HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...