Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...