HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...