಪರಿಸರ ಕಾಳಜಿಯಿಂದ ಈ ಯೋಜನೆ ಆಗಲೇಬಾರದು ಅನ್ನೋ ವಿವಾದ ಅದ.

ಗೋವಾದವರು ಮಾಡಿರುವ ಆರೋಪಗಳಲ್ಲಿ ಮುಖ್ಯವಾದವು ಇವು- ಮೊದಲನೇಯದು ಕಳಸಾ ಹಾಗೂ ಬಂಡೋರಿ ನಾಲಾಗಳು ಮಹದಾಯಿ ನದಿಗೆ ಸೇರೋಗಿಂತಾ ಮುಂಚೇನ ಅವುಗಳಿಂದ ನೀರನ್ನ ಹೀರಿಕೊಂಡು ನದಿಯನ್ನ ಬರಡಾಗಿಸಲಾಗತದ. ಇದು ಅವೈಜ್ಞಾನಿಕ. ಎರಡನೆಯದು ಈ ಯೋಜನೆಗಳಲ್ಲಿ ಭೂಮಿಯ ಒಳಗ ಸುರಂಗ ಕೊರದು ನೀರು ಹರಸತಾರ. ಇದರಿಂದ ಅರಣ್ಯ ನಾಶ ಆಗತದ. ಮೂರನೆಯದು ಮಹದಾಯಿ ಜಲವಿದ್ಯುತ್ ಯೋಜನೆಯೊಳಗ ಪಶ್ಚಿಮಘಟ್ಟದ ಗುಡ್ಡದ ನೆತ್ತಿಯ ಮ್ಯಾಲೆ ಅಣೆಕಟ್ಟು ಕಟ್ಟಿ ನೀರು ಸಂಗ್ರಹ ಮಾಡತಾರ. ಇದರಿಂದ ಅಣೆಕಟ್ಟಿಗೂ ಅಪಾಯ, ಸುತ್ತಲಿನ ಕಾಡು, ಜೀವಜಾಲ, ಪಕ್ಷಿಗಳಿಗೂ ಅಪಾಯ.

ಹೀಗೆಲ್ಲಾ ಮಾಡಿದರ ನದಿ ಕೆಲವು ವರ್ಷಗಳ ನಂತರ ಬತ್ತಿ ಹೋಗತಾವು. ನೀವು ಸಾವಿರಾರು ಕೋಟಿ ರೂಪಾಯಿ ಕೊಟ್ಟು ಕಟ್ಟಿದ ಅಣೆಕಟ್ಟುಗಳು ಇದರಿಂದ ಖಾಲಿ ಹೊಡೀತಾವು. ಹತ್ತು ಹನ್ನೆರಡು ವರ್ಷಗಳ ಬಳಿಕ ಜನ ನೀರು ಕೇಳಿದರ ಏನು ಹೇಳತೀರಿ ಅನ್ನೋ ಪ್ರಶ್ನೆಗೆ ಯಾರ ಹತ್ತರನೂ ಉತ್ತರ ಇಲ್ಲ.

ಇವು ಯಾವುಕ್ಕೂ ಕರ್ನಾಟಕ ಸರಕಾರ ಇಲ್ಲಿಯವರೆಗೂ ಸರಿಯಾದ ಉತ್ತರ ಕೊಟ್ಟಿಲ್ಲ. ಹಿಂದೆ ಈ ಇಲಾಖೆ ಹೊಂದಿದ ಸಚಿವರೂ ಹಾಗೂ ಈಗ ಇದನ್ನು ಜಿದ್ದಿನಿಂದ ಪಡೆದುಕೊಂಡ ರಮೇಶ ಸಾಹುಕಾರ ಅವರಾಗಲೀ ಯಾರೂ ಪರಿಸರವಾದಿಗಳ ಆತಂಕಗಳಿಗೆ ಪರಿಹಾರ ಕೊಟ್ಟಿಲ್ಲ. ಪರಿಸರವಾದಿಗಳನ್ನು ಪರಿಸರವ್ಯಾಧಿಗಳು ಅಂತ ಒಬ್ಬ ರಾಜಕೀಯ ಪಂಡಿತರು ಕರದಾರ. ಅವರಿಗೆ ನೆಲದ ಕೆಳಗ ಇರುವ ಜೀವ ಜಂತುಗಳು ಕಾಣತಾವೆ, ನೆಲದ ಮೇಲೆ ಇರೋ ಜನ ಕಾಣಂಗಿಲ್ಲ ಅಂತ ಹಿರಿಯ ರಾಜಕಾರಣಿಯೊಬ್ಬರು ಹೇಳ್ಯಾರ. ಒಟ್ಟಿನ್ಯಾಗ ಇಂತಹ ಮೌಲಿಕ ಪ್ರಶ್ನೆಗಳನ್ನ ಚಾಪೆ ಕೆಳಗ ತೂರಿಸಿ ನೆಲ ಸ್ವಚ್ಛ ಮಾಡುವ ಕೆಲಸ ನಡದದ.

ಇನ್ನು ಅಡವಿಯೊಳಗ ಮಾಡುವ ಯೋಜನೆಗಳಿಗೆ ಅವಶ್ಯಕವಾಗಿ ಬೇಕಾದ ಪರಿಸರ ಇಲಾಖೆ ಅನುಮತಿಯನ್ನು ಈ ಯೋಜನೆಗೆ ತೊಗೊಂಡಿಲ್ಲ. ಇದು ಕುಡಿಯುವ ನೀರು ಯೋಜನೆ. ಇದಕ್ಕ ಅದು ಬೇಕಾಗಿಲ್ಲ ಅಂತ ಕೇಳಿದವರ ಬಾಯಿ ಮುಚ್ಚಿಸೋ ಪ್ರಯತ್ನ ನಡದದ. ಇದು ಕುಡಿಯೋ ನೀರು ಯೋಜನೆ ಆಗಿದ್ದರ ಹುಬ್ಬಳ್ಳಿ- ಧಾರವಾಡ- ಗದಗ- ನರಗುಂದದ ಜನಾ ಹೋರಾಟ ಮಾಡಬೇಕಾಗಿತ್ತಲ್ಲಾ, ಆದರ ಯೋಜನೆ ಕನಾಲು ಹಾಸಿ ಹೋಗೋ ಜಮೀನಿನ ಪಕ್ಕದ ರೈತರು ಹೋರಾಟ ಮಾಡಲಿಕ್ಕೆ ಹತ್ಯಾರ. ಅದಕ್ಕೇನು ಮಾಡೋದು ಅಂತ ಕೇಳಿದರ ಅದಕ್ಕ ಉತ್ತರ ಇಲ್ಲ. ನೀರು ಕನಾಲಿನೊಳಗ ಹರದುಹೋಗೋವಾಗ ಅದನ್ನ ರೈತರು ಪಂಪು ಸೆಟ್ಟ ಹಚ್ಚಿ ಎಳಕೊಳ್ಳೋದು ಸಹಜ. ಅದನ್ನೇನೂ ಮಾಡಲಿಕ್ಕೆ ಆಗಂಗಿಲ್ಲ ಅನ್ನೋ ಅಸಹಾಯಕ ಪ್ರತಿಕ್ರಿಯೆ ಬರತದ.

ವಿವಾದ ಬಗೆಹರಿಸೋ ಜವಾಬುದಾರಿ ಇರೋ ಮಹದಾಯಿ ನದಿ ನೀರು ಹಂಚಿಕೆ ನ್ಯಾಯಮಂಡಲ ಕರ್ನಾಟಕಕ್ಕ 13, ಗೋವಾಕ್ಕ 24 ಹಾಗೂ ಮಹಾರಾಷ್ಟ್ರಕ್ಕ 1.3 ಟಿಎಂಸಿ ನೀರು ಬಳಸಬಹುದು ಅಂತ ಹೇಳೇದ. ಹಂಗಂತ ಇದು ಯೋಜನೆಗಳಿಗೆ ಅನುಮತಿ ಕೊಟ್ಟಂಗಲ್ಲ. ಎಲ್ಲಾ ಅನುಮತಿ ಸಿಕ್ಕ ಮ್ಯಾಲೆ ನೀವು ಇದರಗಿಂತ ಹೆಚ್ಚು ನೀರು ಖರ್ಚು ಮಾಡಬಾರದು ಅಂತ ಹೇಳಿದಂಗ ಅಷ್ಟ. ಅಡವಿಯೊಳಗ ಯಾವುದೇ ಗೈರು- ಅರಣ್ಯ ಯೋಜನೆ ಮಾಡಿದರೂ ಸಹ ಅದಕ್ಕ ಮೂರು ಅನುಮತಿ ಬೇಕಾಗತಾವು- ಅರಣ್ಯ, ವನ್ಯಜೀವಿ ಹಾಗೂ ಪರಿಸರ. ಜಲ ವಿದ್ಯುತ್ ಯೋಜನೆ ಸಹಿತ ಈ ಮೂರು ಅನುಮತಿ ಇರಲಾರದೇ ಆರಂಭ ಮಾಡಲಿಕ್ಕೆ ಬರಂಗಿಲ್ಲ. ನಮ್ಮ ತಥಾಕಥಿತ ʻಕುಡಿಯುವ ನೀರಿನʼ ಯೋಜನೆಗೆ ಸಹಿತ ಅರಣ್ಯ ಹಾಗೂ ಪರಿಸರ ಅನುಮತಿ ಸಿಗಬೇಕು. ಮೊನ್ನೆಯಷ್ಟೇ ಕೇಂದ್ರ ವನ್ಯಜೀವಿ ಮಂಡಳಿ ಹುಬ್ಬಳ್ಳಿ- ಅಂಕೋಲಾ ಯೋಜನೆಗೆ ವನ್ಯಜೀವಿ ಅನುಮತಿ ನಿರಾಕರಿಸೇದ. ಇದು ನಮಗೆ ನೆನಪಿರಲಿ.

ಕೇಂದ್ರ ಸರಕಾರದ ಪ್ರಕಾರ ನಾಲ್ಕನೇ ದರ್ಜೆ ಅರಣ್ಯ ಹೊಂದಿರುವ ಭೂತರಾಮನಹಟ್ಟಿ ಪ್ರದೇಶದೊಳಗ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ಸ್ಥಾಪಿಸಬಾರದು ಅಂತ ಕೇಂದ್ರ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಎಚ್ಚರಿಕೆ ಕೊಟ್ಟದ. ಈಗ ಇರುವ ಕಚೇರಿಗಳನ್ನು ಧ್ವಂಸ ಮಾಡರಿ ಅಂತ ಡೆಡಲೈನು ಹಾಕೇದ. ಅಂಥಾದರಾಗ ಜಲವಿದ್ಯುತ್ ಯೋಜನೆ, ಅದರಿಂದ ಅರಣ್ಯ ಮುಳುಗಡೆ, ವನ್ಯಜೀವಿ ಹಾನಿ, ಪರಿಸರ ನಾಶ ಇವಕ್ಕೆಲ್ಲಾ ಕೇಂದ್ರ ಒಪ್ಪಬಹುದೇ? ಸಾಧ್ಯನ ಇಲ್ಲಾ ಅನ್ನೋರು ಕೆಲವರು. ಅನುಮತಿ ಯಾಕೋ ಅದರ ಹಂಗ್ಯಾಕೋ, ಮೋದಿ ಅವರಿದ್ದರೆ ಸಾಕುʼ ಅಂತ ಇನ್ನ ಕೆಲವರು. ಯಾವಾವ ನಾಯಕರಿಗೆ ದೇವರು ಏನೇನು ಬುದ್ಧಿ ಕೊಡತಾನೋ ಹೇಳಲಿಕ್ಕೆ ಬರಂಗಿಲ್ಲ.

ಇನ್ನು ಈ ಮೂರು ಯೋಜನೆಗಳನ್ನ ವಿರೋಧ ಮಾಡತಾ ಇರೋ ಗೋವಾ ಏನು ಭಾಳ ಸಾಚಾ ಅಂತ ತಿಳಕೋಬ್ಯಾಡ್ರಿ. ಅವರು ತಮಗ ಉಳಿಯೋ 70 ಕಿಲೋಮಿಟರ್ ನದಿ ಪಾತ್ರದಾಗ 53 ಯೋಜನೆಗಳನ್ನ ಮಾಡಲಿಕ್ಕೆ ತಯಾರಿ ನಡಸೇದ. ಅದರಾಗ ಎರಡು ಜಲವಿದ್ಯುತ್ ಯೋಜನೆಗಳು. ಅವು ಸಹ ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶದೊಳಗ ಬರೋವಂಥಾವು. ಕರ್ನಾಟಕದವರು ಜಲವಿದ್ಯುತ್ ಯೋಜನೆ ಮಾಡಿದರ ತಪ್ಪು, ನಾವು ಮಾಡಿದರ ಸರಿ ಅನ್ನೋ ಮನೋಭಾವ ಅವರದು.

ಪರಿಸರ ಅನ್ನೋದು ಯಾವ ಜಿಲ್ಲೆ- ರಾಜ್ಯ- ದೇಶದ ಗಡಿಗೆ ಸೀಮಿತವಾದದ್ದಲ್ಲ. ಅದು ಇಡೀ ಭೂಮಂಡಲಕ್ಕ ಮತ್ತು ಇಡೀ ವಿಶ್ವದ ಜನ- ಪ್ರಾಣಿ- ಪಕ್ಷಿ- ಕೀಟ- ಗಿಡ- ಜಲ- ಇತರ ಕ್ರಿಮಿಗಳ ಸುರಕ್ಷೆಗೆ ಸಂಬಂಧಿಸಿದ್ದು. ಇದನ್ನು ಹಾಳು ಮಾಡಿದರೆ ಎಲ್ಲರ ಸರ್ವನಾಶ ಖಂಡಿತ.

ʻʻಜಗತ್ತಿನಲ್ಲಿ ಮಾನವರು ಇಲ್ಲವಾದರೆ ಭೂಮಿ ಹಾಳಾಗಲಾರದು. ಆದರೆ ಈ ವಿಶ್ವದಲ್ಲಿ ಜೇನುಹುಳುಗಳು ಇಲ್ಲವಾದರೆ ಮನುಷ್ಯರು ಒಂದು ದಶಕದಲ್ಲಿಯೇ ನಾಶವಾದಾರುʼʼ ಅಂತ ಜೇನುಹುಳು ಪ್ರೇಮಿ ನಟ ಮಾರ್ಗನ್ ಫ್ರೀಮನ್ ಹೇಳಿದ್ದು ಎಲ್ಲರಿಗೂ ನೆನಪರಲಿ. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...