Homeಮುಖಪುಟತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ 'ಮಹಾನಾಯಕ'- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ ‘ಮಹಾನಾಯಕ’- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ.

- Advertisement -
- Advertisement -

ಕನ್ನಡದಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ವ್ಯಾಪಕ ಮನ್ನಣೆ ಮತ್ತು ಮೆಚ್ಚುಗೆ ಪಡೆಯುತ್ತಿರುವ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ “ಮಹಾನಾಯಕ” ಇದೀಗ ತಮಿಳಿನಲ್ಲಿ “ಕ್ರಾಂತಿಕಾರಿ ಅಂಬೇಡ್ಕರ್” (ಪುರಚ್ಚಿಯಾಳರ್ ಅಂಬೇಡ್ಕರ್) ಎಂಬ ಹೆಸರಿನಲ್ಲಿ ಪ್ರಸಾರವಾಗಿ ಮೆಚ್ಚುಗೆಗಳಿಸುತ್ತಿದೆ.

ಸೆಪ್ಟಂಬರ್ 24 ರಿಂದ ಈ ಧಾರಾವಾಹಿ ಜೀ ತಮಿಳಿನಲ್ಲಿ ಪ್ರಸಾರವಾಗುತ್ತಿದ್ದು, ಇದರ ಟೈಟಲ್ ಹಾಡನ್ನು ಖ್ಯಾತ ಗಾಯಕ ಶಂಕರ್ ಮಹಾದೇವನ್ ಅದ್ಭುತವಾಗಿ ಹಾಡಿದ್ದಾರೆ.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಈ ಕುರಿತು ಮಾತನಾಡಿರುವ ಕಮಲಹಾಸನ್, “ನಮ್ಮ ಮಕ್ಕಳಿಗೆ ನಮ್ಮ ಇತಿಹಾಸವನ್ನು ತಿಳಿಸುವುದು ಮತ್ತು ಇತಿಹಾಸ ಸೃಷ್ಟಿಸಿದವರನ್ನು ತಿಳಿಸಿಕೊಡುವುದು ನಮ್ಮ ಕರ್ತವ್ಯ. ಇತಿಹಾಸವನ್ನು ಅರ್ಥೈಸಿಕೊಂಡರೆ ಮಾತ್ರ ಇತಿಹಾಸ ಸೃಷ್ಟಿಸುವ ಧೈರ್ಯ ಬರುತ್ತದೆ. ಸ್ವತಂತ್ರಪೂರ್ವ ಭಾರತದ ಇತಿಹಾಸ ಮತ್ತು ಸ್ವತಂತ್ರಾ ನಂತರದ ಭಾರತದ ಇತಿಹಾಸವನ್ನು ತಿಳಿದುಕೊಳ್ಳಬೇಕು. ಇದು ನಮ್ಮ ಭವಿಷ್ಯದ ಶಕ್ತಿಯುತ ಭಾರತವನ್ನು ನಿರ್ಮಿಸಲು ನಮಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಇತಿಹಾಸ ಪ್ರಮುಖವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

“ನವ ಭಾರತದ ರಾಜಕೀಯವನ್ನು ಸುಭದ್ರಗೊಳಿಸುವಲ್ಲಿ ಗಾಂಧಿ-ನೆಹರುವಿನಷ್ಟೇ ಪಾತ್ರವನ್ನು ಅಂಬೇಡ್ಕರ್ ಕೂಡಾ ವಹಿಸಿದ್ದಾರೆ. ಬಹುಮುಖಿ ಪ್ರತಿಭೆಯನ್ನು ಹೊಂದಿದ್ದ ಅಂಬೇಡ್ಕರ್, ಭಾರತದ ರಾಜಕೀಯ ಕಾನೂನನ್ನು ರಚಿಸಿದ್ದರು. ‘ಪ್ರಾಬ್ಲಂ ಆಫ್ ರುಪೀ’ ಎನ್ನುವ ಸಂಶೋಧನಾ ಪ್ರಬಂಧ ಬರೆದು ಆರ್‌ಬಿಐ ನಂತಹ ಒಂದು ಬಲಿಷ್ಠ ಸಂಸ್ಥೆಯನ್ನು ಸ್ಥಾಪಿಸಲು ಅಂಬೇಡ್ಕರ್ ಕಾರಣಕರ್ತರಾಗಿದ್ದರು ಎಂಬುದನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕಾದ ವಾಸ್ತವ ಸತ್ಯ. ಜಗತ್ತಿನಾದ್ಯಂತ ವರ್ಗದ ಆಧಾರದಲ್ಲಿ ತಾರತಮ್ಯ ಶೋಷಣೆ, ದೌರ್ಜನ್ಯ ನಡೆಯುತ್ತಿದ್ದಾಗ, ಅದಕ್ಕಿಂತಲೂ ಕಠೋರವಾದ ರೀತಿಯಲ್ಲಿ, ವರ್ಣದ ಆಧಾರದಲ್ಲಿ ತಾರತಮ್ಯ ದೌರ್ಜನ್ಯ ನಡೆಯುತ್ತಿದೆ ಎಂದು ನಿರ್ಭಯವಾಗಿ ಹೇಳುವುದರ ಜೊತೆಗೆ ಅದನ್ನು ನಾಶಪಡಿಸುವ ರೀತಿಯನ್ನು ಹೇಳಿದ್ದು ಅಂಬೇಡ್ಕರ್. ನಿಜವಾದ ಸ್ವಾತಂತ್ರ ಎಂದರೆ, ವರ್ಣ ಮತ್ತು ವರ್ಗಾಧಾರಿತ ಪದ್ದತಿಯಿಂದ ಬಿಡಿಸಿಕೊಳ್ಳುವುದೇ ಆಗಿದೆ ಎಂದು ಹೇಳಿದ್ದರು. ಹಾಗಾಗಿಯೆ ಇದರ ವಿರುದ್ಧ ಹೋರಾಡಲು ಅವರಿಗೆ ಸಾಧ್ಯವಾಯಿತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರೆಂಬುದು ನನಗೆ ಬೇಕಿಲ್ಲ. ಬದಲಿಗೆ ಮನುಷ್ಯರ ದೃಷ್ಟಿಯಲ್ಲಿ ಮನುಷ್ಯರೆಲ್ಲರೂ ಸಮಾನರು ಎಂಬುದು ಬೇಕು- ಡಾ.ಬಿ.ಆರ್.ಅಂಬೇಡ್ಕರ್

“ಬ್ರಿಟಿಷರಿಂದ ದೇಶ ಸ್ವತಂತ್ರವಾಗಬೇಕೆಂದು ಗಾಂಧಿ ಹೇಳುತ್ತಿದ್ದರು. ಆದರೆ ಅಂಬೇಡ್ಕರ್, ಮೊದಲು ನಮ್ಮ ಮನೆಯೊಳಗಿನವರಿಂದಲೇ ಸ್ವತಂತ್ರರಾಗಬೇಕು ಎಂದು ವಾದಿಸುತ್ತಿದ್ದರು. ಇವರೀರ್ವರನ್ನು ಬೇರೆ-ಬೇರೆಯಾಗಿ ಹಲವರು ಕಂಡಿದ್ದಾರೆ. ಆದರೆ ವಾಸ್ತವದಲ್ಲಿ ಇವರಿಬ್ಬರೂ ದಾಸ್ಯದ ವಿರುದ್ಧ ಮತ್ತು ಸ್ವಾತಂತ್ರದ ಪರವಾಗಿದ್ದವರು. ಇಬ್ಬರಿಗೂ ರೈಲು ಪ್ರಯಾಣವೆ ಪ್ರಮುಖ ತಿರುವಾಗಿತ್ತು.”

“ರಾಜಕೀಯ ಸೂಕ್ಷ್ಮತೆಯನ್ನು ತಿಳಿದಿದ್ದ ಅಂಬೇಡ್ಕರ್, ರಾಜಕೀಯ ಜನನಾಯಕತ್ವಕ್ಕಿಂತ ಸಮೂಹ ಜನನಾಯಕತ್ವದ ಅಗತ್ಯವನ್ನು ಕಂಡುಕೊಂಡರು. ಬದಲಾವಣೆ ಎನ್ನುವುದು ತುಳಿತಕ್ಕೊಳಗಾದವರಿಂದ, ತಳ ಸಮುದಾಯದವರಿಂದ ಆರಂಭವಾಗಬೇಕು. ಆಗ ಮಾತ್ರ ಒಟ್ಟು ವ್ಯವಸ್ಥೆಯಲ್ಲಿ ನಾವು ಬಯಸುವ ಬದಲಾವಣೆ ತರಲು ಸಾಧ್ಯ ಎಂದು ಗಂಟಾಘೋಷವಾಗಿ ಹೇಳಿದರು. ಹಾಗಾಗಿಯೇ ಕಾರ್ಮಿಕರ ಪರ, ಮಹಿಳಾ ಪರ, ತಳ ಸಮುದಾಯದ ಪರ, ಜಾತಿ ನಿರ್ಮೂಲನೆ, ಆರ್ಥಿಕ ಸ್ವಾಯತ್ತತೆ ಎನ್ನುವ ಅಂಶಗಳನ್ನಿಟ್ಟುಕೊಂಡು ಹೋರಾಟ ಮಾಡಿದರು. ಅಂಬೇಡ್ಕರ್ ಇಂದು ಬದುಕಿದ್ದಿದ್ದರೂ ಸಹ ಇಂದಿನ ಪರಿಸ್ಥಿತಿಗೆ ತಕ್ಕಂತೆ ಚಿಂತಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಅಂಬೇಡ್ಕರ್ ಕೇಳಿದ ಹಲವು ಪ್ರಶ್ನೆಗಳಿಗೆ ಇಂದಿಗೂ ಉತ್ತರವಿಲ್ಲ. ಹಾಗಾಗಿ ಇಂಥಾ ಮೇರು ವ್ಯಕ್ತಿತ್ವದ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಧಾರಾವಾಹಿಯಾಗಿ ಪ್ರಸಾರ ಮಾಡುತ್ತಿರುವ ಜೀ ವಾಹಿನಿಗೂ ಮತ್ತು ಇದನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿತ್ತು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗೆ ಡಬ್ಬಿಂಗ್ ವಿಭಾಗದಲ್ಲಿ ಜೀ ಕುಟುಂಬ ಪ್ರಶಸ್ತಿ ಲಭಿಸಿತ್ತು.

ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಒಂದು ವಾರ ಕಾರಣಾಂತರಗಳಿಂದ ಧಾರವಾಹಿ ಪ್ರಸಾರವಾಗೇ ಇದ್ದಾಗ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸುವ ಮಟ್ಟಿದೆ ಇದು ಜನರ ಮನಗೆದ್ದಿದೆ. ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಇತ್ತೀಚೆಗೆ ಈ ಧಾರಾವಾಹಿಯನ್ನು ನಿಲ್ಲಿಸುವಂತೆ ಬೆದರಿಕೆಗಳು ಬರುತ್ತಿವೆ ಎಂದು ಜೀ ವಾಹಿನಿಯ ಮುಖ್ಯ ನಿರ್ವಾಹಕರಾಗಿರುವ ರಾಘವೇಂದ್ರ ಹುಣಸೂರು ಹೇಳಿದ್ದರು.

ಜಾಗೃತರಾಗಿ, ಚಿಂತಿಸಿ, ಒಂದಾಗಿ- ಡಾ.ಬಿ.ಆರ್.ಅಂಬೇಡ್ಕರ್

“ಮಹಾನಾಯಕ ಧಾರಾವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಮಧ್ಯರಾತ್ರಿಯಲ್ಲಿ ತುಂಬಾ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಇದು ಬೆದರಿಕೆಯಂತೆ ಕಾಣುತ್ತಿದೆ. ಆದರೆ ವೈಯಕ್ತಿಕವಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮಹಾನಾಯಕ ಮುಂದುವರೆಯುತ್ತದೆ. ಜೊತೆಗೆ ಇದು ನಮ್ಮ ಹೆಮ್ಮೆಯಾಗಿದ್ದು, ಇದರಲ್ಲಿ ವೈಯಕ್ತಿಕ ಪ್ರೀತಿಯೂ ಸೇರಿದೆ. ಇದನ್ನು ಒಂದು ಸಮಸ್ಯೆ ಎಂದು ನೀವು ಪರಿಗಣಿಸಿದರೆ, ವಾಸ್ತವದಲ್ಲಿ ಸಮಾಜಕ್ಕೆ ನೀವೇ ಒಂದು ಸಮಸ್ಯೆ! ಜೈ ಭೀಮ್” ಎಂದು ಟ್ವೀಟ್ ಮಾಡಿದ್ದರು.

ಬೆದರಿಕೆ ಕರೆಗಳ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ಪ್ರತಿರೋಧವೂ ವ್ಯಕ್ತವಾಗಿತ್ತು.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...