Homeಕರ್ನಾಟಕನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ಒಕ್ಕಲಿಗರಿಗೆ ದೇಶದ್ರೋಹ ಪಟ್ಟ ಕಟ್ಟಲು ಸಂಘಪರಿವಾರ ಯತ್ನಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್‌ ಉದ್ದದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿರುವ ಸಂದರ್ಭದಲ್ಲಿ ನಕಲಿ ಇತಿಹಾಸದ ಉರಿಗೌಡ, ನಂಜೇಗೌಡ ಹೆಸರಿನಲ್ಲಿ ಮಹಾದ್ವಾರ ನಿರ್ಮಿಸಿರುವ ಸಂಘ ಪರಿವಾರ ನಗೆಪಾಟಲಿಗೀಡಾಗಿದೆ.

ಟಿಪ್ಪು ಹತ್ಯೆ ಮಾಡಿದ್ದು ಉರಿಗೌಡ, ನಂಜೇಗೌಡ ಎಂದು ವಾಟ್ಸ್‌ಅಪ್‌ನಲ್ಲಿ ಬಂದ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯದ ಹೆದ್ದಾರಿಯಲ್ಲಿ ಹಾಕಲಾಗಿರುವ ‘ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ’ವನ್ನು ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಕೈಯಲ್ಲಿ ಖಡ್ಗವಿಡಿದು ನಿಂತಿರುವ ತಮಿಳುನಾಡಿನ ವೀರರ ಚಿತ್ರವನ್ನೇ ಉರಿಗೌಡ, ನಂಜೇಗೌಡ ಎಂದು ಹರಿಬಿಟ್ಟಿರುವುದು ಈಗಾಗಲೇ ಬಯಲಾಗಿದೆ. ಆ ಚಿತ್ರಗಳನ್ನೇ ಇಲ್ಲಿನ ಮಹಾದ್ವಾರದಲ್ಲೂ ಹಾಕಿಕೊಳ್ಳಲಾಗಿದೆ.

ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಪ್ರಸಿದ್ಧರಾಗಿದ್ದರು ಎಂದು ಲಭ್ಯವಿರುವ ಮಾಹಿತಿಗಳು ಹೇಳುತ್ತವೆ. ಈ ಇಬ್ಬರು ಸಹೋದರರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಚಿತ್ರವನ್ನೇ ‘ಉರಿಗೌಡ, ನಂಜಗೌಡ’ ಎಂಬ ಕಾಲ್ಪನಿಕ ಕತೆಗೆ ಬಳಸಿಕೊಳ್ಳಲಾಗಿದೆ.

ಕವಿ ರಾಜೇಂದ್ರ ಪ್ರಸಾದ್ ಈ ಕುರಿತು ಪೋಸ್ಟ್ ಮಾಡಿದ್ದು, “ಪ್ರಧಾನಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ಪಕ್ಷವು ಕಪೋಲಕಲ್ಪಿತವಾದ ‘ ಉರಿಗೌಡ & ನಂಜೇಗೌಡ’ ಹೆಸರುಗಳಲ್ಲಿ ಹಾಕಿರುವ ಫ್ಲೆಕ್ಸ್ ಗಳನ್ನು ಕೂಡಲೇ ತೆರೆವು ಗೊಳಿಸಿ ಎಲ್ಲವೂ ಶಾಂತಿಯುತವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಸದರಿ ಫ್ಲೆಕ್ಸ್ ಬೋರ್ಡ್‌ನಲ್ಲಿ ಕೋಮು ಪ್ರಚೋದಿತ ಸುಳ್ಳು ಮತ್ತು ಅಶಾಂತಿ ಹರಡುವ ಉದ್ದೇಶಗಳು ಇರುವ ಕಾರಣ ಅದನ್ನ ಹಾಕಲು ಜಿಲ್ಲಾಡಳಿತವು ಅವಕಾಶ ನೀಡಬಾರದಿತ್ತು. ಸರ್ಕಾರದ ಸಾರ್ವಜನಿಕ ಕಾರ್ಯಕ್ರಮಗಳಲ್ಲೇ ಇಂತಹ ಕೋಮುವಾದಿ ಮತ್ತು ಸುಳ್ಳಿನ ಪೋಸ್ಟರ್ ಗಳನ್ನು ಬಳಸುವುದು, ಪ್ರಚಾರ ಮಾಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ತಾವು ಸಂಜೆಯೊಳಗೆ ಈ ವಿವಾದಾತ್ಮಕ ಫ್ಲೆಕ್ಸ್ ಬೋರ್ಡ್‌ಗಳನ್ನು ತೆರೆವುಗೊಳಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್, ಜೆಡಿಎಸ್, ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ರಾಜಕೀಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಇಂತಹ ಕೇಡಿನ ಕೆಲಸಗಳ ವಿರುದ್ದ ತೀವ್ರವಾದ ಪ್ರತಿಭಟನೆಯನ್ನ ನಾಳೆ ಹಮ್ಮಿಕೊಳ್ಳಲು ಕಾರಣವಾಗುತ್ತದೆ. ತಾವು ಇದಕ್ಕೆ ಅವಕಾಶ ಕೊಡದೇ ಯಾವುದೇ ಮುಲಾಜುಗಳಿಗೆ ಒಳಗಾಗದೇ ಸಕ್ಕರೆ ಕಾರ್ಖಾನೆ ವೃತ್ತದಲ್ಲಿರುವ (ಬಿ.ಜಿ ದಾಸೇಗೌಡ ವೃತ್ತ) ಫ್ಲೆಕ್ಸ್ ಬೋರ್ಡ್‌‌ಗಳನ್ನು ತೆರೆವು ಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಪ್ರತಿಕ್ರಿಯಿಸಿದ್ದು, “ಹಾಕಿರುವ ಫ್ಲೆಕ್ಸ್‌ಗಳನ್ನು ಕೂಡಲೇ ತೆರೆವುಗೊಳಿಸಿ ಜಿಲ್ಲೆಯನ್ನು ಕೋಮು ದಳ್ಳುರಿಗೆ ತಳ್ಳುವ ಬಿಜೆಪಿಯ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಡಳಿತವನ್ನು CPIM ಮಂಡ್ಯ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸಲಾಗುತ್ತಿದೆ. ಆ ಮೂಲಕ ಒಕ್ಕಲಿಗರನ್ನು ಬ್ರಿಟೀಷರ ಏಜೆಂಟರು ಎಂದು ಅವಮಾನಿಸುವ ಕೆಲಸವನ್ನು ಬಿಜೆಪಿ ಮತ್ತು ಸಂಘ ಪರಿವಾರ ಮಾಡುತ್ತಿದೆ. ಇದರ ಮುಂದವರಿಕೆಯಾಗಿ ಪ್ರಧಾನಿಯೊಬ್ಬರ ಬೇಟಿಯ ಘನತೆಯನ್ನೂ ಮಣ್ಣು ಪಾಲು ಮಾಡಿ ತನ್ನ ಸುಳ್ಳಿನ, ವಿಕೃತಿಯ ಪ್ರಚಾರದಲ್ಲಿ ಬಿಜೆಪಿ ನಿರತವಾಗಿದೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

ಲೇಖಕ ಚಂದ್ರಪ್ರಭ ಕಟಾರಿ ಪ್ರತಿಕ್ರಿಯಿಸಿದ್ದು, “ವಾಟ್ಸಪ್ ಯೂನಿವರ್ಸಿಟಿ ಹುಟ್ಟಿ(ಸಿ)ದ ಉರಿಗೌಡ ಮತ್ತು ನಂಜೇಗೌಡರು ಬ್ರಿಟಿಷರ ಪರವಾಗಿ ಯುದ್ಧ ಮಾಡಿದರು ಎಂಬ ಕಟ್ಟುಕತೆ ಈಗ ಅಕ್ಷರಶಃ ಬೀದಿಯಲ್ಲಿ ರಾರಾಜಿಸುತ್ತಿದೆ. ಸಂಘಿಗಳು ವ್ಯವಸ್ಥಿತವಾಗಿ ತಮ್ಮ ರಾಜಕೀಯ ಲಾಭಕ್ಕಾಗಿ ಇಂಥ ದೇಶದ್ರೋಹದ ಅಪವಾದವನ್ನು ಒಕ್ಕಲಿಗ ಸಮುದಾಯದ ಹಣೆಗೆ ಕಟ್ಟಲು ಪಣ ತೊಟ್ಟಂತಿದೆ. ಅಪಾರ ಕನ್ನಡಾಭಿಮಾನದ ಒಕ್ಕಲಿಗರು ಇದನ್ನು ಪ್ರತಿಭಟಿಸಿ, ಈ ಕಟ್ಟುಕತೆ ಮುಂದುವರೆಯದಂತೆ ನೋಡಿಕೊಳ್ಳುವ ಅನಿವಾರ್ಯತೆ ಈಗ ಅವರ ಹೆಗಲಿಗೇರಿದೆ. ಪಕ್ಷಾತೀತವಾಗಿ ಇದನ್ನು ಈಗಲೇ ಚಿವುಟಿ ಹಾಕದಿದ್ದರೆ, ಒಕ್ಕಲಿಗ ಸಮುದಾಯವು ಬ್ರಿಟಿಷರ ಪರವಾಗಿತ್ತು ಎಂಬ ಕಪೋಲಕಲ್ಪಿತ ಕತೆಯು ಮುಂದಿನ ಪೀಳಿಗೆಯ ಜನಮಾನಸದಲ್ಲಿ ಶಾಶ್ವತವಾಗಿ ಉಳಿದು, ದೇಶದ್ರೋಹದ ಪಟ್ಟದ ಅಪಾಯವಂತೂ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಸಿದ್ದಾರೆ.

ಪತ್ರಕರ್ತ ನವೀನ್ ಸೂರಿಂಜೆ ಅವರ ಪೋಸ್ಟ್‌ಅನ್ನು ಲೇಖಕ ನಾಗೇಗೌಡ ಕೀಲಾರ ಹಂಚಿಕೊಂಡಿದ್ದಾರೆ. “ಮಂಡ್ಯ ಎನ್ನುವುದು ಸ್ವಾತಂತ್ರ್ಯ ಚಳವಳಿಯಲ್ಲಿ ದೊಡ್ಡ ಹೆಸರು. ಬ್ರಿಟೀಷರ ಎದೆ ನಡುಗಿಸಿದ ಸ್ವಾತಂತ್ರ್ಯ ಚಳವಳಿ ಈ ನೆಲದಲ್ಲಿ ನಡೆದಿತ್ತು. ಇಂತಹ ಮಂಡ್ಯಕ್ಕೆ ಈ ದೇಶದ ಪ್ರಧಾನಿ ಆಗಮಿಸುವಾಗ ಸ್ವಾಗತ ದ್ವಾರ ನಿರ್ಮಿಸಲು ಒಬ್ಬ ಅಸಲೀ ಸ್ವಾತಂತ್ರ್ಯ ಹೋರಾಟಗಾರನ ಹೆಸರು ನೆನಪಿಗೆ ಬರಲಿಲ್ಲವೇ ? ಪ್ರಧಾನಿ ಬಿಜೆಪಿಯೇ ಆಗಲಿ, ಸುಳ್ಳುಕೋರನೇ ಆಗಲೀ. ಅವರು ಜಿಲ್ಲೆಗೆ ಬಂದಿದ್ದರು ಎಂಬುದು ಇತಿಹಾಸದ ಪುಟದಲ್ಲಿ ಉಳಿಯುತ್ತದೆ. ಅಂತಹ ಇತಿಹಾಸದ ಪುಟದಲ್ಲಿ ಒಕ್ಕಲಿಗರ ಅವಹೇಳನ ಸೇರ್ಪಡೆಗೊಳ್ಳುವುದು ಸರಿಯೇ?” ಎಂದು ಸೂರಿಂಜೆ ಪ್ರಶ್ನಿಸಿದ್ದಾರೆ.

ಹೋರಾಟಗಾರರು ಹಾಗೂ ವೈದ್ಯರೂ ಆದ ಎಚ್.ವಿ.ವಾಸು ಅವರು ಪ್ರತಿಕ್ರಿಯಿಸಿ, “ಇದು ಮಂಡ್ಯ ಜಿಲ್ಲೆಗೆ ಮಾಡುತ್ತಿರುವ ಅವಮಾನವೆಂಬುದರಲ್ಲಿ ಸಂದೇಹವಿಲ್ಲ. ಮಂಡ್ಯದ ಕುರಿತು ಹೊರಗೆ ಹಲವು ಪೂರ್ವಗ್ರಹಗಳಿವೆ. ಅವರು ತೀರಾ ‘Mandya centred’, ಜಾತಿ ಕೇಂದ್ರಿತ ಮನೋಭಾವ ಇರುವವರು, ಮಂಡ್ಯ ಕುರಿತಂತೆ ದುರಭಿಮಾನ ಹೊಂದಿರುವವರು ಇತ್ಯಾದಿ. ಮಂಡ್ಯದ ಜೊತೆ ಕಳೆದ 23 ವರ್ಷಗಳ ಒಡನಾಟ, 12 ವರ್ಷಗಳ ಕಾಲ ಅಲ್ಲಿಯೇ ವಾಸ ಮಾಡಿದ್ದುದರ ಆಧಾರದ ಮೇಲೆ ಹೇಳುವುದಾದರೆ ಅವೆಲ್ಲವೂ ಸುಳ್ಳು… ಒಂದು ಸಹಜ ವಿಶಾಲ ಮನೋಭಾವ, ನೆಲಮೂಲದ ವಿವೇಕವನ್ನು ಹೊಂದಿರುವ ಸಮುದಾಯ ಅಲ್ಲಿದೆ. (ಎಲ್ಲಾ ಕಡೆ ಇರುವ ಸಮಸ್ಯೆಗಳು, ಕೆಡುಕು ಅಲ್ಲೂ ಇದೆ; ಇರುತ್ತದೆ)” ಎಂದು ವಿವರಿಸಿದ್ದಾರೆ.

“ಯಾವ ಸಂದೇಹವೂ ಇಲ್ಲದೇ ಹೇಳಬಹುದಾದ ಸಂಗತಿಯೆಂದರೆ – ಇಂದು ಮಂಡ್ಯದಲ್ಲಿ ದ್ವಾರದಲ್ಲಿ ಹೆಸರಿಸಲಾಗಿರುವ ಎರಡು ಫೇಕ್ ಪಾತ್ರಗಳು ಒಕ್ಕಲಿಗ ಸಮುದಾಯಕ್ಕೂ, ಮಂಡ್ಯಕ್ಕೂ ದೊಡ್ಡ ಅವಮಾನವಲ್ಲದೇ ಬೇರೇನೂ ಅಲ್ಲ. ಇಂದಿಗೂ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಡಾ.ಸಿ.ಬಂದೀಗೌಡರು, ನಮ್ಮೆಲ್ಲರನ್ನು ಪೊರೆದ ಹಿರಿಯ ಜೀವ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಸಂಸದ ಹಿರಿಯ ನಾಯಕ ನಾರಾಯಣ್ ಇಂಥವರನ್ನು ನೆನೆದರೇನೇ ಮನಸ್ಸಿನಲ್ಲಿ ಗೌರವ, ಪ್ರೀತಿ ಉಕ್ಕುತ್ತದೆ. ಹಾಗೆಯೇ ನಾವು ದಾರಿ ತಪ್ಪಬಾರದು ಎಂಬ ಎಚ್ಚರ ಮೂಡುತ್ತದೆ. ಅವರಂಥವರ ಸಹವಾಸದಲ್ಲಿ ಒಂದೆರಡು ದಶಕಗಳ ಕಾಲ ಇದ್ದ ನಾವುಗಳು ಮಂಡ್ಯಕ್ಕೆ ಈ ಅವಮಾನ ಆಗದಂತೆ ನೋಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ” ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...