Homeಮುಖಪುಟರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

- Advertisement -
- Advertisement -

ಈ ವಾರ ರಾಜಸ್ಥಾನದಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ಆಯೋಜಿಸಿರುವ ಕೃಷಿ ಕಾನೂನುಗಳ ವಿರುದ್ಧದ ಮಹಾಪಂಚಾಯತ್‌ಗಳ ಸರಣಿಯಲ್ಲಿ, ಇಂದು ಕರೌಲಿ ಜಿಲ್ಲೆಯ ಮೀನಾ ಸಮುದಾಯದ ಭದ್ರಕೋಟೆಯಾದ ಕರಿರಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಬೃಹತ್ ಜನಸ್ತೋಮ ಸೇರಿತ್ತು ಎಂದು ದಿ ಕಾರವಾನ್ ವರದಿ ಮಾಡಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮಾತನ್ನು ಕೇಳಲು ಬೃಹತ್ ಸಭೆ ಇಡೀ ದಿನ ಬಿಸಿಲಿನಲ್ಲಿ ಕಾದಿತ್ತು. “ಇದು ಎಂಎಸ್‌ಪಿ ಕುರಿತ ಹೋರಾಟ, ಇದು ರೈತರ ಉಳಿವಿಗಾಗಿ ಹೋರಾಟ, ನಿಮ್ಮ ಜಾತಿಗೂ ಇದಕ್ಕೂ ಸಂಬಂಧವಿಲ್ಲ, ಇದು ಎಲ್ಲರ ಹೋರಾಟ” ಎಂದು ಟಿಕಾಯತ್ ಹೇಳಿದರು.

ಅಂಚಿನ ಬೆಟ್ಟದ ಇಳಿಜಾರುಗಳಲ್ಲಿಯೂ ರೈತ-ಕಾರ್ಮಿಕರು ಕುಳಿತು ಭಾಷಣ ಆಲಿಸಿದರು. ಮೀನಾ ಸಮುದಾಯ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಅಡಿಯಲ್ಲಿ ಬರುತ್ತದೆ. ರಾಜ್ಯದ ಕೃಷಿ ಪ್ರದೇಶದಲ್ಲಿನ ಜಾತಿ ವರ್ಣಪಟಲದಾದ್ಯಂತ ಕೃಷಿ ಕಾನೂನುಗಳ ವಿರೋಧವು ಸ್ಥಿರವಾಗಿರುತ್ತದೆ ಎಂದು ಸಭೆ ದೃಢಪಡಿಸಿತು.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಆದರೆ, ಟಿಕಾಯತ್ ಹೊರತುಪಡಿಸಿ ಇತರ ನಾಯಕರ ಬಗ್ಗೆ ಜನಸಂದಣಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಆಕ್ಟಿವಿಸ್ಟ್ ಮತ್ತು ರಾಜಕಾರಣಿ ಯೋಗೇಂದ್ರ ಯಾದವ್ ಅವರನ್ನು “ಕೃಷಿ ಕಾನೂನುಗಳ ಬಗ್ಗೆ ಆಳವಾಗಿ ಬಲ್ಲ ಚಿಂತಕ’ ಎಂದು ಪರಿಚಯಿಸಲಾಯಿತು. ಆದರೆ ಪ್ರೇಕ್ಷಕರಿಂದ ಅವರು ಸಾಧಾರಣ ಪ್ರತಿಕ್ರಿಯೆಯನ್ನು ಪಡೆದರು.

ಎರಡು ದಿನಗಳ ಹಿಂದೆ ಸಿಕಾರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾರ್ಯಕ್ರಮದ ತಾರೆಯಾಗಿದ್ದ ರೈತ ಮುಖಂಡ ಅಮ್ರಾ ರಾಮ್, ಮಾಡರೇಟರ್ ರಕ್ಷಣೆಗೆ ಬರುವ ಮುನ್ನ ವೇದಿಕೆಯಿಂದ ಹೊರಗುಳಿದಿದ್ದರು. ಅವರು ಕೂಡ ಮಾತನಾಡಿದರು. ಆದರೆ ಘೋಷಣೆಗಳಿಂದಾಗಿ ಅವರ ಕೂಗು ಸಹ ತೀವ್ರವಾದ ಮೌನವನ್ನು ಎದುರಿಸಿತು. ಜಾಟ್ ನಾಯಕರಾದ ರಾಮ್ ಮತ್ತು ರಾಜಾರಾಮ್ ಮೀಲ್ ಒಟ್ಟು ಒಂದು ನಿಮಿಷಕ್ಕಿಂತ ಕಡಿಮೆ ಕಾಲ ಮಾತನಾಡಿದರು.

ಪಂಜಾಬ್ ಮತ್ತು ಹರಿಯಾಣಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿನ ಮಹಾಪಂಚಾಯತ್‌ಗಳು, ಹಾಗೆಯೇ ರಾಜ್ಯದ ಜಾಟ್ ಭದ್ರಕೋಟೆಗಳಲ್ಲಿನ ಮಹಾಪಂಚಾಯತ್‌ಗಳು ಪ್ರತಿಭಟನೆಗಳಿಗೆ ರಾಜಸ್ಥಾನದ ಜಾಟ್ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ. ಏತನ್ಮಧ್ಯೆ, ಪೂರ್ವ ರಾಜಸ್ಥಾನ ಪಟ್ಟಣವಾದ ದೌಸಾದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡೆಸಿದ ಬೃಹತ್ ರ್‍ಯಾಲಿಯು ಗುರ್ಜರ್ ಸಮುದಾಯದಲ್ಲೂ ಚಳುವಳಿಗೆ ಬೆಂಬಲವನ್ನು ತೋರಿಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

2011 ರ ಜನಗಣತಿಯ ಪ್ರಕಾರ ಕೇವಲ 2,288 ಜನಸಂಖ್ಯೆಯನ್ನು ಹೊಂದಿರುವ ಕರಿರಿಯಲ್ಲಿ ಶೇಕಡಾ 72 ಕ್ಕಿಂತಲೂ ಹೆಚ್ಚು ಪರಿಶಿಷ್ಟ ಪಂಗಡದವರಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಬೃಹತ್ ಹಾಜರಾತಿಯು ಒಟ್ಟು ನಿವಾಸಿಗಳನ್ನು ಹಲವು ಪಟ್ಟುಗಳಲ್ಲಿ ಮೀರಿಸಿತ್ತು.

ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ತಮ್ಮೊಂದಿಗೆ ಸೇರಲು ಸಿದ್ಧರಾಗಿರಬೇಕು ಎಂದು ಟಿಕಾಯತ್, ಯಾದವ್ ಮತ್ತು ಮತ್ತೊಬ್ಬ ಕೃಷಿ ಮುಖಂಡ ಯುಧ್ವೀರ್ ಸಿಂಗ್ ಕೇಳಿದರು. ಮಧ್ಯಾಹ್ನ ಪೂರ್ತಿ, ಮಹಾಪಂಚಾಯತ್‌ನಲ್ಲಿ ಸಬೆಯ ನಿರೂಪಕರು, ಗಡಿಯಲ್ಲಿ ಪ್ರತಿಭಟನೆಗೆ ಕುಳಿತವರ ಸಹಾಯಕ್ಕಾಗಿ ಪಡೆದ ಕೊಡುಗೆಗಳನ್ನು ಘೋಷಿಸಿದರು- 1,100 ರೂ.ನಿಂದ 1,25000 ರೂ.ವರೆಗೆ ಸಹಾಯಧನವನ್ನು ಡಜನ್‌ಗೂ ಹೆಚ್ಚು ಜನ/ಸಂಘಗಳು ನೀಡಿದ್ದರು.

“ನಾವು ನಿಮ್ಮನ್ನು ಅಲ್ಲಿಗೆ ಸ್ವಾಗತಿಸುತ್ತೇವೆ ಮತ್ತು ನಿಮ್ಮನ್ನು ನೋಡಿಕೊಳ್ಳುತ್ತೇವೆ, ಆದರೆ ನಾವು ನಿಮ್ಮನ್ನು ಕರೆದಾಗ ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಬರಬೇಕಾಗುತ್ತದೆ” ಎಂದು ಟಿಕಾಯತ್ ಹೇಳಿದರು.

“ನಾವೆಲ್ಲರೂ ಸಂಪೂರ್ಣವಾಗಿ ಇಲ್ಲಿದ್ದೇವೆ. ಸಂಪೂರ್ಣವಾಗಿ ರಾಕೇಶ್ ಟಿಕಾಯತ್ ಅವರೊಂದಿಗೆ. ನಾವು ಮೋದಿಯ ಮುಖವನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಗೆ ಅವರ ಶಾಸಕರನ್ನು ಗ್ರಾಮಕ್ಕೆ ಪ್ರವೇಶಿಸಲು ನಾವು ಅನುಮತಿಸುವುದಿಲ್ಲ” ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದ ಕರಿರಿ ನಿವಾಸಿ ರಾಮ್‌ಲಾಲ್ ಮೀನಾ ದಿನದ ಕೊನೆಯಲ್ಲಿ ಮಾಧ್ಯಮಗಳಿಗೆ ಹೇಳಿದರು


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...