Homeಮುಖಪುಟಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣ: ಪ್ರಮುಖ ಆರೋಪಿ ರವಿ ಉಪ್ಪಲ್ ಯುಎಇನಿಂದ ಪರಾರಿ

ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣ: ಪ್ರಮುಖ ಆರೋಪಿ ರವಿ ಉಪ್ಪಲ್ ಯುಎಇನಿಂದ ಪರಾರಿ

- Advertisement -
- Advertisement -

₹6,000 ಕೋಟಿ ಮೌಲ್ಯದ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ನಾಪತ್ತೆಯಾಗಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿದ ನಂತರ ಉಪ್ಪಲ್ ಅವರನ್ನು ಬಂಧಿಸಲಾಯಿತು. ಆದರೆ, 45 ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಬಾಕಿ ಇರುವ ಹಸ್ತಾಂತರ ಪ್ರಕ್ರಿಯೆಗಳಿಂದಾಗಿ ಅವರ ಮೇಲೆ ಕಣ್ಗಾವಲು ಇರಿಸಲಾಗಿತ್ತು.

ಅಕ್ಟೋಬರ್ 2024 ರಲ್ಲಿ, ಸಹ-ಪ್ರವರ್ತಕ ಸೌರಭ್ ಚಂದ್ರಕರ್ ಅವರನ್ನು ಯುಎಇಯಲ್ಲಿ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಬಂಧಿಸಲಾಯಿತು. ಆದರೆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಛತ್ತೀಸ್‌ಗಢದಲ್ಲಿ ಭೂಪೇಶ್ ಬಾಘೇಲ್ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣ ಬೆಳಕಿಗೆ ಬಂದಿತು. ಛತ್ತೀಸ್‌ಗಢದ ಹಲವಾರು ಉನ್ನತ ಶ್ರೇಣಿಯ ರಾಜಕಾರಣಿಗಳು, ಅಧಿಕಾರಿಗಳು ಅಕ್ರಮ ಜಾಲ ಮತ್ತು ಅದರ ಹಣಕಾಸಿನ ವ್ಯವಹಾರಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದ ನಂತರ ಈ ಹಗರಣ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಿತು.

ಅವರ ಹಸ್ತಾಂತರವನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದ್ದು, ಕೇಂದ್ರ ತನಿಖಾ ದಳ (ಸಿಬಿಐ) ಈ ಪ್ರಕರಣವನ್ನು ಛತ್ತೀಸ್‌ಗಢ ಪೊಲೀಸರಿಂದ ವಹಿಸಿಕೊಂಡಿದೆ. ಸಂಸ್ಥೆ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಉಪ್ಪಲ್, ಚಂದ್ರಕರ್ ಮತ್ತು ಇತರರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಹಿನ್ನೆಲೆ

ಮಹಾದೇವ್ ಆ್ಯಪ್ ಅನ್ನು 2018 ರಲ್ಲಿ ಪ್ರಾರಂಭಿಸಲಾಯಿತು. ಅವರು ಪ್ರತಿದಿನ 200 ಕೋಟಿ ರೂ.ಗಳ ಲಾಭವನ್ನು ಗಳಿಸಿದ್ದಾರೆ ಎಂದು ವರದಿಯಾಗಿದೆ. ದೈನಂದಿನ ಬೆಟ್ಟಿಂಗ್ ಹೆಚ್ಚಾಗಿ 240 ಕೋಟಿ ರೂ.ಗಳನ್ನು ದಾಟುತ್ತದೆ.

ದುಬೈನಿಂದ ನಡೆಯುತ್ತಿದ್ದ ಕಾರ್ಯಾಚರಣೆಗಳಲ್ಲಿ ಸುಮಾರು 3,500 ಜನರು ಭಾಗಿಯಾಗಿದ್ದರು. ಆದರೆ ಛತ್ತೀಸ್‌ಗಢ, ಭಾರತದ ಇತರ ಭಾಗಗಳು, ಮಲೇಷ್ಯಾ ಮತ್ತು ಥೈಲ್ಯಾಂಡ್‌ನ ವಿವಿಧ ನಗರಗಳಿಂದ ಕಾಲ್ ಸೆಂಟರ್‌ಗಳನ್ನು ನಿರ್ವಹಿಸಲಾಗುತ್ತಿತ್ತು.

ಚಂದ್ರಕರ್ ಮತ್ತು ಉಪ್ಪಲ್ ಸೇರಿ ಪೊಲೀಸರು, ಅಧಿಕಾರಿಗಳು ಮತ್ತು ರಾಜಕಾರಣಿಗಳೊಂದಿಗೆ  ಸಂಪರ್ಕವನ್ನು ಹೊಂದಿದ್ದರು. ಅಪ್ಲಿಕೇಶನ್ ತನಿಖಾ ಸಂಸ್ಥೆಗಳ ರಾಡಾರ್‌ಗಳಿಂದ ದೂರವಿರುವುದನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಲಂಚ ಪಾವತಿ ಮಾಡುತ್ತಿದ್ದರು ಎನ್ನಲಾಗಿದೆ.

ಕಾಂಗ್ರೆಸ್ ನಾಯಕ ಮತ್ತು ಆಗಿನ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ವಿರುದ್ಧ 508 ಕೋಟಿ ರೂ. ಪಡೆದ ಆರೋಪ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ನಾನು ಭಾಗಿಯಾಗಿಲ್ಲ ಎಂದು ಬಾಘೇಲ್ ನಿರಾಕರಿಸಿದ್ದಾರೆ.

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...