Homeಮುಖಪುಟರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

- Advertisement -
- Advertisement -

ಈ ವಾರ ರಾಜಸ್ಥಾನದಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ಆಯೋಜಿಸಿರುವ ಕೃಷಿ ಕಾನೂನುಗಳ ವಿರುದ್ಧದ ಮಹಾಪಂಚಾಯತ್‌ಗಳ ಸರಣಿಯಲ್ಲಿ, ಇಂದು ಕರೌಲಿ ಜಿಲ್ಲೆಯ ಮೀನಾ ಸಮುದಾಯದ ಭದ್ರಕೋಟೆಯಾದ ಕರಿರಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಬೃಹತ್ ಜನಸ್ತೋಮ ಸೇರಿತ್ತು ಎಂದು ದಿ ಕಾರವಾನ್ ವರದಿ ಮಾಡಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮಾತನ್ನು ಕೇಳಲು ಬೃಹತ್ ಸಭೆ ಇಡೀ ದಿನ ಬಿಸಿಲಿನಲ್ಲಿ ಕಾದಿತ್ತು. “ಇದು ಎಂಎಸ್‌ಪಿ ಕುರಿತ ಹೋರಾಟ, ಇದು ರೈತರ ಉಳಿವಿಗಾಗಿ ಹೋರಾಟ, ನಿಮ್ಮ ಜಾತಿಗೂ ಇದಕ್ಕೂ ಸಂಬಂಧವಿಲ್ಲ, ಇದು ಎಲ್ಲರ ಹೋರಾಟ” ಎಂದು ಟಿಕಾಯತ್ ಹೇಳಿದರು.

ಅಂಚಿನ ಬೆಟ್ಟದ ಇಳಿಜಾರುಗಳಲ್ಲಿಯೂ ರೈತ-ಕಾರ್ಮಿಕರು ಕುಳಿತು ಭಾಷಣ ಆಲಿಸಿದರು. ಮೀನಾ ಸಮುದಾಯ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಅಡಿಯಲ್ಲಿ ಬರುತ್ತದೆ. ರಾಜ್ಯದ ಕೃಷಿ ಪ್ರದೇಶದಲ್ಲಿನ ಜಾತಿ ವರ್ಣಪಟಲದಾದ್ಯಂತ ಕೃಷಿ ಕಾನೂನುಗಳ ವಿರೋಧವು ಸ್ಥಿರವಾಗಿರುತ್ತದೆ ಎಂದು ಸಭೆ ದೃಢಪಡಿಸಿತು.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಆದರೆ, ಟಿಕಾಯತ್ ಹೊರತುಪಡಿಸಿ ಇತರ ನಾಯಕರ ಬಗ್ಗೆ ಜನಸಂದಣಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಆಕ್ಟಿವಿಸ್ಟ್ ಮತ್ತು ರಾಜಕಾರಣಿ ಯೋಗೇಂದ್ರ ಯಾದವ್ ಅವರನ್ನು “ಕೃಷಿ ಕಾನೂನುಗಳ ಬಗ್ಗೆ ಆಳವಾಗಿ ಬಲ್ಲ ಚಿಂತಕ’ ಎಂದು ಪರಿಚಯಿಸಲಾಯಿತು. ಆದರೆ ಪ್ರೇಕ್ಷಕರಿಂದ ಅವರು ಸಾಧಾರಣ ಪ್ರತಿಕ್ರಿಯೆಯನ್ನು ಪಡೆದರು.

ಎರಡು ದಿನಗಳ ಹಿಂದೆ ಸಿಕಾರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾರ್ಯಕ್ರಮದ ತಾರೆಯಾಗಿದ್ದ ರೈತ ಮುಖಂಡ ಅಮ್ರಾ ರಾಮ್, ಮಾಡರೇಟರ್ ರಕ್ಷಣೆಗೆ ಬರುವ ಮುನ್ನ ವೇದಿಕೆಯಿಂದ ಹೊರಗುಳಿದಿದ್ದರು. ಅವರು ಕೂಡ ಮಾತನಾಡಿದರು. ಆದರೆ ಘೋಷಣೆಗಳಿಂದಾಗಿ ಅವರ ಕೂಗು ಸಹ ತೀವ್ರವಾದ ಮೌನವನ್ನು ಎದುರಿಸಿತು. ಜಾಟ್ ನಾಯಕರಾದ ರಾಮ್ ಮತ್ತು ರಾಜಾರಾಮ್ ಮೀಲ್ ಒಟ್ಟು ಒಂದು ನಿಮಿಷಕ್ಕಿಂತ ಕಡಿಮೆ ಕಾಲ ಮಾತನಾಡಿದರು.

ಪಂಜಾಬ್ ಮತ್ತು ಹರಿಯಾಣಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿನ ಮಹಾಪಂಚಾಯತ್‌ಗಳು, ಹಾಗೆಯೇ ರಾಜ್ಯದ ಜಾಟ್ ಭದ್ರಕೋಟೆಗಳಲ್ಲಿನ ಮಹಾಪಂಚಾಯತ್‌ಗಳು ಪ್ರತಿಭಟನೆಗಳಿಗೆ ರಾಜಸ್ಥಾನದ ಜಾಟ್ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ. ಏತನ್ಮಧ್ಯೆ, ಪೂರ್ವ ರಾಜಸ್ಥಾನ ಪಟ್ಟಣವಾದ ದೌಸಾದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡೆಸಿದ ಬೃಹತ್ ರ್‍ಯಾಲಿಯು ಗುರ್ಜರ್ ಸಮುದಾಯದಲ್ಲೂ ಚಳುವಳಿಗೆ ಬೆಂಬಲವನ್ನು ತೋರಿಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

2011 ರ ಜನಗಣತಿಯ ಪ್ರಕಾರ ಕೇವಲ 2,288 ಜನಸಂಖ್ಯೆಯನ್ನು ಹೊಂದಿರುವ ಕರಿರಿಯಲ್ಲಿ ಶೇಕಡಾ 72 ಕ್ಕಿಂತಲೂ ಹೆಚ್ಚು ಪರಿಶಿಷ್ಟ ಪಂಗಡದವರಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಬೃಹತ್ ಹಾಜರಾತಿಯು ಒಟ್ಟು ನಿವಾಸಿಗಳನ್ನು ಹಲವು ಪಟ್ಟುಗಳಲ್ಲಿ ಮೀರಿಸಿತ್ತು.

ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ತಮ್ಮೊಂದಿಗೆ ಸೇರಲು ಸಿದ್ಧರಾಗಿರಬೇಕು ಎಂದು ಟಿಕಾಯತ್, ಯಾದವ್ ಮತ್ತು ಮತ್ತೊಬ್ಬ ಕೃಷಿ ಮುಖಂಡ ಯುಧ್ವೀರ್ ಸಿಂಗ್ ಕೇಳಿದರು. ಮಧ್ಯಾಹ್ನ ಪೂರ್ತಿ, ಮಹಾಪಂಚಾಯತ್‌ನಲ್ಲಿ ಸಬೆಯ ನಿರೂಪಕರು, ಗಡಿಯಲ್ಲಿ ಪ್ರತಿಭಟನೆಗೆ ಕುಳಿತವರ ಸಹಾಯಕ್ಕಾಗಿ ಪಡೆದ ಕೊಡುಗೆಗಳನ್ನು ಘೋಷಿಸಿದರು- 1,100 ರೂ.ನಿಂದ 1,25000 ರೂ.ವರೆಗೆ ಸಹಾಯಧನವನ್ನು ಡಜನ್‌ಗೂ ಹೆಚ್ಚು ಜನ/ಸಂಘಗಳು ನೀಡಿದ್ದರು.

“ನಾವು ನಿಮ್ಮನ್ನು ಅಲ್ಲಿಗೆ ಸ್ವಾಗತಿಸುತ್ತೇವೆ ಮತ್ತು ನಿಮ್ಮನ್ನು ನೋಡಿಕೊಳ್ಳುತ್ತೇವೆ, ಆದರೆ ನಾವು ನಿಮ್ಮನ್ನು ಕರೆದಾಗ ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಬರಬೇಕಾಗುತ್ತದೆ” ಎಂದು ಟಿಕಾಯತ್ ಹೇಳಿದರು.

“ನಾವೆಲ್ಲರೂ ಸಂಪೂರ್ಣವಾಗಿ ಇಲ್ಲಿದ್ದೇವೆ. ಸಂಪೂರ್ಣವಾಗಿ ರಾಕೇಶ್ ಟಿಕಾಯತ್ ಅವರೊಂದಿಗೆ. ನಾವು ಮೋದಿಯ ಮುಖವನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಗೆ ಅವರ ಶಾಸಕರನ್ನು ಗ್ರಾಮಕ್ಕೆ ಪ್ರವೇಶಿಸಲು ನಾವು ಅನುಮತಿಸುವುದಿಲ್ಲ” ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದ ಕರಿರಿ ನಿವಾಸಿ ರಾಮ್‌ಲಾಲ್ ಮೀನಾ ದಿನದ ಕೊನೆಯಲ್ಲಿ ಮಾಧ್ಯಮಗಳಿಗೆ ಹೇಳಿದರು


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...