HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...