Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...