Homeಚಳವಳಿಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸವಾಲು ಹಾಕುತ್ತಾ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕ ಯಶಸ್ಸು ಕಂಡಿದೆ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅವರಿಗೆ ಸೆಡ್ಡು ಹೊಡೆದಿರುವ ರೈತರು, ಮುಜಾಫರ್‌ನಗರದಲ್ಲಿ  ಸೆಪ್ಟೆಂಬರ್‌ 5ರ ಭಾನುವಾರ ಹಿಂದೂ-ಮುಸ್ಲಿಂ ರೈತರು ಒಗ್ಗೂಡಿ ಅತಿ ದೊಡ್ಡ ಕಿಸಾನ್ ಮಹಾಪಂಚಾಯತ್ ನಡೆಸಿ ಯಶಸ್ವಿಯಾಗಿದ್ದಾರೆ. ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಮಹಾಪಂಚಾಯತ್ ಯೋಜಿಸಿತ್ತು.

2013 ರಲ್ಲಿ ಕೋಮು ಗಲಭೆಗಳಿಂದ ಕಂಗೆಟ್ಟಿದ್ದ ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯು, ಬಿಜೆಪಿ ಬರುವವರೆಗೂ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಭಾನುವಾರ, ಭಾರತೀಯ ಕಿಸಾನ್ ಯೂನಿಯನ್‌ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯುಪಿ ಜನರು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಸಹಿಸುವುದಿಲ್ಲ. ನಾವು ಈ ರೀತಿಯ ಸರ್ಕಾರಗಳನ್ನು ಆಯ್ಕೆ ಮಾಡಿದರೆ, ಗಲಭೆಗಳು ಉಂಟಾಗುತ್ತವೆ. ಈ ಸ್ಥಳ ಈ ಹಿಂದೆ “ಅಲ್ಲಾಹು ಅಕ್ಬರ್, ಹರ್ ಹರ್ ಮಹದೇವ್” ಎಂಬ ಘೋಷಣೆಗಳಿಗೆ ಸಾಕ್ಷಿಯಾಗಿತ್ತು. ಇವರೆಲ್ಲಾ ವಿಭಜನೆಯ ಬಗ್ಗೆ ಮಾತನಾಡುತ್ತಾರೆ, ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಹೇಳಿದ್ದಾರೆ.

“ಕಾಯ್ದೆಗಳನ್ನು ಹಿಂಪಡೆಯುವವರೆಗೂ ಮನೆಗೆ ಮರುಳುವ ಮಾತೇ ಇಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು. ರೈತರ ಮೇಲಿರುವ ಪ್ರಕರಣಗಳನ್ನು ಕೈಬಿಡಬೇಕು” ಎಂದು ರಾಕೇಶ್‌ ಟಿಕಾಯತ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

“ದೇಶವನ್ನು ಉಳಿಸುವುದಕ್ಕಾಗಿ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಹೇಳಿದ ಟಿಕಾಯತ್‌ ಅವರು, ಈ ರೀತಿಯ ಪಂಚಾಯತ್‌ಗಳನ್ನು ದೇಶದೆಲ್ಲೆಡೆ ಆಯೋಜಿಸಲಾಗುವುದು. ರೈತರನ್ನು ಉಳಿಸಬೇಕಾಗಿದೆ. ದೇಶವನ್ನು ಉಳಿಸಬೇಕಿದೆ. ಉದ್ಯಮ, ಉದ್ಯೋಗ, ನೌಕರರು ಎಲ್ಲರನ್ನೂ ಉಳಿಸಬೇಕಾಗಿದೆ. ಇದೇ ನಮ್ಮ ಈ ಹೋರಾಟದ ಗುರಿ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ ರೈತ ಸಂಘಟನೆಗಳು, ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಅಭಿಯಾನ ನಡೆಸಲಿವೆ. ಇದಕ್ಕೆ ಮುಜಾಫರ್‌ನಗರ ಮಹಾಪಂಚಾಯತ್‌ನಿಂದ ಚಾಲನೆ ನೀಡಲಾಗಿದೆ. ರಾಕೇಶ್ ಟಿಕಾಯತ್ ವಿರುದ್ಧ ಕಿಡಿಕಾರಿದ್ದ ರಾಜ್ಯ ಬಿಜೆಪಿ ಘಟಕ ಈಗ ಪರದೆಯ ಹಿಂದೆ ಸರಿಯುತ್ತಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್‌ ಕಾಲೇಜ್‌ ಮೈದಾನದಲ್ಲಿ ಹಿಂದು-ಮುಸ್ಲಿಂ ಸಮುದಾಯ, ರೈತರು, ರೈತ ಮಹಿಳೆಯರು ಯುವಕರು ನೆರೆದು, ಒಕ್ಕೂಟ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಮೈದಾನವಷ್ಟೇ ಅಲ್ಲದೆ, ನಗರದ ರಸ್ತೆ, ಫ್ಲೈಓವರ್‌ಗಳು ರೈತರಿಂದ ತುಂಬಿದ್ದವು.

ಮಹಾಪಂಚಾಯತ್‌ಗೆ ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಲಾಗಿತ್ತು. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...