Homeಮುಖಪುಟರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

- Advertisement -
- Advertisement -

ಈ ವಾರ ರಾಜಸ್ಥಾನದಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ಆಯೋಜಿಸಿರುವ ಕೃಷಿ ಕಾನೂನುಗಳ ವಿರುದ್ಧದ ಮಹಾಪಂಚಾಯತ್‌ಗಳ ಸರಣಿಯಲ್ಲಿ, ಇಂದು ಕರೌಲಿ ಜಿಲ್ಲೆಯ ಮೀನಾ ಸಮುದಾಯದ ಭದ್ರಕೋಟೆಯಾದ ಕರಿರಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಬೃಹತ್ ಜನಸ್ತೋಮ ಸೇರಿತ್ತು ಎಂದು ದಿ ಕಾರವಾನ್ ವರದಿ ಮಾಡಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮಾತನ್ನು ಕೇಳಲು ಬೃಹತ್ ಸಭೆ ಇಡೀ ದಿನ ಬಿಸಿಲಿನಲ್ಲಿ ಕಾದಿತ್ತು. “ಇದು ಎಂಎಸ್‌ಪಿ ಕುರಿತ ಹೋರಾಟ, ಇದು ರೈತರ ಉಳಿವಿಗಾಗಿ ಹೋರಾಟ, ನಿಮ್ಮ ಜಾತಿಗೂ ಇದಕ್ಕೂ ಸಂಬಂಧವಿಲ್ಲ, ಇದು ಎಲ್ಲರ ಹೋರಾಟ” ಎಂದು ಟಿಕಾಯತ್ ಹೇಳಿದರು.

ಅಂಚಿನ ಬೆಟ್ಟದ ಇಳಿಜಾರುಗಳಲ್ಲಿಯೂ ರೈತ-ಕಾರ್ಮಿಕರು ಕುಳಿತು ಭಾಷಣ ಆಲಿಸಿದರು. ಮೀನಾ ಸಮುದಾಯ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಅಡಿಯಲ್ಲಿ ಬರುತ್ತದೆ. ರಾಜ್ಯದ ಕೃಷಿ ಪ್ರದೇಶದಲ್ಲಿನ ಜಾತಿ ವರ್ಣಪಟಲದಾದ್ಯಂತ ಕೃಷಿ ಕಾನೂನುಗಳ ವಿರೋಧವು ಸ್ಥಿರವಾಗಿರುತ್ತದೆ ಎಂದು ಸಭೆ ದೃಢಪಡಿಸಿತು.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಆದರೆ, ಟಿಕಾಯತ್ ಹೊರತುಪಡಿಸಿ ಇತರ ನಾಯಕರ ಬಗ್ಗೆ ಜನಸಂದಣಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಆಕ್ಟಿವಿಸ್ಟ್ ಮತ್ತು ರಾಜಕಾರಣಿ ಯೋಗೇಂದ್ರ ಯಾದವ್ ಅವರನ್ನು “ಕೃಷಿ ಕಾನೂನುಗಳ ಬಗ್ಗೆ ಆಳವಾಗಿ ಬಲ್ಲ ಚಿಂತಕ’ ಎಂದು ಪರಿಚಯಿಸಲಾಯಿತು. ಆದರೆ ಪ್ರೇಕ್ಷಕರಿಂದ ಅವರು ಸಾಧಾರಣ ಪ್ರತಿಕ್ರಿಯೆಯನ್ನು ಪಡೆದರು.

ಎರಡು ದಿನಗಳ ಹಿಂದೆ ಸಿಕಾರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾರ್ಯಕ್ರಮದ ತಾರೆಯಾಗಿದ್ದ ರೈತ ಮುಖಂಡ ಅಮ್ರಾ ರಾಮ್, ಮಾಡರೇಟರ್ ರಕ್ಷಣೆಗೆ ಬರುವ ಮುನ್ನ ವೇದಿಕೆಯಿಂದ ಹೊರಗುಳಿದಿದ್ದರು. ಅವರು ಕೂಡ ಮಾತನಾಡಿದರು. ಆದರೆ ಘೋಷಣೆಗಳಿಂದಾಗಿ ಅವರ ಕೂಗು ಸಹ ತೀವ್ರವಾದ ಮೌನವನ್ನು ಎದುರಿಸಿತು. ಜಾಟ್ ನಾಯಕರಾದ ರಾಮ್ ಮತ್ತು ರಾಜಾರಾಮ್ ಮೀಲ್ ಒಟ್ಟು ಒಂದು ನಿಮಿಷಕ್ಕಿಂತ ಕಡಿಮೆ ಕಾಲ ಮಾತನಾಡಿದರು.

ಪಂಜಾಬ್ ಮತ್ತು ಹರಿಯಾಣಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿನ ಮಹಾಪಂಚಾಯತ್‌ಗಳು, ಹಾಗೆಯೇ ರಾಜ್ಯದ ಜಾಟ್ ಭದ್ರಕೋಟೆಗಳಲ್ಲಿನ ಮಹಾಪಂಚಾಯತ್‌ಗಳು ಪ್ರತಿಭಟನೆಗಳಿಗೆ ರಾಜಸ್ಥಾನದ ಜಾಟ್ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ. ಏತನ್ಮಧ್ಯೆ, ಪೂರ್ವ ರಾಜಸ್ಥಾನ ಪಟ್ಟಣವಾದ ದೌಸಾದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡೆಸಿದ ಬೃಹತ್ ರ್‍ಯಾಲಿಯು ಗುರ್ಜರ್ ಸಮುದಾಯದಲ್ಲೂ ಚಳುವಳಿಗೆ ಬೆಂಬಲವನ್ನು ತೋರಿಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

2011 ರ ಜನಗಣತಿಯ ಪ್ರಕಾರ ಕೇವಲ 2,288 ಜನಸಂಖ್ಯೆಯನ್ನು ಹೊಂದಿರುವ ಕರಿರಿಯಲ್ಲಿ ಶೇಕಡಾ 72 ಕ್ಕಿಂತಲೂ ಹೆಚ್ಚು ಪರಿಶಿಷ್ಟ ಪಂಗಡದವರಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಬೃಹತ್ ಹಾಜರಾತಿಯು ಒಟ್ಟು ನಿವಾಸಿಗಳನ್ನು ಹಲವು ಪಟ್ಟುಗಳಲ್ಲಿ ಮೀರಿಸಿತ್ತು.

ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ತಮ್ಮೊಂದಿಗೆ ಸೇರಲು ಸಿದ್ಧರಾಗಿರಬೇಕು ಎಂದು ಟಿಕಾಯತ್, ಯಾದವ್ ಮತ್ತು ಮತ್ತೊಬ್ಬ ಕೃಷಿ ಮುಖಂಡ ಯುಧ್ವೀರ್ ಸಿಂಗ್ ಕೇಳಿದರು. ಮಧ್ಯಾಹ್ನ ಪೂರ್ತಿ, ಮಹಾಪಂಚಾಯತ್‌ನಲ್ಲಿ ಸಬೆಯ ನಿರೂಪಕರು, ಗಡಿಯಲ್ಲಿ ಪ್ರತಿಭಟನೆಗೆ ಕುಳಿತವರ ಸಹಾಯಕ್ಕಾಗಿ ಪಡೆದ ಕೊಡುಗೆಗಳನ್ನು ಘೋಷಿಸಿದರು- 1,100 ರೂ.ನಿಂದ 1,25000 ರೂ.ವರೆಗೆ ಸಹಾಯಧನವನ್ನು ಡಜನ್‌ಗೂ ಹೆಚ್ಚು ಜನ/ಸಂಘಗಳು ನೀಡಿದ್ದರು.

“ನಾವು ನಿಮ್ಮನ್ನು ಅಲ್ಲಿಗೆ ಸ್ವಾಗತಿಸುತ್ತೇವೆ ಮತ್ತು ನಿಮ್ಮನ್ನು ನೋಡಿಕೊಳ್ಳುತ್ತೇವೆ, ಆದರೆ ನಾವು ನಿಮ್ಮನ್ನು ಕರೆದಾಗ ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಬರಬೇಕಾಗುತ್ತದೆ” ಎಂದು ಟಿಕಾಯತ್ ಹೇಳಿದರು.

“ನಾವೆಲ್ಲರೂ ಸಂಪೂರ್ಣವಾಗಿ ಇಲ್ಲಿದ್ದೇವೆ. ಸಂಪೂರ್ಣವಾಗಿ ರಾಕೇಶ್ ಟಿಕಾಯತ್ ಅವರೊಂದಿಗೆ. ನಾವು ಮೋದಿಯ ಮುಖವನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಗೆ ಅವರ ಶಾಸಕರನ್ನು ಗ್ರಾಮಕ್ಕೆ ಪ್ರವೇಶಿಸಲು ನಾವು ಅನುಮತಿಸುವುದಿಲ್ಲ” ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದ ಕರಿರಿ ನಿವಾಸಿ ರಾಮ್‌ಲಾಲ್ ಮೀನಾ ದಿನದ ಕೊನೆಯಲ್ಲಿ ಮಾಧ್ಯಮಗಳಿಗೆ ಹೇಳಿದರು


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...