Homeಮುಖಪುಟರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

- Advertisement -
- Advertisement -

ಈ ವಾರ ರಾಜಸ್ಥಾನದಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ಆಯೋಜಿಸಿರುವ ಕೃಷಿ ಕಾನೂನುಗಳ ವಿರುದ್ಧದ ಮಹಾಪಂಚಾಯತ್‌ಗಳ ಸರಣಿಯಲ್ಲಿ, ಇಂದು ಕರೌಲಿ ಜಿಲ್ಲೆಯ ಮೀನಾ ಸಮುದಾಯದ ಭದ್ರಕೋಟೆಯಾದ ಕರಿರಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಬೃಹತ್ ಜನಸ್ತೋಮ ಸೇರಿತ್ತು ಎಂದು ದಿ ಕಾರವಾನ್ ವರದಿ ಮಾಡಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮಾತನ್ನು ಕೇಳಲು ಬೃಹತ್ ಸಭೆ ಇಡೀ ದಿನ ಬಿಸಿಲಿನಲ್ಲಿ ಕಾದಿತ್ತು. “ಇದು ಎಂಎಸ್‌ಪಿ ಕುರಿತ ಹೋರಾಟ, ಇದು ರೈತರ ಉಳಿವಿಗಾಗಿ ಹೋರಾಟ, ನಿಮ್ಮ ಜಾತಿಗೂ ಇದಕ್ಕೂ ಸಂಬಂಧವಿಲ್ಲ, ಇದು ಎಲ್ಲರ ಹೋರಾಟ” ಎಂದು ಟಿಕಾಯತ್ ಹೇಳಿದರು.

ಅಂಚಿನ ಬೆಟ್ಟದ ಇಳಿಜಾರುಗಳಲ್ಲಿಯೂ ರೈತ-ಕಾರ್ಮಿಕರು ಕುಳಿತು ಭಾಷಣ ಆಲಿಸಿದರು. ಮೀನಾ ಸಮುದಾಯ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಅಡಿಯಲ್ಲಿ ಬರುತ್ತದೆ. ರಾಜ್ಯದ ಕೃಷಿ ಪ್ರದೇಶದಲ್ಲಿನ ಜಾತಿ ವರ್ಣಪಟಲದಾದ್ಯಂತ ಕೃಷಿ ಕಾನೂನುಗಳ ವಿರೋಧವು ಸ್ಥಿರವಾಗಿರುತ್ತದೆ ಎಂದು ಸಭೆ ದೃಢಪಡಿಸಿತು.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಆದರೆ, ಟಿಕಾಯತ್ ಹೊರತುಪಡಿಸಿ ಇತರ ನಾಯಕರ ಬಗ್ಗೆ ಜನಸಂದಣಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಆಕ್ಟಿವಿಸ್ಟ್ ಮತ್ತು ರಾಜಕಾರಣಿ ಯೋಗೇಂದ್ರ ಯಾದವ್ ಅವರನ್ನು “ಕೃಷಿ ಕಾನೂನುಗಳ ಬಗ್ಗೆ ಆಳವಾಗಿ ಬಲ್ಲ ಚಿಂತಕ’ ಎಂದು ಪರಿಚಯಿಸಲಾಯಿತು. ಆದರೆ ಪ್ರೇಕ್ಷಕರಿಂದ ಅವರು ಸಾಧಾರಣ ಪ್ರತಿಕ್ರಿಯೆಯನ್ನು ಪಡೆದರು.

ಎರಡು ದಿನಗಳ ಹಿಂದೆ ಸಿಕಾರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾರ್ಯಕ್ರಮದ ತಾರೆಯಾಗಿದ್ದ ರೈತ ಮುಖಂಡ ಅಮ್ರಾ ರಾಮ್, ಮಾಡರೇಟರ್ ರಕ್ಷಣೆಗೆ ಬರುವ ಮುನ್ನ ವೇದಿಕೆಯಿಂದ ಹೊರಗುಳಿದಿದ್ದರು. ಅವರು ಕೂಡ ಮಾತನಾಡಿದರು. ಆದರೆ ಘೋಷಣೆಗಳಿಂದಾಗಿ ಅವರ ಕೂಗು ಸಹ ತೀವ್ರವಾದ ಮೌನವನ್ನು ಎದುರಿಸಿತು. ಜಾಟ್ ನಾಯಕರಾದ ರಾಮ್ ಮತ್ತು ರಾಜಾರಾಮ್ ಮೀಲ್ ಒಟ್ಟು ಒಂದು ನಿಮಿಷಕ್ಕಿಂತ ಕಡಿಮೆ ಕಾಲ ಮಾತನಾಡಿದರು.

ಪಂಜಾಬ್ ಮತ್ತು ಹರಿಯಾಣಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿನ ಮಹಾಪಂಚಾಯತ್‌ಗಳು, ಹಾಗೆಯೇ ರಾಜ್ಯದ ಜಾಟ್ ಭದ್ರಕೋಟೆಗಳಲ್ಲಿನ ಮಹಾಪಂಚಾಯತ್‌ಗಳು ಪ್ರತಿಭಟನೆಗಳಿಗೆ ರಾಜಸ್ಥಾನದ ಜಾಟ್ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ. ಏತನ್ಮಧ್ಯೆ, ಪೂರ್ವ ರಾಜಸ್ಥಾನ ಪಟ್ಟಣವಾದ ದೌಸಾದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡೆಸಿದ ಬೃಹತ್ ರ್‍ಯಾಲಿಯು ಗುರ್ಜರ್ ಸಮುದಾಯದಲ್ಲೂ ಚಳುವಳಿಗೆ ಬೆಂಬಲವನ್ನು ತೋರಿಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

2011 ರ ಜನಗಣತಿಯ ಪ್ರಕಾರ ಕೇವಲ 2,288 ಜನಸಂಖ್ಯೆಯನ್ನು ಹೊಂದಿರುವ ಕರಿರಿಯಲ್ಲಿ ಶೇಕಡಾ 72 ಕ್ಕಿಂತಲೂ ಹೆಚ್ಚು ಪರಿಶಿಷ್ಟ ಪಂಗಡದವರಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಬೃಹತ್ ಹಾಜರಾತಿಯು ಒಟ್ಟು ನಿವಾಸಿಗಳನ್ನು ಹಲವು ಪಟ್ಟುಗಳಲ್ಲಿ ಮೀರಿಸಿತ್ತು.

ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ತಮ್ಮೊಂದಿಗೆ ಸೇರಲು ಸಿದ್ಧರಾಗಿರಬೇಕು ಎಂದು ಟಿಕಾಯತ್, ಯಾದವ್ ಮತ್ತು ಮತ್ತೊಬ್ಬ ಕೃಷಿ ಮುಖಂಡ ಯುಧ್ವೀರ್ ಸಿಂಗ್ ಕೇಳಿದರು. ಮಧ್ಯಾಹ್ನ ಪೂರ್ತಿ, ಮಹಾಪಂಚಾಯತ್‌ನಲ್ಲಿ ಸಬೆಯ ನಿರೂಪಕರು, ಗಡಿಯಲ್ಲಿ ಪ್ರತಿಭಟನೆಗೆ ಕುಳಿತವರ ಸಹಾಯಕ್ಕಾಗಿ ಪಡೆದ ಕೊಡುಗೆಗಳನ್ನು ಘೋಷಿಸಿದರು- 1,100 ರೂ.ನಿಂದ 1,25000 ರೂ.ವರೆಗೆ ಸಹಾಯಧನವನ್ನು ಡಜನ್‌ಗೂ ಹೆಚ್ಚು ಜನ/ಸಂಘಗಳು ನೀಡಿದ್ದರು.

“ನಾವು ನಿಮ್ಮನ್ನು ಅಲ್ಲಿಗೆ ಸ್ವಾಗತಿಸುತ್ತೇವೆ ಮತ್ತು ನಿಮ್ಮನ್ನು ನೋಡಿಕೊಳ್ಳುತ್ತೇವೆ, ಆದರೆ ನಾವು ನಿಮ್ಮನ್ನು ಕರೆದಾಗ ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಬರಬೇಕಾಗುತ್ತದೆ” ಎಂದು ಟಿಕಾಯತ್ ಹೇಳಿದರು.

“ನಾವೆಲ್ಲರೂ ಸಂಪೂರ್ಣವಾಗಿ ಇಲ್ಲಿದ್ದೇವೆ. ಸಂಪೂರ್ಣವಾಗಿ ರಾಕೇಶ್ ಟಿಕಾಯತ್ ಅವರೊಂದಿಗೆ. ನಾವು ಮೋದಿಯ ಮುಖವನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಗೆ ಅವರ ಶಾಸಕರನ್ನು ಗ್ರಾಮಕ್ಕೆ ಪ್ರವೇಶಿಸಲು ನಾವು ಅನುಮತಿಸುವುದಿಲ್ಲ” ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದ ಕರಿರಿ ನಿವಾಸಿ ರಾಮ್‌ಲಾಲ್ ಮೀನಾ ದಿನದ ಕೊನೆಯಲ್ಲಿ ಮಾಧ್ಯಮಗಳಿಗೆ ಹೇಳಿದರು


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...