Homeಮುಖಪುಟತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ 'ಮಹಾನಾಯಕ'- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ ‘ಮಹಾನಾಯಕ’- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ.

- Advertisement -
- Advertisement -

ಕನ್ನಡದಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ವ್ಯಾಪಕ ಮನ್ನಣೆ ಮತ್ತು ಮೆಚ್ಚುಗೆ ಪಡೆಯುತ್ತಿರುವ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ “ಮಹಾನಾಯಕ” ಇದೀಗ ತಮಿಳಿನಲ್ಲಿ “ಕ್ರಾಂತಿಕಾರಿ ಅಂಬೇಡ್ಕರ್” (ಪುರಚ್ಚಿಯಾಳರ್ ಅಂಬೇಡ್ಕರ್) ಎಂಬ ಹೆಸರಿನಲ್ಲಿ ಪ್ರಸಾರವಾಗಿ ಮೆಚ್ಚುಗೆಗಳಿಸುತ್ತಿದೆ.

ಸೆಪ್ಟಂಬರ್ 24 ರಿಂದ ಈ ಧಾರಾವಾಹಿ ಜೀ ತಮಿಳಿನಲ್ಲಿ ಪ್ರಸಾರವಾಗುತ್ತಿದ್ದು, ಇದರ ಟೈಟಲ್ ಹಾಡನ್ನು ಖ್ಯಾತ ಗಾಯಕ ಶಂಕರ್ ಮಹಾದೇವನ್ ಅದ್ಭುತವಾಗಿ ಹಾಡಿದ್ದಾರೆ.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಈ ಕುರಿತು ಮಾತನಾಡಿರುವ ಕಮಲಹಾಸನ್, “ನಮ್ಮ ಮಕ್ಕಳಿಗೆ ನಮ್ಮ ಇತಿಹಾಸವನ್ನು ತಿಳಿಸುವುದು ಮತ್ತು ಇತಿಹಾಸ ಸೃಷ್ಟಿಸಿದವರನ್ನು ತಿಳಿಸಿಕೊಡುವುದು ನಮ್ಮ ಕರ್ತವ್ಯ. ಇತಿಹಾಸವನ್ನು ಅರ್ಥೈಸಿಕೊಂಡರೆ ಮಾತ್ರ ಇತಿಹಾಸ ಸೃಷ್ಟಿಸುವ ಧೈರ್ಯ ಬರುತ್ತದೆ. ಸ್ವತಂತ್ರಪೂರ್ವ ಭಾರತದ ಇತಿಹಾಸ ಮತ್ತು ಸ್ವತಂತ್ರಾ ನಂತರದ ಭಾರತದ ಇತಿಹಾಸವನ್ನು ತಿಳಿದುಕೊಳ್ಳಬೇಕು. ಇದು ನಮ್ಮ ಭವಿಷ್ಯದ ಶಕ್ತಿಯುತ ಭಾರತವನ್ನು ನಿರ್ಮಿಸಲು ನಮಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಇತಿಹಾಸ ಪ್ರಮುಖವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

“ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ. ಬಹುಮುಖಿ ಪ್ರತಿಭೆಯನ್ನು ಹೊಂದಿದ್ದ ಅಂಬೇಡ್ಕರ್, ಭಾರತದ ರಾಜಕೀಯ ಕಾನೂನನ್ನು ರಚಿಸಿದ್ದರು. ‘ಪ್ರಾಬ್ಲಂ ಆಫ್ ರುಪೀ’ ಎನ್ನುವ ಸಂಶೋಧನಾ ಪ್ರಬಂಧ ಬರೆದು ಆರ್‌ಬಿಐ ನಂತಹ ಒಂದು ಬಲಿಷ್ಠ ಸಂಸ್ಥೆಯನ್ನು ಸ್ಥಾಪಿಸಲು ಅಂಬೇಡ್ಕರ್ ಕಾರಣಕರ್ತರಾಗಿದ್ದರು ಎಂಬುದನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕಾದ ವಾಸ್ತವ ಸತ್ಯ. ಜಗತ್ತಿನಾದ್ಯಂತ ವರ್ಗದ ಆಧಾರದಲ್ಲಿ ತಾರತಮ್ಯ ಶೋಷಣೆ, ದೌರ್ಜನ್ಯ ನಡೆಯುತ್ತಿದ್ದಾಗ, ಅದಕ್ಕಿಂತಲೂ ಕಠೋರವಾದ ರೀತಿಯಲ್ಲಿ, ವರ್ಣದ ಆಧಾರದಲ್ಲಿ ತಾರತಮ್ಯ ದೌರ್ಜನ್ಯ ನಡೆಯುತ್ತಿದೆ ಎಂದು ನಿರ್ಭಯವಾಗಿ ಹೇಳುವುದರ ಜೊತೆಗೆ ಅದನ್ನು ನಾಶಪಡಿಸುವ ರೀತಿಯನ್ನು ಹೇಳಿದ್ದು ಅಂಬೇಡ್ಕರ್. ನಿಜವಾದ ಸ್ವಾತಂತ್ರ ಎಂದರೆ, ವರ್ಣ ಮತ್ತು ವರ್ಗಾಧಾರಿತ ಪದ್ದತಿಯಿಂದ ಬಿಡಿಸಿಕೊಳ್ಳುವುದೇ ಆಗಿದೆ ಎಂದು ಹೇಳಿದ್ದರು. ಹಾಗಾಗಿಯೆ ಇದರ ವಿರುದ್ಧ ಹೋರಾಡಲು ಅವರಿಗೆ ಸಾಧ್ಯವಾಯಿತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರೆಂಬುದು ನನಗೆ ಬೇಕಿಲ್ಲ. ಬದಲಿಗೆ ಮನುಷ್ಯರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರು ಎಂಬುದು ಬೇಕು- ಡಾ.ಬಿ.ಆರ್.ಅಂಬೇಡ್ಕರ್

“ಬ್ರಿಟಿಷರಿಂದ ದೇಶ ಸ್ವತಂತ್ರವಾಗಬೇಕೆಂದು ಗಾಂಧಿ ಹೇಳುತ್ತಿದ್ದರು. ಆದರೆ ಅಂಬೇಡ್ಕರ್, ಮೊದಲು ನಮ್ಮ ಮನೆಯೊಳಗಿನವರಿಂದಲೇ ಸ್ವತಂತ್ರರಾಗಬೇಕು ಎಂದು ವಾದಿಸುತ್ತಿದ್ದರು. ಇವರೀರ್ವರನ್ನು ಬೇರೆ-ಬೇರೆಯಾಗಿ ಹಲವರು ಕಂಡಿದ್ದಾರೆ. ಆದರೆ ವಾಸ್ತವದಲ್ಲಿ ಇವರಿಬ್ಬರೂ ದಾಸ್ಯದ ವಿರುದ್ಧ ಮತ್ತು ಸ್ವಾತಂತ್ರದ ಪರವಾಗಿದ್ದವರು. ಇಬ್ಬರಿಗೂ ರೈಲು ಪ್ರಯಾಣವೆ ಪ್ರಮುಖ ತಿರುವಾಗಿತ್ತು.”

“ರಾಜಕೀಯ ಸೂಕ್ಷ್ಮತೆಯನ್ನು ತಿಳಿದಿದ್ದ ಅಂಬೇಡ್ಕರ್, ರಾಜಕೀಯ ಜನನಾಯಕತ್ವಕ್ಕಿಂತ ಸಮೂಹ ಜನನಾಯಕತ್ವದ ಅಗತ್ಯವನ್ನು ಕಂಡುಕೊಂಡರು. ಬದಲಾವಣೆ ಎನ್ನುವುದು ತುಳಿತಕ್ಕೊಳಗಾದವರಿಂದ, ತಳ ಸಮುದಾಯದವರಿಂದ ಆರಂಭವಾಗಬೇಕು. ಆಗ ಮಾತ್ರ ಒಟ್ಟು ವ್ಯವಸ್ಥೆಯಲ್ಲಿ ನಾವು ಬಯಸುವ ಬದಲಾವಣೆ ತರಲು ಸಾಧ್ಯ ಎಂದು ಗಂಟಾಘೋಷವಾಗಿ ಹೇಳಿದರು. ಹಾಗಾಗಿಯೇ ಕಾರ್ಮಿಕರ ಪರ, ಮಹಿಳಾ ಪರ, ತಳ ಸಮುದಾಯದ ಪರ, ಜಾತಿ ನಿರ್ಮೂಲನೆ, ಆರ್ಥಿಕ ಸ್ವಾಯತ್ತತೆ ಎನ್ನುವ ಅಂಶಗಳನ್ನಿಟ್ಟುಕೊಂಡು ಹೋರಾಟ ಮಾಡಿದರು. ಅಂಬೇಡ್ಕರ್ ಇಂದು ಬದುಕಿದ್ದಿದ್ದರೂ ಸಹ ಇಂದಿನ ಪರಿಸ್ಥಿತಿಗೆ ತಕ್ಕಂತೆ ಚಿಂತಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಅಂಬೇಡ್ಕರ್ ಕೇಳಿದ ಹಲವು ಪ್ರಶ್ನೆಗಳಿಗೆ ಇಂದಿಗೂ ಉತ್ತರವಿಲ್ಲ. ಹಾಗಾಗಿ ಇಂಥಾ ಮೇರು ವ್ಯಕ್ತಿತ್ವದ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಧಾರಾವಾಹಿಯಾಗಿ ಪ್ರಸಾರ ಮಾಡುತ್ತಿರುವ ಜೀ ವಾಹಿನಿಗೂ ಮತ್ತು ಇದನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿತ್ತು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗೆ ಡಬ್ಬಿಂಗ್ ವಿಭಾಗದಲ್ಲಿ ಜೀ ಕುಟುಂಬ ಪ್ರಶಸ್ತಿ ಲಭಿಸಿತ್ತು.

ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಒಂದು ವಾರ ಕಾರಣಾಂತರಗಳಿಂದ ಧಾರವಾಹಿ ಪ್ರಸಾರವಾಗೇ ಇದ್ದಾಗ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸುವ ಮಟ್ಟಿದೆ ಇದು ಜನರ ಮನಗೆದ್ದಿದೆ. ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಇತ್ತೀಚೆಗೆ ಈ ಧಾರಾವಾಹಿಯನ್ನು ನಿಲ್ಲಿಸುವಂತೆ ಬೆದರಿಕೆಗಳು ಬರುತ್ತಿವೆ ಎಂದು ಜೀ ವಾಹಿನಿಯ ಮುಖ್ಯ ನಿರ್ವಾಹಕರಾಗಿರುವ ರಾಘವೇಂದ್ರ ಹುಣಸೂರು ಹೇಳಿದ್ದರು.

ಜಾಗೃತರಾಗಿ, ಚಿಂತಿಸಿ, ಒಂದಾಗಿ- ಡಾ.ಬಿ.ಆರ್.ಅಂಬೇಡ್ಕರ್

“ಮಹಾನಾಯಕ ಧಾರಾವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಮಧ್ಯರಾತ್ರಿಯಲ್ಲಿ ತುಂಬಾ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಇದು ಬೆದರಿಕೆಯಂತೆ ಕಾಣುತ್ತಿದೆ. ಆದರೆ ವೈಯಕ್ತಿಕವಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮಹಾನಾಯಕ ಮುಂದುವರೆಯುತ್ತದೆ. ಜೊತೆಗೆ ಇದು ನಮ್ಮ ಹೆಮ್ಮೆಯಾಗಿದ್ದು, ಇದರಲ್ಲಿ ವೈಯಕ್ತಿಕ ಪ್ರೀತಿಯೂ ಸೇರಿದೆ. ಇದನ್ನು ಒಂದು ಸಮಸ್ಯೆ ಎಂದು ನೀವು ಪರಿಗಣಿಸಿದರೆ, ವಾಸ್ತವದಲ್ಲಿ ಸಮಾಜಕ್ಕೆ ನೀವೇ ಒಂದು ಸಮಸ್ಯೆ! ಜೈ ಭೀಮ್” ಎಂದು ಟ್ವೀಟ್ ಮಾಡಿದ್ದರು.

ಬೆದರಿಕೆ ಕರೆಗಳ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ಪ್ರತಿರೋಧವೂ ವ್ಯಕ್ತವಾಗಿತ್ತು.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....