Homeಕರ್ನಾಟಕಚುನಾವಣೆಗಾಗಿ ರಾಜ್ಯದ ಹಿತ ಬಲಿಕೊಟ್ಟ ಸಿಎಂ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಬೊಮ್ಮಾಯಿ..

ಚುನಾವಣೆಗಾಗಿ ರಾಜ್ಯದ ಹಿತ ಬಲಿಕೊಟ್ಟ ಸಿಎಂ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಬೊಮ್ಮಾಯಿ..

- Advertisement -
- Advertisement -

ಮಹದಾಯಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದ ಜನತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಈಗ ಬೆಂಗಳೂರಿನಲ್ಲಿ ರೈತರು ನಡೆಸಿರುವ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಮಹಾರಾಷ್ಟ್ರದ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರಕ್ಕೆ ನೀರು ಬಿಡುವ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೆ ಕರ್ನಾಟಕದ ಅಣೆಕಟ್ಟೆಗಳಿಂದ ಇಲ್ಲಿಗೆ ನೀರು ಬಿಡಲಾಗುವುದು ಎಂದು ಸಿಎಂ ಯಡಿಯೂರಪ್ಪ ನಿನ್ನೆ ಚುನಾವಣಾ ಪ್ರಚಾರದಲ್ಲಿ ಹೇಳಿದ್ದು ವಿವಾದಕ್ಕೆ ಒಳಗಾಗಿತ್ತು.

ಮಹಾರಾಷ್ಟ್ರಕ್ಕೆ ತುಬ್ಸಿ ಏತ ನೀರಾವರಿ ಯೋಜನೆ ಮೂಲಕ ಬೋರ್ಚಿ ನದಿಗೆ ನೀರು ಬಿಡುವುದಾಗಿ ಹೇಳಿದ್ದ ಮಾತನ್ನು ಕಲಬುರ್ಗಿಯಲ್ಲಿ ಸಿಎಂ ಬಿಎಸ್ ವೈ ಸಮರ್ಥಿಸಿಕೊಂಡರು. ಮಹಾರಾಷ್ಟ್ರಕ್ಕೆ ನೀರು ಬಿಡುವುದು ರಾಜಕೀಯ ಗಿಮಿಕ್ ಅಲ್ಲ. ಬೇಸಿಗೆಯಲ್ಲಿ ಕೃಷ್ಣಾ, ಭೀಮಾ ನದಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಅದಕ್ಕೆ ಪ್ರತಿಯಾಗಿ ತುಬ್ಸಿ ಏತ ನೀರಾವರಿ ಮೂಲಕ ಬೋರ್ಚಿ ನದಿಗೆ 4 ಟಿಎಂಸಿ ನೀರು ಬಿಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

‘ನಾನು ಚುನಾವಣಾ ಪ್ರಚಾರದ ವೇಳೆ ನೀಡಿರುವ ಹೇಳಿಕೆ ರಾಜಕೀಯವಲ್ಲ. ಚುನಾವಣಾ ಗಿಮಿಕ್ ಮಾಡಿ ಜೀವನದಲ್ಲೇ ಗೊತ್ತಿಲ್ಲ. ನೀರು ಬಿಡುವ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಜತೆ ಚರ್ಚಿಸಲಾಗಿದೆ. ಉಭಯ ರಾಜ್ಯಗಳು ದಾಯಾದಿಗಳಲ್ಲ. ಮಾತುಕತೆ ಮೂಲಕ ಎಲ್ಲವನ್ನೂ ಬಗೆಹರಿಸಿಕೊಳ್ಳೋಣ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’ ಎಂದು ಹೇಳಿದರು.

ಇನ್ನು ಸಿಎಂ ಯಡಿಯೂರಪ್ಪ ಹೇಳಿಕೆಯನ್ನು ಗೃಹಸಚಿವ ಬಸವರಾಜ್ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರ ಚುನಾವಣೆಗೆ ಸಂಬಂಧಿಸಿದ್ದಲ್ಲ. ಅನೇಕ ವರ್ಷಗಳವರೆಗೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಇದು ಕೊಟ್ಟು-ಪಡೆಯುವ ಪ್ರಕ್ರಿಯೆ. ಕೇಳಿದ್ದ ಪ್ರಶ್ನೆಗೆ ಸಿಎಂ ಉತ್ತರಿಸಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...