Homeಮುಖಪುಟರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

- Advertisement -
- Advertisement -

ಈ ವಾರ ರಾಜಸ್ಥಾನದಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ಆಯೋಜಿಸಿರುವ ಕೃಷಿ ಕಾನೂನುಗಳ ವಿರುದ್ಧದ ಮಹಾಪಂಚಾಯತ್‌ಗಳ ಸರಣಿಯಲ್ಲಿ, ಇಂದು ಕರೌಲಿ ಜಿಲ್ಲೆಯ ಮೀನಾ ಸಮುದಾಯದ ಭದ್ರಕೋಟೆಯಾದ ಕರಿರಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಬೃಹತ್ ಜನಸ್ತೋಮ ಸೇರಿತ್ತು ಎಂದು ದಿ ಕಾರವಾನ್ ವರದಿ ಮಾಡಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮಾತನ್ನು ಕೇಳಲು ಬೃಹತ್ ಸಭೆ ಇಡೀ ದಿನ ಬಿಸಿಲಿನಲ್ಲಿ ಕಾದಿತ್ತು. “ಇದು ಎಂಎಸ್‌ಪಿ ಕುರಿತ ಹೋರಾಟ, ಇದು ರೈತರ ಉಳಿವಿಗಾಗಿ ಹೋರಾಟ, ನಿಮ್ಮ ಜಾತಿಗೂ ಇದಕ್ಕೂ ಸಂಬಂಧವಿಲ್ಲ, ಇದು ಎಲ್ಲರ ಹೋರಾಟ” ಎಂದು ಟಿಕಾಯತ್ ಹೇಳಿದರು.

ಅಂಚಿನ ಬೆಟ್ಟದ ಇಳಿಜಾರುಗಳಲ್ಲಿಯೂ ರೈತ-ಕಾರ್ಮಿಕರು ಕುಳಿತು ಭಾಷಣ ಆಲಿಸಿದರು. ಮೀನಾ ಸಮುದಾಯ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಅಡಿಯಲ್ಲಿ ಬರುತ್ತದೆ. ರಾಜ್ಯದ ಕೃಷಿ ಪ್ರದೇಶದಲ್ಲಿನ ಜಾತಿ ವರ್ಣಪಟಲದಾದ್ಯಂತ ಕೃಷಿ ಕಾನೂನುಗಳ ವಿರೋಧವು ಸ್ಥಿರವಾಗಿರುತ್ತದೆ ಎಂದು ಸಭೆ ದೃಢಪಡಿಸಿತು.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಆದರೆ, ಟಿಕಾಯತ್ ಹೊರತುಪಡಿಸಿ ಇತರ ನಾಯಕರ ಬಗ್ಗೆ ಜನಸಂದಣಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಆಕ್ಟಿವಿಸ್ಟ್ ಮತ್ತು ರಾಜಕಾರಣಿ ಯೋಗೇಂದ್ರ ಯಾದವ್ ಅವರನ್ನು “ಕೃಷಿ ಕಾನೂನುಗಳ ಬಗ್ಗೆ ಆಳವಾಗಿ ಬಲ್ಲ ಚಿಂತಕ’ ಎಂದು ಪರಿಚಯಿಸಲಾಯಿತು. ಆದರೆ ಪ್ರೇಕ್ಷಕರಿಂದ ಅವರು ಸಾಧಾರಣ ಪ್ರತಿಕ್ರಿಯೆಯನ್ನು ಪಡೆದರು.

ಎರಡು ದಿನಗಳ ಹಿಂದೆ ಸಿಕಾರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾರ್ಯಕ್ರಮದ ತಾರೆಯಾಗಿದ್ದ ರೈತ ಮುಖಂಡ ಅಮ್ರಾ ರಾಮ್, ಮಾಡರೇಟರ್ ರಕ್ಷಣೆಗೆ ಬರುವ ಮುನ್ನ ವೇದಿಕೆಯಿಂದ ಹೊರಗುಳಿದಿದ್ದರು. ಅವರು ಕೂಡ ಮಾತನಾಡಿದರು. ಆದರೆ ಘೋಷಣೆಗಳಿಂದಾಗಿ ಅವರ ಕೂಗು ಸಹ ತೀವ್ರವಾದ ಮೌನವನ್ನು ಎದುರಿಸಿತು. ಜಾಟ್ ನಾಯಕರಾದ ರಾಮ್ ಮತ್ತು ರಾಜಾರಾಮ್ ಮೀಲ್ ಒಟ್ಟು ಒಂದು ನಿಮಿಷಕ್ಕಿಂತ ಕಡಿಮೆ ಕಾಲ ಮಾತನಾಡಿದರು.

ಪಂಜಾಬ್ ಮತ್ತು ಹರಿಯಾಣಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿನ ಮಹಾಪಂಚಾಯತ್‌ಗಳು, ಹಾಗೆಯೇ ರಾಜ್ಯದ ಜಾಟ್ ಭದ್ರಕೋಟೆಗಳಲ್ಲಿನ ಮಹಾಪಂಚಾಯತ್‌ಗಳು ಪ್ರತಿಭಟನೆಗಳಿಗೆ ರಾಜಸ್ಥಾನದ ಜಾಟ್ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ. ಏತನ್ಮಧ್ಯೆ, ಪೂರ್ವ ರಾಜಸ್ಥಾನ ಪಟ್ಟಣವಾದ ದೌಸಾದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡೆಸಿದ ಬೃಹತ್ ರ್‍ಯಾಲಿಯು ಗುರ್ಜರ್ ಸಮುದಾಯದಲ್ಲೂ ಚಳುವಳಿಗೆ ಬೆಂಬಲವನ್ನು ತೋರಿಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

2011 ರ ಜನಗಣತಿಯ ಪ್ರಕಾರ ಕೇವಲ 2,288 ಜನಸಂಖ್ಯೆಯನ್ನು ಹೊಂದಿರುವ ಕರಿರಿಯಲ್ಲಿ ಶೇಕಡಾ 72 ಕ್ಕಿಂತಲೂ ಹೆಚ್ಚು ಪರಿಶಿಷ್ಟ ಪಂಗಡದವರಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಬೃಹತ್ ಹಾಜರಾತಿಯು ಒಟ್ಟು ನಿವಾಸಿಗಳನ್ನು ಹಲವು ಪಟ್ಟುಗಳಲ್ಲಿ ಮೀರಿಸಿತ್ತು.

ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ತಮ್ಮೊಂದಿಗೆ ಸೇರಲು ಸಿದ್ಧರಾಗಿರಬೇಕು ಎಂದು ಟಿಕಾಯತ್, ಯಾದವ್ ಮತ್ತು ಮತ್ತೊಬ್ಬ ಕೃಷಿ ಮುಖಂಡ ಯುಧ್ವೀರ್ ಸಿಂಗ್ ಕೇಳಿದರು. ಮಧ್ಯಾಹ್ನ ಪೂರ್ತಿ, ಮಹಾಪಂಚಾಯತ್‌ನಲ್ಲಿ ಸಬೆಯ ನಿರೂಪಕರು, ಗಡಿಯಲ್ಲಿ ಪ್ರತಿಭಟನೆಗೆ ಕುಳಿತವರ ಸಹಾಯಕ್ಕಾಗಿ ಪಡೆದ ಕೊಡುಗೆಗಳನ್ನು ಘೋಷಿಸಿದರು- 1,100 ರೂ.ನಿಂದ 1,25000 ರೂ.ವರೆಗೆ ಸಹಾಯಧನವನ್ನು ಡಜನ್‌ಗೂ ಹೆಚ್ಚು ಜನ/ಸಂಘಗಳು ನೀಡಿದ್ದರು.

“ನಾವು ನಿಮ್ಮನ್ನು ಅಲ್ಲಿಗೆ ಸ್ವಾಗತಿಸುತ್ತೇವೆ ಮತ್ತು ನಿಮ್ಮನ್ನು ನೋಡಿಕೊಳ್ಳುತ್ತೇವೆ, ಆದರೆ ನಾವು ನಿಮ್ಮನ್ನು ಕರೆದಾಗ ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಬರಬೇಕಾಗುತ್ತದೆ” ಎಂದು ಟಿಕಾಯತ್ ಹೇಳಿದರು.

“ನಾವೆಲ್ಲರೂ ಸಂಪೂರ್ಣವಾಗಿ ಇಲ್ಲಿದ್ದೇವೆ. ಸಂಪೂರ್ಣವಾಗಿ ರಾಕೇಶ್ ಟಿಕಾಯತ್ ಅವರೊಂದಿಗೆ. ನಾವು ಮೋದಿಯ ಮುಖವನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಗೆ ಅವರ ಶಾಸಕರನ್ನು ಗ್ರಾಮಕ್ಕೆ ಪ್ರವೇಶಿಸಲು ನಾವು ಅನುಮತಿಸುವುದಿಲ್ಲ” ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದ ಕರಿರಿ ನಿವಾಸಿ ರಾಮ್‌ಲಾಲ್ ಮೀನಾ ದಿನದ ಕೊನೆಯಲ್ಲಿ ಮಾಧ್ಯಮಗಳಿಗೆ ಹೇಳಿದರು


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...