HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...