Homeಮುಖಪುಟತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ 'ಮಹಾನಾಯಕ'- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ ‘ಮಹಾನಾಯಕ’- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ.

- Advertisement -
- Advertisement -

ಕನ್ನಡದಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ವ್ಯಾಪಕ ಮನ್ನಣೆ ಮತ್ತು ಮೆಚ್ಚುಗೆ ಪಡೆಯುತ್ತಿರುವ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ “ಮಹಾನಾಯಕ” ಇದೀಗ ತಮಿಳಿನಲ್ಲಿ “ಕ್ರಾಂತಿಕಾರಿ ಅಂಬೇಡ್ಕರ್” (ಪುರಚ್ಚಿಯಾಳರ್ ಅಂಬೇಡ್ಕರ್) ಎಂಬ ಹೆಸರಿನಲ್ಲಿ ಪ್ರಸಾರವಾಗಿ ಮೆಚ್ಚುಗೆಗಳಿಸುತ್ತಿದೆ.

ಸೆಪ್ಟಂಬರ್ 24 ರಿಂದ ಈ ಧಾರಾವಾಹಿ ಜೀ ತಮಿಳಿನಲ್ಲಿ ಪ್ರಸಾರವಾಗುತ್ತಿದ್ದು, ಇದರ ಟೈಟಲ್ ಹಾಡನ್ನು ಖ್ಯಾತ ಗಾಯಕ ಶಂಕರ್ ಮಹಾದೇವನ್ ಅದ್ಭುತವಾಗಿ ಹಾಡಿದ್ದಾರೆ.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಈ ಕುರಿತು ಮಾತನಾಡಿರುವ ಕಮಲಹಾಸನ್, “ನಮ್ಮ ಮಕ್ಕಳಿಗೆ ನಮ್ಮ ಇತಿಹಾಸವನ್ನು ತಿಳಿಸುವುದು ಮತ್ತು ಇತಿಹಾಸ ಸೃಷ್ಟಿಸಿದವರನ್ನು ತಿಳಿಸಿಕೊಡುವುದು ನಮ್ಮ ಕರ್ತವ್ಯ. ಇತಿಹಾಸವನ್ನು ಅರ್ಥೈಸಿಕೊಂಡರೆ ಮಾತ್ರ ಇತಿಹಾಸ ಸೃಷ್ಟಿಸುವ ಧೈರ್ಯ ಬರುತ್ತದೆ. ಸ್ವತಂತ್ರಪೂರ್ವ ಭಾರತದ ಇತಿಹಾಸ ಮತ್ತು ಸ್ವತಂತ್ರಾ ನಂತರದ ಭಾರತದ ಇತಿಹಾಸವನ್ನು ತಿಳಿದುಕೊಳ್ಳಬೇಕು. ಇದು ನಮ್ಮ ಭವಿಷ್ಯದ ಶಕ್ತಿಯುತ ಭಾರತವನ್ನು ನಿರ್ಮಿಸಲು ನಮಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಇತಿಹಾಸ ಪ್ರಮುಖವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

“ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ. ಬಹುಮುಖಿ ಪ್ರತಿಭೆಯನ್ನು ಹೊಂದಿದ್ದ ಅಂಬೇಡ್ಕರ್, ಭಾರತದ ರಾಜಕೀಯ ಕಾನೂನನ್ನು ರಚಿಸಿದ್ದರು. ‘ಪ್ರಾಬ್ಲಂ ಆಫ್ ರುಪೀ’ ಎನ್ನುವ ಸಂಶೋಧನಾ ಪ್ರಬಂಧ ಬರೆದು ಆರ್‌ಬಿಐ ನಂತಹ ಒಂದು ಬಲಿಷ್ಠ ಸಂಸ್ಥೆಯನ್ನು ಸ್ಥಾಪಿಸಲು ಅಂಬೇಡ್ಕರ್ ಕಾರಣಕರ್ತರಾಗಿದ್ದರು ಎಂಬುದನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕಾದ ವಾಸ್ತವ ಸತ್ಯ. ಜಗತ್ತಿನಾದ್ಯಂತ ವರ್ಗದ ಆಧಾರದಲ್ಲಿ ತಾರತಮ್ಯ ಶೋಷಣೆ, ದೌರ್ಜನ್ಯ ನಡೆಯುತ್ತಿದ್ದಾಗ, ಅದಕ್ಕಿಂತಲೂ ಕಠೋರವಾದ ರೀತಿಯಲ್ಲಿ, ವರ್ಣದ ಆಧಾರದಲ್ಲಿ ತಾರತಮ್ಯ ದೌರ್ಜನ್ಯ ನಡೆಯುತ್ತಿದೆ ಎಂದು ನಿರ್ಭಯವಾಗಿ ಹೇಳುವುದರ ಜೊತೆಗೆ ಅದನ್ನು ನಾಶಪಡಿಸುವ ರೀತಿಯನ್ನು ಹೇಳಿದ್ದು ಅಂಬೇಡ್ಕರ್. ನಿಜವಾದ ಸ್ವಾತಂತ್ರ ಎಂದರೆ, ವರ್ಣ ಮತ್ತು ವರ್ಗಾಧಾರಿತ ಪದ್ದತಿಯಿಂದ ಬಿಡಿಸಿಕೊಳ್ಳುವುದೇ ಆಗಿದೆ ಎಂದು ಹೇಳಿದ್ದರು. ಹಾಗಾಗಿಯೆ ಇದರ ವಿರುದ್ಧ ಹೋರಾಡಲು ಅವರಿಗೆ ಸಾಧ್ಯವಾಯಿತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರೆಂಬುದು ನನಗೆ ಬೇಕಿಲ್ಲ. ಬದಲಿಗೆ ಮನುಷ್ಯರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರು ಎಂಬುದು ಬೇಕು- ಡಾ.ಬಿ.ಆರ್.ಅಂಬೇಡ್ಕರ್

“ಬ್ರಿಟಿಷರಿಂದ ದೇಶ ಸ್ವತಂತ್ರವಾಗಬೇಕೆಂದು ಗಾಂಧಿ ಹೇಳುತ್ತಿದ್ದರು. ಆದರೆ ಅಂಬೇಡ್ಕರ್, ಮೊದಲು ನಮ್ಮ ಮನೆಯೊಳಗಿನವರಿಂದಲೇ ಸ್ವತಂತ್ರರಾಗಬೇಕು ಎಂದು ವಾದಿಸುತ್ತಿದ್ದರು. ಇವರೀರ್ವರನ್ನು ಬೇರೆ-ಬೇರೆಯಾಗಿ ಹಲವರು ಕಂಡಿದ್ದಾರೆ. ಆದರೆ ವಾಸ್ತವದಲ್ಲಿ ಇವರಿಬ್ಬರೂ ದಾಸ್ಯದ ವಿರುದ್ಧ ಮತ್ತು ಸ್ವಾತಂತ್ರದ ಪರವಾಗಿದ್ದವರು. ಇಬ್ಬರಿಗೂ ರೈಲು ಪ್ರಯಾಣವೆ ಪ್ರಮುಖ ತಿರುವಾಗಿತ್ತು.”

“ರಾಜಕೀಯ ಸೂಕ್ಷ್ಮತೆಯನ್ನು ತಿಳಿದಿದ್ದ ಅಂಬೇಡ್ಕರ್, ರಾಜಕೀಯ ಜನನಾಯಕತ್ವಕ್ಕಿಂತ ಸಮೂಹ ಜನನಾಯಕತ್ವದ ಅಗತ್ಯವನ್ನು ಕಂಡುಕೊಂಡರು. ಬದಲಾವಣೆ ಎನ್ನುವುದು ತುಳಿತಕ್ಕೊಳಗಾದವರಿಂದ, ತಳ ಸಮುದಾಯದವರಿಂದ ಆರಂಭವಾಗಬೇಕು. ಆಗ ಮಾತ್ರ ಒಟ್ಟು ವ್ಯವಸ್ಥೆಯಲ್ಲಿ ನಾವು ಬಯಸುವ ಬದಲಾವಣೆ ತರಲು ಸಾಧ್ಯ ಎಂದು ಗಂಟಾಘೋಷವಾಗಿ ಹೇಳಿದರು. ಹಾಗಾಗಿಯೇ ಕಾರ್ಮಿಕರ ಪರ, ಮಹಿಳಾ ಪರ, ತಳ ಸಮುದಾಯದ ಪರ, ಜಾತಿ ನಿರ್ಮೂಲನೆ, ಆರ್ಥಿಕ ಸ್ವಾಯತ್ತತೆ ಎನ್ನುವ ಅಂಶಗಳನ್ನಿಟ್ಟುಕೊಂಡು ಹೋರಾಟ ಮಾಡಿದರು. ಅಂಬೇಡ್ಕರ್ ಇಂದು ಬದುಕಿದ್ದಿದ್ದರೂ ಸಹ ಇಂದಿನ ಪರಿಸ್ಥಿತಿಗೆ ತಕ್ಕಂತೆ ಚಿಂತಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಅಂಬೇಡ್ಕರ್ ಕೇಳಿದ ಹಲವು ಪ್ರಶ್ನೆಗಳಿಗೆ ಇಂದಿಗೂ ಉತ್ತರವಿಲ್ಲ. ಹಾಗಾಗಿ ಇಂಥಾ ಮೇರು ವ್ಯಕ್ತಿತ್ವದ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಧಾರಾವಾಹಿಯಾಗಿ ಪ್ರಸಾರ ಮಾಡುತ್ತಿರುವ ಜೀ ವಾಹಿನಿಗೂ ಮತ್ತು ಇದನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿತ್ತು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗೆ ಡಬ್ಬಿಂಗ್ ವಿಭಾಗದಲ್ಲಿ ಜೀ ಕುಟುಂಬ ಪ್ರಶಸ್ತಿ ಲಭಿಸಿತ್ತು.

ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಒಂದು ವಾರ ಕಾರಣಾಂತರಗಳಿಂದ ಧಾರವಾಹಿ ಪ್ರಸಾರವಾಗೇ ಇದ್ದಾಗ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸುವ ಮಟ್ಟಿದೆ ಇದು ಜನರ ಮನಗೆದ್ದಿದೆ. ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಇತ್ತೀಚೆಗೆ ಈ ಧಾರಾವಾಹಿಯನ್ನು ನಿಲ್ಲಿಸುವಂತೆ ಬೆದರಿಕೆಗಳು ಬರುತ್ತಿವೆ ಎಂದು ಜೀ ವಾಹಿನಿಯ ಮುಖ್ಯ ನಿರ್ವಾಹಕರಾಗಿರುವ ರಾಘವೇಂದ್ರ ಹುಣಸೂರು ಹೇಳಿದ್ದರು.

ಜಾಗೃತರಾಗಿ, ಚಿಂತಿಸಿ, ಒಂದಾಗಿ- ಡಾ.ಬಿ.ಆರ್.ಅಂಬೇಡ್ಕರ್

“ಮಹಾನಾಯಕ ಧಾರಾವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಮಧ್ಯರಾತ್ರಿಯಲ್ಲಿ ತುಂಬಾ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಇದು ಬೆದರಿಕೆಯಂತೆ ಕಾಣುತ್ತಿದೆ. ಆದರೆ ವೈಯಕ್ತಿಕವಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮಹಾನಾಯಕ ಮುಂದುವರೆಯುತ್ತದೆ. ಜೊತೆಗೆ ಇದು ನಮ್ಮ ಹೆಮ್ಮೆಯಾಗಿದ್ದು, ಇದರಲ್ಲಿ ವೈಯಕ್ತಿಕ ಪ್ರೀತಿಯೂ ಸೇರಿದೆ. ಇದನ್ನು ಒಂದು ಸಮಸ್ಯೆ ಎಂದು ನೀವು ಪರಿಗಣಿಸಿದರೆ, ವಾಸ್ತವದಲ್ಲಿ ಸಮಾಜಕ್ಕೆ ನೀವೇ ಒಂದು ಸಮಸ್ಯೆ! ಜೈ ಭೀಮ್” ಎಂದು ಟ್ವೀಟ್ ಮಾಡಿದ್ದರು.

ಬೆದರಿಕೆ ಕರೆಗಳ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ಪ್ರತಿರೋಧವೂ ವ್ಯಕ್ತವಾಗಿತ್ತು.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...