HomeUncategorizedಹೊಸ ಅಲೆ ಸೃಷ್ಟಿಸಿದ 'ಮಹಾನಾಯಕ' ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗೆ ಡಬ್ಬಿಂಗ್ ವಿಭಾಗದಲ್ಲಿ ಜೀ ಕುಟುಂಬ ಪ್ರಶಸ್ತಿ ಲಭಿಸಿದೆ.

ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮುಂದಿನ ವಾರ ಇದರ ಪ್ರಸಾರ ಮಾಡಲಾಗುತ್ತದೆ ಎಂದು ಜೀ ಕನ್ನಡದ ಅನಿಲ್‌ಕುಮಾರ್.ಜೆ ನಾನುಗೌರಿ.ಕಾಂ ಗೆ ತಿಳಿಸಿದರು.

ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಒಂದು ವಾರ ಕಾರಣಾಂತರಗಳಿಂದ ಧಾರವಾಹಿ ಪ್ರಸಾರವಾಗೇ ಇದ್ದಾಗ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸುವ ಮಟ್ಟಿದೆ ಇದು ಜನರ ಮನಗೆದ್ದಿದೆ. ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.


ಇದನ್ನೂ ಓದಿ:ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!


ಇತ್ತೀಚೆಗೆ ಈ ಧಾರಾವಾಹಿಯನ್ನು ನಿಲ್ಲಿಸುವಂತೆ ಬೆದರಿಕೆಗಳು ಬರುತ್ತಿವೆ ಎಂದು ಜೀ ವಾಹಿನಿಯ ಮುಖ್ಯ ನಿರ್ವಾಹಕರಾಗಿರುವ ರಾಘವೇಂದ್ರ ಹುಣಸೂರು ಹೇಳಿದ್ದರು.

“ಮಹಾನಾಯಕ ಧಾರಾವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಮಧ್ಯರಾತ್ರಿಯಲ್ಲಿ ತುಂಬಾ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಇದು ಬೆದರಿಕೆಯಂತೆ ಕಾಣುತ್ತಿದೆ. ಆದರೆ ವೈಯಕ್ತಿಕವಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮಹಾನಾಯಕ ಮುಂದುವರೆಯುತ್ತದೆ. ಜೊತೆಗೆ ಇದು ನಮ್ಮ ಹೆಮ್ಮೆಯಾಗಿದ್ದು, ಇದರಲ್ಲಿ ವೈಯಕ್ತಿಕ ಪ್ರೀತಿಯೂ ಸೇರಿದೆ. ಇದನ್ನು ಒಂದು ಸಮಸ್ಯೆ ಎಂದು ನೀವು ಪರಿಗಣಿಸಿದರೆ, ವಾಸ್ತವದಲ್ಲಿ ಸಮಾಜಕ್ಕೆ ನೀವೇ ಒಂದು ಸಮಸ್ಯೆ! ಜೈ ಭೀಮ್” ಎಂದು ಟ್ವೀಟ್ ಮಾಡಿದ್ದರು.

ಬೆದರಿಕೆ ಕರೆಗಳ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ಪ್ರತಿರೋಧವೂ ವ್ಯಕ್ತವಾಗಿತ್ತು. 


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...