Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...