Homeಕರ್ನಾಟಕಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಜೆಡಿಎಸ್ ಲಿಂಗಾಯತ ಅಭ್ಯರ್ಥಿಯನ್ನು, ಕಾಂಗ್ರೆಸ್ ಕುರುಬ ಸಮುದಾಯದ ಶಿವರಾಜ್‌ರನ್ನು ಕಣಕ್ಕಿಳಿಸಿರೋದರಿಂದ, ಒಕ್ಕಲಿಗ ಮತಗಳು ಸಾರಾಸಗಟಾಗಿ ಗೋಪಾಲಯ್ಯನತ್ತ ತಿರುಗಲು ಯಾವ ಅಡ್ಡಿಯೂ ಇಲ್ಲ.

- Advertisement -
- Advertisement -

ಎತ್ತಿಂದೆತ್ತ ಲೆಕ್ಕ ಹಾಕಿದರೂ ಮಹಾಲಕ್ಷ್ಮಿ ಲೇಔಟ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯನ ಗೆಲುವಿಗೆ ಯಾವ ಆತಂಕಗಳೂ ಕಾಣುತ್ತಿಲ್ಲ. ಹದಿನೈದೂ ಕ್ಷೇತ್ರಗಳಲ್ಲಿ ಅನರ್ಹ ಶಾಸಕರನ್ನು ಸೋಲಿಸೋದೆ ನನ್ನ ಗುರಿ ಅಂತ ಗುಡುಗಿದ್ದ ಜೆಡಿಎಸ್‌ನ ಎಚ್‌.ಡಿ ಕುಮಾರಸ್ವಾಮಿ, ಮೊದಮೊದಲು ಕೆ.ಗೋಪಾಲಯ್ಯನನ್ನು ಸೋಲಿಸುವ ಪಣ ತೊಟ್ಟವರಂತೆಯೇ ಅಖಾಡಕ್ಕಿಳಿದಿದ್ದುಂಟು. ಲಿಂಗಾಯತರು ಮತ್ತು ಒಬಿಸಿ ಜಾತಿಗಳ ಮಿಶ್ರಣವೂ ಇದೆಯೆಂಬಂತೆ ಕಂಡುಬಂದರು ಒಕ್ಕಲಿಗ ಮತಗಳೇ ಇಲ್ಲಿ ನಿರ್ಣಾಯಕ. ಹಾಗಾಗಿ ಕುಮಾರಸ್ವಾಮಿ ಅಬ್ಬರಿಸಿದ್ದನ್ನು ಕಂಡವರು ಗೋಪಾಲಯ್ಯನ ಗೆಲುವು ಸುಲಭವಿಲ್ಲ ಅಂತಲೇ ಆರಂಭಿಕ ತರ್ಕ ಶುರುಹಚ್ಚಿಕೊಂಡಿದ್ದರು. ಆದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನ ಘೋಷಿಸಿದ ತರುವಾಯ ಆ ತರ್ಕಗಳೆಲ್ಲ ದಂಗಾಗಿಹೋಗಿವೆ! ಸ್ವತಃ ಜೆಡಿಎಸ್ ಕಾರ್ಯಕರ್ತರೇ ದಿಗ್ಭ್ರಾಂತರಾಗಿದ್ದಾರೆ.

ಚಾರ್ಟರ್ಡ್‌ ಅಕೌಂಟೆಂಟ್ ಡಾ. ಗಿರೀಶ್ ನಾಶಿ ಎಂಬ ಆಮದು ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ಗೋಪಾಲಯ್ಯನ ಗೆಲುವಿನ ಹಾದಿಯನ್ನು ಸುಗಮ ಮಾಡಿಕೊಟ್ಟಂತೆ ಕಾಣುತ್ತೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಪ್ರಯತ್ನಿಸಿದ್ದ ನಾಶಿ, ನಿನ್ನೆ ಮೊನ್ನೆಯವರೆಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಾಳೆಯದಲ್ಲೇ ಗುರುತಿಸಿಕೊಂಡಿದ್ದವರು. ಯಾವಾಗ ಸಿದ್ದರಾಮಯ್ಯನವರು ತನ್ನ ಕುಲಸ್ಥ, ಶಂಕರಮಠ ವಾರ್ಡ್ ಕಾರ್ಪೊರೇಟರ್ ಎಂ.ಶಿವರಾಜುಗೆ ಉಪಚುನಾವಣೆಯ ಟಿಕೆಟ್ ಕೊಡಿಸಲು ಒಲವು ತೋರಿದರೊ, ಆನಂತರವೇ ಡಾ.ನಾಶಿ ಜೆಡಿಎಸ್ ಅಂಗಳಕ್ಕೆ ಬಂದು ನಿಂತದ್ದು. ಹಾಗಾಗಿ ಜೆಡಿಎಸ್‌ನೊಳಗೆ ಹಿಂಬಾಲಕರ ಯಾವ ಬಲವೂ ನಾಶಿಗಿಲ್ಲ. ಅವರು ಜಾತಿಯಲ್ಲಿ ಲಿಂಗಾಯತರಾದರು, ಲಿಂಗಾಯತ ಮತಗಳು ಯಡ್ಯೂರಪ್ಪನವರ ಕಾರಣಕ್ಕೆ ಬಿಜೆಪಿಯತ್ತ ವಾಲುವವೇ ವಿನಾಃ ನಾಶಿಯತ್ತ ತಿರುಗಲಾರವು.

ಹಾಗೆ ನೋಡಿದರೆ, ಇಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಲು ಕೊರತೆಯೇನು ಇರಲಿಲ್ಲ. ಜೆಡಿಎಸ್‌ನ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದ, ಸ್ಥಳೀಯ ಆರ್.ವಿ.ಹರೀಶ್ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಜಾತಿಯಿಂದ ನಾಯ್ಡು ಆದರು ಹರೀಶ್‌ಗೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ರಾಜಕೀಯ ಬೇರುಗಳಿವೆ. 2008ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಗೊಂಡು ಕೇಸರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹರೀಶ್ 39,427 ಮತ ಪಡೆದಿದ್ದರು. ಕಾಂಗ್ರೆಸ್‌ನ ನೆ.ಲ.ನರೇಂದ್ರ ಬಾಬು ಗೆದ್ದ ಆ ಚುನಾವಣೆಯಲ್ಲಿ ಗೋಪಾಲಯ್ಯ ಗಳಿಸಿದ್ದು ಕೇವಲ 28,097 ಮತಗಳನ್ನಷ್ಟೆ. ಆ ನಂತರ ಜೆಡಿಎಸ್ ಸೇರಿದ್ದ ಹರೀಶ್ ಈಗ ಟಿಕೆಟ್ ತನ್ನ ಕೈತಪ್ಪಿ ನಾಶಿಗೆ ಒಲಿದಿದ್ದರಿಂದ ಮುನಿಸಿಕೊಂಡು ಜೆಡಿಎಸ್ ಸದಸ್ಯತ್ವಕ್ಕೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ಇನ್ನು ನಾಗಪುರ ವಾರ್ಡ್‌ನ ಬಿಬಿಎಂಪಿ ಕಾರ್ಪೊರೇಟರ್ ಭದ್ರೇಗೌಡ ಕೂಡಾ ಜೆಡಿಎಸ್ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಅವರನ್ನಾದರು ಅಖಾಡಕ್ಕಿಳಿಸಿದ್ದರೆ ಒಕ್ಕಲಿಗ ಓಟ್‌ಬೇಸ್ ಆಧಾರದಲ್ಲಿ ಗೋಪಾಲಯ್ಯನಿಗೆ ಪ್ರತಿಸ್ಪರ್ಧೆ ಒಡ್ಡುವ ಅವಕಾಶ ಜೆಡಿಎಸ್‌ಗೆ ಇರುತ್ತಿತ್ತು. ಆದರೆ ಇಂತಹ ಅವಕಾಶಗಳನ್ನೆಲ್ಲ ಹಠಾತ್ತನೆ ಕೈಚೆಲ್ಲಿ, ಸದ್ಯದ ಮಟ್ಟಿಗೆ ಗೋಪಾಲಯ್ಯನೆದುರು ಪೇಲವದಂತೆ ಕಾಣುವ ನಾಶಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ವರಿಷ್ಠರ ಲೆಕ್ಕಾಚಾರಗಳನ್ನೇ ಗುಮಾನಿಯಿಂದ ನೋಡುವಂತಾಗಿದೆ. ಡಾ.ನಾಶಿ ಚುನಾವಣೆಯಿಂದಲೇ ಹಿಂದೆ ಸರಿದಿದ್ದಾರೆ ಎಂಬ ವದಂತಿಯೂ ಕ್ಷೇತ್ರದಲ್ಲಿ ಹಬ್ಬಿತ್ತು. ಕೊನೆಗೆ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿಯೇ ನಾಶಿಯನ್ನು ಕೂರಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ಘೋಷಿಸಬೇಕಾಯ್ತು. ಹಾಗಿದೆ ಜೆಡಿಎಸ್ ಅಭ್ಯರ್ಥಿಯ ಪರಿಸ್ಥಿತಿ ಇಲ್ಲಿ.

ಜೆಡಿಎಸ್ ಲಿಂಗಾಯತ ಅಭ್ಯರ್ಥಿಯನ್ನು, ಕಾಂಗ್ರೆಸ್ ಕುರುಬ ಸಮುದಾಯದ ಶಿವರಾಜ್‌ರನ್ನು ಕಣಕ್ಕಿಳಿಸಿರೋದರಿಂದ, ಒಕ್ಕಲಿಗ ಮತಗಳು ಸಾರಾಸಗಟಾಗಿ ಗೋಪಾಲಯ್ಯನತ್ತ ತಿರುಗಲು ಯಾವ ಅಡ್ಡಿಯೂ ಇಲ್ಲ. ಇನ್ನು ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡಿದ್ದ ಮಾಜಿ ಉಪಮೇಯರ್ ಎಸ್.ಹರೀಶ್ ಕೊಂಚ ಮೆತ್ತಗಾಗಿರೋದು ಗೋಪಾಲಯ್ಯನ ಪಾಲಿಗೆ ಪ್ಲಸ್ ಪಾಯಿಂಟ್.

ಏಳು ವಾರ್ಡ್ಗಳ ಪೈಕಿ ನಾಲ್ಕರಲ್ಲಿ ಜೆಡಿಎಸ್ ಕಾರ್ಪೊರೇಟರುಗಳಿದ್ದರೆ, ಎರಡರಲ್ಲಿ ಕಾಂಗ್ರೆಸ್ ಮತ್ತು ಒಂದರಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡಿದ್ದವು. ಗೋಪಾಲಯ್ಯನ ಮಡದಿ, ವೃಷಭಾವತಿನಗರ ವಾರ್ಡ್ ಪ್ರತಿನಿಧಿಸುವ ಹೇಮಲತಾ ಮತ್ತು ಮಾರಪ್ಪನ ಪಾಳ್ಯದ ಎಂ.ಮಹಾದೇವರನ್ನು ಈಗಾಗಲೇ ಜೆಡಿಎಸ್ ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟಿಸಿದೆ. ಅವರಿಬ್ಬರಲ್ಲದೆ ಜೆಡಿಎಸ್ ಟಿಕೆಟ್ ಕೈತಪ್ಪಿದ ನಾಗಪುರ ವಾರ್ಡ್‌ನ ಕಾರ್ಪೊರೇಟರ್ ಭದ್ರೇಗೌಡ ಕೂಡಾ ತಟಸ್ಥವಾಗುಳಿಯುವ ಸಾಧ್ಯತೆಗಳಿವೆ. ಇನ್ನು ಕಾಂಗ್ರೆಸ್‌ಗೆ ಇಲ್ಲಿ ವಿಪರೀತ ನಿರೀಕ್ಷೆಗಳೇನು ಇದ್ದಂತಿ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...