Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಬಿಹಾರದ ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಮೈತ್ರಿಕೂಟವು ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳವಾರ (ಅ.28) ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಸೇರಿದಂತೆ ಭರಪೂರ ಭರವಸೆಗಳನ್ನು ನೀಡಿದೆ.

ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳಾಗಿವೆ.

ಹಳೆಯ ಪಿಂಚಣಿ ಯೋಜನೆಯ (ಒಪಿಎಸ್‌) ಅನುಷ್ಠಾನದ ಭರವಸೆಯನ್ನು ಕೂಡ ಪ್ರಣಾಳಿಕೆ ನೀಡಿದೆ.

ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಲ್ಲೇ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ವಿಕಾಸ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಮಹಾ ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೊಷಣೆ ಮಾಡಲಾಗಿದೆ.

ಬಿಹಾರದ ಆಡಳಿತಾರೂಢ ಎನ್‌ಡಿಎ ಅಕ್ಟೋಬರ್ 30 ರಂದು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಅಥವಾ ಇಂಡಿಯಾ ಒಕ್ಕೂಟದ ಪ್ರಣಾಳಿಕೆಯ ಮುಖ್ಯಾಂಶಗಳು ಹೀಗಿವೆ.

  • ಸರ್ಕಾರ ರಚನೆಯಾದ 20 ದಿನಗಳಲ್ಲಿ, ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಸಿಗುವಂತೆ ಕಾನೂನು ರೂಪಿಸುವುದು, ಮುಂದಿನ 20 ತಿಂಗಳೊಳಗೆ ಉದ್ಯೋಗ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.
  • ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ 5 ವರ್ಷಗಳಲ್ಲಿ 3 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು. ಇದರಲ್ಲಿ 1 ವರ್ಷದೊಳಗೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದೆ.
  • ರಾಜ್ಯದ ನಗರ ಪ್ರದೇಶದ ಯುವಕರಿಗೆ ಉದ್ಯೋಗಾವಕಾಶಗಳಿಗಾಗಿ ‘ಬಿಹಾರ ಉದ್ಯೋಗ ಖಾತರಿ ಮಿಷನ್’ ಮತ್ತು ಪದವೀಧರರು ಮತ್ತು ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ.
  • ‘ಮಾಯಿ-ಬಹಿನಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ 2,500 ರೂಪಾಯಿ ಮಾಸಿಕ ಆರ್ಥಿಕ ಸಹಾಯ
  • ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ
  • ಗ್ರಾಮೀಣ ಮಹಿಳಾ ಉತ್ಪಾದಕರನ್ನು ಬೆಂಬಲಿಸಲು ರಾಜ್ಯದ ಮದ್ಯ ನಿಷೇಧ ಕಾನೂನಿನಿಂದ ‘ಟೋಡಿ’ಗೆ (ತಾರಿ, ಸಾಂಪ್ರದಾಯಿಕ ತಾಳೆ ಮದ್ಯ) ವಿನಾಯಿತಿ
  • ಬಡ ಮತ್ತು ಮಧ್ಯಮ ವರ್ಗದ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್
  • ಸಂಪೂರ್ಣ ಕೃಷಿ ಸಾಲ ಮನ್ನಾ
  • ಎಲ್ಲಾ ಬೆಳೆಗಳಿಗೆ ಇನ್ಪುಟ್ ವೆಚ್ಚಗಳು + 50 ಶೇಕಡ ಲಾಭವನ್ನು ಒಳಗೊಂಡ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗ್ಯಾರಂಟಿ
  • ಪ್ರತಿ ಭೂಹೀನ ಕುಟುಂಬಕ್ಕೆ 5 ದಶಮಾಂಶ ಭೂಮಿ (ಸುಮಾರು 1/20 ಎಕರೆ)
  • ಶಿಶುವಿಹಾರದಿಂದ ಪದವಿ ವರೆಗೆ ಉಚಿತ ಶಿಕ್ಷಣ.
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಪುನಃಸ್ಥಾಪನೆ
  • ಜಾತಿ ಆಧಾರಿತ ಜನಗಣತಿ ಮತ್ತು ಹೊಸ ದತ್ತಾಂಶಗಳ ಆಧಾರದ ಮೇಲೆ ಮೀಸಲಾತಿ ಕೋಟಾಗಳ ಪರಿಶೀಲನೆ
  • ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ವರ್ಗಕ್ಕೆ ಇನ್ನು ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಮೀಸಲಾತಿ ಮೇಲಿನ ಶೇಕಡ 50ರ ಮಿತಿಯನ್ನು ತೆಗೆದುಹಾಕುವುದು.
  • ಎಲ್ಲಾ ಕುಟುಂಬಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ
  • ಹಸಿರು ಬಿಹಾರ ಮಿಷನ್ ಅಡಿ ಅರಣ್ಯೀಕರಣ, ವಿಸ್ತೃತ ನೀರಾವರಿ, ನವೀಕರಿಸಬಹುದಾದ ಇಂಧನ ಯೋಜನೆಗಳು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ವಲಸೆಯನ್ನು ತಡೆಯಲು ಹೊಸ ಕೈಗಾರಿಕಾ ಕಾರಿಡಾರ್‌ಗಳು
  • ಬಿಹಾರವನ್ನು ‘ಅಪರಾಧ ಮುಕ್ತ’ ಗೊಳಿಸಲು ವರ್ಧಿತ ಪೊಲೀಸ್ ವ್ಯವಸ್ಥೆ ಮತ್ತು ಕೋಮು ವಿರೋಧಿ ಉಪಕ್ರಮಗಳು ಸೇರಿದಂತೆ ಕಠಿಣ ಅಪರಾಧ ವಿರೋಧಿ ಕ್ರಮಗಳ ಜಾರಿ
  • ವಕ್ಫ್ ತಿದ್ದುಪಡಿ ಕಾಯ್ದೆಯು ರಾಜ್ಯದ ಹಕ್ಕುಗಳನ್ನು ಅತಿಕ್ರಮಿಸಿದರೆ ಅದನ್ನು ರದ್ದುಗೊಳಿಸುವುದು
  • ಯುವಜನರ ವಲಸೆ ನಿಲ್ಲಿಸಲು ಮತ್ತು ‘ಬಿಹಾರದ ಸ್ವಾಭಿಮಾನ’ವನ್ನು ಪುನಃಸ್ಥಾಪಿಸಲು ಕೈಗಾರಿಕೆಗಳಿಗೆ ಪ್ರೋತ್ಸಾಹ.

ಎರಡು ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್ ಕಿಶೋರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...