Homeಮುಖಪುಟ'ಮಹಾಲಕ್ಷಿ ಮತ್ತು ಮೆಟ್ರೋ': ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

- Advertisement -
- Advertisement -

ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ ‘ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)’ ಕಂಪನಿ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ಹೆಚ್ಚಾದಂತೆ ಕಾಣುತ್ತಿದೆ.

“ಎಲ್‌ & ಟಿ ಹೈದರಾಬಾದ್ ಮೆಟ್ರೋ ನಿರ್ವಹಣೆಯಿಂದ ಹೊರ ಹೋಗಬಹುದು” ಎಂದು ಹೇಳುವ ಮೂಲಕ ಸಿಎಂ ರೇವಂತ್ ರೆಡ್ಡಿ ಕಂಪನಿ ವಿರುದ್ದ ಕಠಿಣ ನಿಲುವು ತಾಳುವ ಸೂಚನೆ ನೀಡಿದ್ದಾರೆ.

ಕರ್ನಾಟಕದ ‘ಶಕ್ತಿ’ ಯೋಜನೆಯಂತೆ ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಟಿಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ‘ಮಹಾಲಕ್ಷಿ’ ಯೋಜನೆಯನ್ನು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಿಂದ ಮೆಟ್ರೋ ಆದಾಯದ ಮೇಲೆ ಹೊಡೆತ ಬಿದ್ದಿದೆ. ‘ಮಹಾಲಕ್ಷ್ಮಿ’ ಯೋಜನೆ ಜಾರಿಗೆ ಬಂದ ನಂತರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದೈನಂದಿನ ಪ್ರಯಾಣಿಕರ ಸಂಖ್ಯೆ ನವೆಂಬರ್ 2023ರಲ್ಲಿ 5,50,000 ರಿಂದ 4,80,000ಕ್ಕೆ ಇಳಿದಿದೆ ಎಂದು ಎಲ್‌&ಟಿ ಆರೋಪಿಸಿದೆ. ಯೋಜನೆಯನ್ನು ಮಾರಾಟ ಮಾಡುತ್ತೇವೆ ಎಂದಿದೆ.

ಎಲ್‌&ಟಿ ವಿರುದ್ದ ಗುಡುಗಿದ ಸಿಎಂ ರೇವಂತ್ ರೆಡ್ಡಿ

ಮೇಡಿಗಡ್ಡ ಬ್ಯಾರೇಜ್‌ ವಿಷಯ ಪ್ರಸ್ತಾಪಿಸುವ ಮೂಲಕ ಸರ್ಕಾರದ ಯೋಜನೆಯನ್ನು ಟೀಕಿಸಿರುವ ಎಲ್‌&ಟಿ ಕಂಪನಿ ವಿರುದ್ದ ಸಿಎಂ ರೇವಂತ್ ರೆಡ್ಡಿ ಗುಡುಗಿದ್ದಾರೆ. ರಾಜ್ಯ ಸರ್ಕಾರದ ಬಹುದೊಡ್ಡ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾದ ಮೇಡಿಗಡ್ಡ ಬ್ಯಾರೇಜ್‌, ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮುಳುಗಡೆಯಾಗಿತ್ತು. ಅದರೆ ದುರಸ್ಥಿಗೆ ಗುತ್ತಿಗೆ ಕಂಪನಿ ಎಲ್‌&ಟಿ ನಿರಾಕರಿಸಿದ್ದು, ಇದರ ವಿರುದ್ದ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿ, “ಎಲ್‌&ಟಿ ಹೈದರಾಬಾದ್ ಮೆಟ್ರೋದಿಂದ ನಿರ್ಗಮಿಸಲು ಬಯಸಿರುವುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆಯೇ ಹೊರತು, ಕಾರ್ಪೋರೇಟ್ ಕಂಪನಿಗಾಗಿ ಅಲ್ಲ. ಎಲ್‌&ಟಿ ಹೊರ ಹೋಗಲು ಬಯಸಿದರೆ ಹೋಗಲಿ, ಹಾಗೆಯೇ ಮಾಡುವುದು ಸ್ವಾಗತಾರ್ಹ” ಎಂದಿದ್ದಾರೆ.

“ಎಲ್‌&ಟಿ ಹೊರ ಹೋದರೆ ಮೆಟ್ರೋ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಇನ್ನೊಬ್ಬರನ್ನು ಹುಡುಕಲಿದೆ. ನಾನು ಮೆಟ್ರೋ ಯೋಜನೆಯ ವಿರೋಧಿಯಲ್ಲ. ಸಾರ್ವಜನಿಕ ಸಾರಿಗೆಯಾಗಿರುವ ಮೆಟ್ರೋವನ್ನು ಎಲ್‌&ಟಿ ಅಲ್ಲದಿದ್ದರೆ ಇನ್ನೊಬ್ಬರು ನಿರ್ವಹಿಸಬಹುದು” ಎಂದು ಸಿಎಂ ಹೇಳಿದ್ದಾರೆ.

“ಕಾರ್ಪೊರೇಟ್‌ ಕಂಪನಿಗಳು ನೋಡುವಂತೆ ಸರ್ಕಾರಗಳು ಬ್ಯಾಲೆನ್ಸ್ ಶೀಟ್‌ಗಳನ್ನು ನೋಡುವುದಿಲ್ಲ. ಸರ್ಕಾರ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ, ಕಾರ್ಪೊರೇಟ್‌ಗಳಂತೆ ಲಾಭದ ಉದ್ದೇಶವಿಲ್ಲ” ಎಂದಿದ್ದಾರೆ.

ಸರ್ಕಾರಗಳು ಮಾಲಿನ್ಯವನ್ನುಂಟುಮಾಡುವ ಬಸ್‌ಗಳ ಪ್ರಯಾಣವನ್ನು ಉತ್ತೇಜಿಸುವ ನೀತಿಗಳನ್ನು ಅಳವಡಿಸಿಕೊಳ್ಳುವುದಕ್ಕಿಂತ, ಶೂನ್ಯ ಮಾಲಿನ್ಯ ಸಾರಿಗೆ ವ್ಯವಸ್ಥೆಗೆ ಬದಲಾಗಬೇಕು ಎಂಬ ಹೈದರಾಬಾದ್ ಮೆಟ್ರೋ ರೈಲಿನ ಮುಖ್ಯ ಹಣಕಾಸು ಅಧಿಕಾರಿ ಆರ್ ಶಂಕರ್ ರಾಮನ್ ಅವರ ಸಲಹೆ ಸಿಎಂ ರೇವಂತ್ ರೆಡ್ಡಿಯನ್ನು ಕೆರಳಿಸಿದೆ.

ಇತ್ತೀಚೆಗಷ್ಟೇ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಾಲಕ್ಷ್ಮಿ ಯೋಜನೆಯನ್ನು ಟೀಕಿಸಿದ್ದರು. “ಚುನಾವಣಾ ಭರವಸೆಯನ್ನು ಈಡೇರಿಸಲು ಸರ್ಕಾರವು ಸಾರ್ವಜನಿಕ ಸಾರಿಗೆ ಸೌಲಭ್ಯದಿಂದ (ಮೆಟ್ರೋ) ಶೇಕಡಾ 50 ರಷ್ಟು ಪ್ರಯಾಣಿಕರನ್ನು ಕೆಳಗಿಳಿಸುವುದು ಸರಿಯಲ್ಲ. ಇಂತಹ ಕ್ರಮಗಳು ರಾಜ್ಯದ ಬೊಕ್ಕಸವನ್ನು ಹೇಗೆ ಖಾಲಿ ಮಾಡುತ್ತದೆ ಮತ್ತು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದನ್ನು ತೋರಿಸುತ್ತದೆ” ಎಂದಿದ್ದರು.

ನವೆಂಬರ್ 28,2017 ರಂದು ಮಿಯಾಪುರ್‌ನಿಂದ ನಾಗೋಲ್‌ವರೆಗಿನ 30 ಕಿ.ಮೀ ದೂರದ ಹೈದರಾಬಾದ್ ಮೆಟ್ರೋ ರೈಲನ್ನು ಉದ್ಘಾಟಿಸಿದ ನರೇಂದ್ರ ಮೋದಿಯವರು, ಆಗಿನ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಮತ್ತು ಆಗಿನ ರಾಜ್ಯಪಾಲರಾದ ಇಎಸ್ಎಲ್ ನರಸಿಂಹನ್ ಅವರೊಂದಿಗೆ ಮೊದಲ ಸವಾರಿ ಮಾಡಿದ್ದರು. ಅಂದಿನಿಂದ ಹೈದರಾಬಾದ್ ಮೆಟ್ರೋ ರೈಲು ವೆಚ್ಚ-ಪರಿಣಾಮಕಾರಿ ಮತ್ತು ಸಮಯವನ್ನು ಉಳಿಸುವ ಮೂಲಕ ಅತ್ಯಂತ ಜನಪ್ರಿಯ ಸಾರಿಗೆ ಸಾಧನವಾಗಿದೆ.

ಹೈದರಾಬಾದ್‌ ಮೆಟ್ರೋ ರೈಲು 2021ರಲ್ಲಿ ನಷ್ಟ ಅನುಭವಿಸಿದ ಬಗ್ಗೆ ಹೇಳಿತ್ತು. ಆ ಬಳಿಕ ಎಲ್‌&ಟಿ ಕೂಡ ಈ ಬಗ್ಗೆ ಧ್ವನಿಯೆತ್ತಿತ್ತು. ಹಾಗಾಗಿ, ಆಗಿನ ಸಿಎಂ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ಮೆಟ್ರೋ ರೈಲನ್ನು ನಷ್ಟದಿಂದ ಹೊರ ತರಲು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸಲು ಸಮಿತಿಯನ್ನು ರಚಿಸಿದ್ದರು.

ಜೂನ್ 2023ರಲ್ಲಿ, ತೆಲಂಗಾಣ ಸರ್ಕಾರ ಹೈದರಾಬಾದ್ ಮೆಟ್ರೋ ರೈಲಿಗೆ ರೂ.100 ಕೋಟಿ ಬಡ್ಡಿ ರಹಿತ ಸಾಲ ನೀಡಿತ್ತು. ಕಂಪನಿಯ ಕಾರ್ಯಾಚರಣೆಯ 16ನೇ ವರ್ಷದಲ್ಲಿ ಈ ಸಾಲವನ್ನು ಮರುಪಾವತಿಸಬೇಕಾಗಿತ್ತು ಮತ್ತು 2021-22 ರಲ್ಲಿ 1,745 ಕೋಟಿಗಳಿಂದ 2022-23 ರಲ್ಲಿ ₹ 1,315 ಕೋಟಿಗೆ ನಷ್ಟವನ್ನು ಕಡಿಮೆ ಮಾಡಲು ಸಾಲವನ್ನು ಬಳಸಬೇಕಿತ್ತು.

ಮೂಲಗಳ ಪ್ರಕಾರ, ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (ಎನ್‌ಡಿಎಸ್‌ಎ) ಸೂಚಿಸಿದಂತೆ ಮೇಡಿಗಡ್ಡ ಬ್ಯಾರೇಜ್‌ ಅನ್ನು ತನ್ನ ಸ್ವಂತ ವೆಚ್ಚದಲ್ಲಿ ದುರಸ್ತಿ ಮಾಡಲು ರಾಜ್ಯ ಸರ್ಕಾರವು ಎಲ್ & ಟಿಗೆ ಸೂಚಿಸಿದೆ. ಒಂದು ವೇಳೆ ಎಲ್‌&ಟಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳದಿದ್ದಲ್ಲಿ ದುರಸ್ತಿಗೆ ತಗುಲುವ ಸಂಪೂರ್ಣ ವೆಚ್ಚವನ್ನು ವಸೂಲಿ ಮಾಡಲು ಸರ್ಕಾರ ಚಿಂತಿಸುತ್ತಿದೆ. ಸಿಎಂ ರೇವಂತ್ ರೆಡ್ಡಿ ಅವರು ಎಲ್ & ಟಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...