Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...