Homeಚಳವಳಿಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸವಾಲು ಹಾಕುತ್ತಾ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕ ಯಶಸ್ಸು ಕಂಡಿದೆ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅವರಿಗೆ ಸೆಡ್ಡು ಹೊಡೆದಿರುವ ರೈತರು, ಮುಜಾಫರ್‌ನಗರದಲ್ಲಿ  ಸೆಪ್ಟೆಂಬರ್‌ 5ರ ಭಾನುವಾರ ಹಿಂದೂ-ಮುಸ್ಲಿಂ ರೈತರು ಒಗ್ಗೂಡಿ ಅತಿ ದೊಡ್ಡ ಕಿಸಾನ್ ಮಹಾಪಂಚಾಯತ್ ನಡೆಸಿ ಯಶಸ್ವಿಯಾಗಿದ್ದಾರೆ. ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಮಹಾಪಂಚಾಯತ್ ಯೋಜಿಸಿತ್ತು.

2013 ರಲ್ಲಿ ಕೋಮು ಗಲಭೆಗಳಿಂದ ಕಂಗೆಟ್ಟಿದ್ದ ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯು, ಬಿಜೆಪಿ ಬರುವವರೆಗೂ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಭಾನುವಾರ, ಭಾರತೀಯ ಕಿಸಾನ್ ಯೂನಿಯನ್‌ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯುಪಿ ಜನರು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಸಹಿಸುವುದಿಲ್ಲ. ನಾವು ಈ ರೀತಿಯ ಸರ್ಕಾರಗಳನ್ನು ಆಯ್ಕೆ ಮಾಡಿದರೆ, ಗಲಭೆಗಳು ಉಂಟಾಗುತ್ತವೆ. ಈ ಸ್ಥಳ ಈ ಹಿಂದೆ “ಅಲ್ಲಾಹು ಅಕ್ಬರ್, ಹರ್ ಹರ್ ಮಹದೇವ್” ಎಂಬ ಘೋಷಣೆಗಳಿಗೆ ಸಾಕ್ಷಿಯಾಗಿತ್ತು. ಇವರೆಲ್ಲಾ ವಿಭಜನೆಯ ಬಗ್ಗೆ ಮಾತನಾಡುತ್ತಾರೆ, ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಹೇಳಿದ್ದಾರೆ.

“ಕಾಯ್ದೆಗಳನ್ನು ಹಿಂಪಡೆಯುವವರೆಗೂ ಮನೆಗೆ ಮರುಳುವ ಮಾತೇ ಇಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು. ರೈತರ ಮೇಲಿರುವ ಪ್ರಕರಣಗಳನ್ನು ಕೈಬಿಡಬೇಕು” ಎಂದು ರಾಕೇಶ್‌ ಟಿಕಾಯತ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

“ದೇಶವನ್ನು ಉಳಿಸುವುದಕ್ಕಾಗಿ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಹೇಳಿದ ಟಿಕಾಯತ್‌ ಅವರು, ಈ ರೀತಿಯ ಪಂಚಾಯತ್‌ಗಳನ್ನು ದೇಶದೆಲ್ಲೆಡೆ ಆಯೋಜಿಸಲಾಗುವುದು. ರೈತರನ್ನು ಉಳಿಸಬೇಕಾಗಿದೆ. ದೇಶವನ್ನು ಉಳಿಸಬೇಕಿದೆ. ಉದ್ಯಮ, ಉದ್ಯೋಗ, ನೌಕರರು ಎಲ್ಲರನ್ನೂ ಉಳಿಸಬೇಕಾಗಿದೆ. ಇದೇ ನಮ್ಮ ಈ ಹೋರಾಟದ ಗುರಿ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ ರೈತ ಸಂಘಟನೆಗಳು, ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಅಭಿಯಾನ ನಡೆಸಲಿವೆ. ಇದಕ್ಕೆ ಮುಜಾಫರ್‌ನಗರ ಮಹಾಪಂಚಾಯತ್‌ನಿಂದ ಚಾಲನೆ ನೀಡಲಾಗಿದೆ. ರಾಕೇಶ್ ಟಿಕಾಯತ್ ವಿರುದ್ಧ ಕಿಡಿಕಾರಿದ್ದ ರಾಜ್ಯ ಬಿಜೆಪಿ ಘಟಕ ಈಗ ಪರದೆಯ ಹಿಂದೆ ಸರಿಯುತ್ತಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್‌ ಕಾಲೇಜ್‌ ಮೈದಾನದಲ್ಲಿ ಹಿಂದು-ಮುಸ್ಲಿಂ ಸಮುದಾಯ, ರೈತರು, ರೈತ ಮಹಿಳೆಯರು ಯುವಕರು ನೆರೆದು, ಒಕ್ಕೂಟ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಮೈದಾನವಷ್ಟೇ ಅಲ್ಲದೆ, ನಗರದ ರಸ್ತೆ, ಫ್ಲೈಓವರ್‌ಗಳು ರೈತರಿಂದ ತುಂಬಿದ್ದವು.

ಮಹಾಪಂಚಾಯತ್‌ಗೆ ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಲಾಗಿತ್ತು. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...