Homeಕರ್ನಾಟಕಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಜೆಡಿಎಸ್ ಲಿಂಗಾಯತ ಅಭ್ಯರ್ಥಿಯನ್ನು, ಕಾಂಗ್ರೆಸ್ ಕುರುಬ ಸಮುದಾಯದ ಶಿವರಾಜ್‌ರನ್ನು ಕಣಕ್ಕಿಳಿಸಿರೋದರಿಂದ, ಒಕ್ಕಲಿಗ ಮತಗಳು ಸಾರಾಸಗಟಾಗಿ ಗೋಪಾಲಯ್ಯನತ್ತ ತಿರುಗಲು ಯಾವ ಅಡ್ಡಿಯೂ ಇಲ್ಲ.

- Advertisement -
- Advertisement -

ಎತ್ತಿಂದೆತ್ತ ಲೆಕ್ಕ ಹಾಕಿದರೂ ಮಹಾಲಕ್ಷ್ಮಿ ಲೇಔಟ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯನ ಗೆಲುವಿಗೆ ಯಾವ ಆತಂಕಗಳೂ ಕಾಣುತ್ತಿಲ್ಲ. ಹದಿನೈದೂ ಕ್ಷೇತ್ರಗಳಲ್ಲಿ ಅನರ್ಹ ಶಾಸಕರನ್ನು ಸೋಲಿಸೋದೆ ನನ್ನ ಗುರಿ ಅಂತ ಗುಡುಗಿದ್ದ ಜೆಡಿಎಸ್‌ನ ಎಚ್‌.ಡಿ ಕುಮಾರಸ್ವಾಮಿ, ಮೊದಮೊದಲು ಕೆ.ಗೋಪಾಲಯ್ಯನನ್ನು ಸೋಲಿಸುವ ಪಣ ತೊಟ್ಟವರಂತೆಯೇ ಅಖಾಡಕ್ಕಿಳಿದಿದ್ದುಂಟು. ಲಿಂಗಾಯತರು ಮತ್ತು ಒಬಿಸಿ ಜಾತಿಗಳ ಮಿಶ್ರಣವೂ ಇದೆಯೆಂಬಂತೆ ಕಂಡುಬಂದರು ಒಕ್ಕಲಿಗ ಮತಗಳೇ ಇಲ್ಲಿ ನಿರ್ಣಾಯಕ. ಹಾಗಾಗಿ ಕುಮಾರಸ್ವಾಮಿ ಅಬ್ಬರಿಸಿದ್ದನ್ನು ಕಂಡವರು ಗೋಪಾಲಯ್ಯನ ಗೆಲುವು ಸುಲಭವಿಲ್ಲ ಅಂತಲೇ ಆರಂಭಿಕ ತರ್ಕ ಶುರುಹಚ್ಚಿಕೊಂಡಿದ್ದರು. ಆದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನ ಘೋಷಿಸಿದ ತರುವಾಯ ಆ ತರ್ಕಗಳೆಲ್ಲ ದಂಗಾಗಿಹೋಗಿವೆ! ಸ್ವತಃ ಜೆಡಿಎಸ್ ಕಾರ್ಯಕರ್ತರೇ ದಿಗ್ಭ್ರಾಂತರಾಗಿದ್ದಾರೆ.

ಚಾರ್ಟರ್ಡ್‌ ಅಕೌಂಟೆಂಟ್ ಡಾ. ಗಿರೀಶ್ ನಾಶಿ ಎಂಬ ಆಮದು ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ಗೋಪಾಲಯ್ಯನ ಗೆಲುವಿನ ಹಾದಿಯನ್ನು ಸುಗಮ ಮಾಡಿಕೊಟ್ಟಂತೆ ಕಾಣುತ್ತೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಪ್ರಯತ್ನಿಸಿದ್ದ ನಾಶಿ, ನಿನ್ನೆ ಮೊನ್ನೆಯವರೆಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಾಳೆಯದಲ್ಲೇ ಗುರುತಿಸಿಕೊಂಡಿದ್ದವರು. ಯಾವಾಗ ಸಿದ್ದರಾಮಯ್ಯನವರು ತನ್ನ ಕುಲಸ್ಥ, ಶಂಕರಮಠ ವಾರ್ಡ್ ಕಾರ್ಪೊರೇಟರ್ ಎಂ.ಶಿವರಾಜುಗೆ ಉಪಚುನಾವಣೆಯ ಟಿಕೆಟ್ ಕೊಡಿಸಲು ಒಲವು ತೋರಿದರೊ, ಆನಂತರವೇ ಡಾ.ನಾಶಿ ಜೆಡಿಎಸ್ ಅಂಗಳಕ್ಕೆ ಬಂದು ನಿಂತದ್ದು. ಹಾಗಾಗಿ ಜೆಡಿಎಸ್‌ನೊಳಗೆ ಹಿಂಬಾಲಕರ ಯಾವ ಬಲವೂ ನಾಶಿಗಿಲ್ಲ. ಅವರು ಜಾತಿಯಲ್ಲಿ ಲಿಂಗಾಯತರಾದರು, ಲಿಂಗಾಯತ ಮತಗಳು ಯಡ್ಯೂರಪ್ಪನವರ ಕಾರಣಕ್ಕೆ ಬಿಜೆಪಿಯತ್ತ ವಾಲುವವೇ ವಿನಾಃ ನಾಶಿಯತ್ತ ತಿರುಗಲಾರವು.

ಹಾಗೆ ನೋಡಿದರೆ, ಇಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಲು ಕೊರತೆಯೇನು ಇರಲಿಲ್ಲ. ಜೆಡಿಎಸ್‌ನ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದ, ಸ್ಥಳೀಯ ಆರ್.ವಿ.ಹರೀಶ್ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಜಾತಿಯಿಂದ ನಾಯ್ಡು ಆದರು ಹರೀಶ್‌ಗೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ರಾಜಕೀಯ ಬೇರುಗಳಿವೆ. 2008ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಗೊಂಡು ಕೇಸರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹರೀಶ್ 39,427 ಮತ ಪಡೆದಿದ್ದರು. ಕಾಂಗ್ರೆಸ್‌ನ ನೆ.ಲ.ನರೇಂದ್ರ ಬಾಬು ಗೆದ್ದ ಆ ಚುನಾವಣೆಯಲ್ಲಿ ಗೋಪಾಲಯ್ಯ ಗಳಿಸಿದ್ದು ಕೇವಲ 28,097 ಮತಗಳನ್ನಷ್ಟೆ. ಆ ನಂತರ ಜೆಡಿಎಸ್ ಸೇರಿದ್ದ ಹರೀಶ್ ಈಗ ಟಿಕೆಟ್ ತನ್ನ ಕೈತಪ್ಪಿ ನಾಶಿಗೆ ಒಲಿದಿದ್ದರಿಂದ ಮುನಿಸಿಕೊಂಡು ಜೆಡಿಎಸ್ ಸದಸ್ಯತ್ವಕ್ಕೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ಇನ್ನು ನಾಗಪುರ ವಾರ್ಡ್‌ನ ಬಿಬಿಎಂಪಿ ಕಾರ್ಪೊರೇಟರ್ ಭದ್ರೇಗೌಡ ಕೂಡಾ ಜೆಡಿಎಸ್ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಅವರನ್ನಾದರು ಅಖಾಡಕ್ಕಿಳಿಸಿದ್ದರೆ ಒಕ್ಕಲಿಗ ಓಟ್‌ಬೇಸ್ ಆಧಾರದಲ್ಲಿ ಗೋಪಾಲಯ್ಯನಿಗೆ ಪ್ರತಿಸ್ಪರ್ಧೆ ಒಡ್ಡುವ ಅವಕಾಶ ಜೆಡಿಎಸ್‌ಗೆ ಇರುತ್ತಿತ್ತು. ಆದರೆ ಇಂತಹ ಅವಕಾಶಗಳನ್ನೆಲ್ಲ ಹಠಾತ್ತನೆ ಕೈಚೆಲ್ಲಿ, ಸದ್ಯದ ಮಟ್ಟಿಗೆ ಗೋಪಾಲಯ್ಯನೆದುರು ಪೇಲವದಂತೆ ಕಾಣುವ ನಾಶಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ವರಿಷ್ಠರ ಲೆಕ್ಕಾಚಾರಗಳನ್ನೇ ಗುಮಾನಿಯಿಂದ ನೋಡುವಂತಾಗಿದೆ. ಡಾ.ನಾಶಿ ಚುನಾವಣೆಯಿಂದಲೇ ಹಿಂದೆ ಸರಿದಿದ್ದಾರೆ ಎಂಬ ವದಂತಿಯೂ ಕ್ಷೇತ್ರದಲ್ಲಿ ಹಬ್ಬಿತ್ತು. ಕೊನೆಗೆ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿಯೇ ನಾಶಿಯನ್ನು ಕೂರಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ಘೋಷಿಸಬೇಕಾಯ್ತು. ಹಾಗಿದೆ ಜೆಡಿಎಸ್ ಅಭ್ಯರ್ಥಿಯ ಪರಿಸ್ಥಿತಿ ಇಲ್ಲಿ.

ಜೆಡಿಎಸ್ ಲಿಂಗಾಯತ ಅಭ್ಯರ್ಥಿಯನ್ನು, ಕಾಂಗ್ರೆಸ್ ಕುರುಬ ಸಮುದಾಯದ ಶಿವರಾಜ್‌ರನ್ನು ಕಣಕ್ಕಿಳಿಸಿರೋದರಿಂದ, ಒಕ್ಕಲಿಗ ಮತಗಳು ಸಾರಾಸಗಟಾಗಿ ಗೋಪಾಲಯ್ಯನತ್ತ ತಿರುಗಲು ಯಾವ ಅಡ್ಡಿಯೂ ಇಲ್ಲ. ಇನ್ನು ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡಿದ್ದ ಮಾಜಿ ಉಪಮೇಯರ್ ಎಸ್.ಹರೀಶ್ ಕೊಂಚ ಮೆತ್ತಗಾಗಿರೋದು ಗೋಪಾಲಯ್ಯನ ಪಾಲಿಗೆ ಪ್ಲಸ್ ಪಾಯಿಂಟ್.

ಏಳು ವಾರ್ಡ್ಗಳ ಪೈಕಿ ನಾಲ್ಕರಲ್ಲಿ ಜೆಡಿಎಸ್ ಕಾರ್ಪೊರೇಟರುಗಳಿದ್ದರೆ, ಎರಡರಲ್ಲಿ ಕಾಂಗ್ರೆಸ್ ಮತ್ತು ಒಂದರಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡಿದ್ದವು. ಗೋಪಾಲಯ್ಯನ ಮಡದಿ, ವೃಷಭಾವತಿನಗರ ವಾರ್ಡ್ ಪ್ರತಿನಿಧಿಸುವ ಹೇಮಲತಾ ಮತ್ತು ಮಾರಪ್ಪನ ಪಾಳ್ಯದ ಎಂ.ಮಹಾದೇವರನ್ನು ಈಗಾಗಲೇ ಜೆಡಿಎಸ್ ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟಿಸಿದೆ. ಅವರಿಬ್ಬರಲ್ಲದೆ ಜೆಡಿಎಸ್ ಟಿಕೆಟ್ ಕೈತಪ್ಪಿದ ನಾಗಪುರ ವಾರ್ಡ್‌ನ ಕಾರ್ಪೊರೇಟರ್ ಭದ್ರೇಗೌಡ ಕೂಡಾ ತಟಸ್ಥವಾಗುಳಿಯುವ ಸಾಧ್ಯತೆಗಳಿವೆ. ಇನ್ನು ಕಾಂಗ್ರೆಸ್‌ಗೆ ಇಲ್ಲಿ ವಿಪರೀತ ನಿರೀಕ್ಷೆಗಳೇನು ಇದ್ದಂತಿ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...