Homeಮುಖಪುಟಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸೋಮವಾರ ಮಧ್ಯಾಹ್ನ ಜಿಲ್ಲೆಯ ಮಹೈಸಾಲ್ ಪಟ್ಟಣದಲ್ಲಿ ಒಂದೇ ಕುಟುಂಬದ ಒಂಬತ್ತು ಸದಸ್ಯರು ಶವವಾಗಿ ಪತ್ತೆಯಾಗಿದ್ದ ಘಟನೆ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಸಾಲಗಾರರ ಕಿರುಕುಳವೇ ಸಾವಿಗೆ ಕಾರಣ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ತನಿಖೆ ನಡೆಸಿದ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಡ್ಡಿದಾರರು ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಕಿರುಕುಳ ನೀಡಿದ್ದಕ್ಕಾಗಿ ಸೋಮವಾರ ರಾತ್ರಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅದರಲ್ಲಿ ಈವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯನ್ನು ಸಹ ಪೊಲೀಸರು ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಿಂದ್ಕರ್ ಮಾತನಾಡಿ, “ವಾನ್ಮೋರ್ ಸಹೋದರರು ಮತ್ತು ಕುಟುಂಬದ ಇತರ ಕೆಲವು ಸದಸ್ಯರು ಆರೋಪಿ ಲೇವಾದೇವಿಗಾರರಿಂದ ಬಡ್ಡಿಗೆ ಸಾಲ ಪಡೆದಿದ್ದರು. ಅವರು ನಿಯಮಿತವಾಗಿ ಬಡ್ಡಿಯ ಮೊತ್ತವನ್ನು ಪಾವತಿಸುತ್ತಿದ್ದರೂ, ಲೇವಾದೇವಿಗಾರರು ಮತ್ತು ಇತರ ಆರೋಪಿಗಳು ಪದೇ ಪದೇ ಸಾರ್ವಜನಿಕವಾಗಿ ಅವರಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಕಿರುಕುಳ ಸಹಿಸಲಾಗದೆ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಸದ್ಯ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ 12 ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಸಾಂಗ್ಲಿ, ಕೊಲ್ಲಾಪುರ, ಸೊಲ್ಲಾಪುರ ಮತ್ತು ಕರ್ನಾಟಕಕ್ಕೆ ತಂಡಗಳನ್ನು ಕಳುಹಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಇಬ್ಬರು ಸಹೋದರರಾದ ಮಾಣಿಕ್ ವಾನ್ಮೋರ್ (49) ಮತ್ತು ಪೋಪಟ್ ವಾನ್ಮೋರ್ (52), ಅವರ ಪತ್ನಿಯರು, ಮಕ್ಕಳು ಮತ್ತು ತಾಯಿ ಪ್ರತ್ಯೇಕ ಮನೆಗಳಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸ್ ಅಧಿಕಾರಿಗಳಿಗೆ ಮನೆಯಲ್ಲಿ ಪತ್ರವೊಂದು ದೊರಕಿ, ಸಾಲದ ಕಾರಣದಿಂದ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಬೆಳಕಿಗೆ ಬಂದಿತ್ತು. ಅಣ್ಣ ತಮ್ಮಂದಿರಾದ ಪಶುವೈದ್ಯ ಮಾಣಿಕ್ ಮತ್ತು ಶಿಕ್ಷಕರಾಗಿದ್ದ ಪೋಪಟ್ ಒಂದು ಕಿಲೋಮೀಟರ್ ಅಂತರದಲ್ಲಿ ವಾಸಿಸುತ್ತಿದ್ದರು.

ಮಾಣಿಕ್ ವಾನ್ಮೋರ್ ಅವರ ತಾಯಿ ಅಕ್ಕತೈ (72), ಅವರ ಪತ್ನಿ ರೇಖಾ (45), ಅವರ ಮಕ್ಕಳಾದ ಅನಿತಾ (28) ಮತ್ತು ಆದಿತ್ಯ (15) ಮತ್ತು ಪೋಪಟ್ ಅವರ ಮಗ ಶುಭಂ (28) ಅವರ ಶವಗಳು ಮಾಣಿಕ್‌ ಅವರ ಮನೆಯಲ್ಲಿ ಪತ್ತೆಯಾಗಿದ್ದವು. ಪೋಪಟ್ ವಾನ್ಮೋರ್ ಅವರ ಪತ್ನಿ ಸಂಗೀತಾ (48) ಮತ್ತು ಮಗಳು ಅರ್ಚನಾ (30) ಅವರ ಮೃತದೇಹಗಳು ಪೋಪಟ್ ಅವರ ಮನೆಯಲ್ಲಿ ಪತ್ತೆಯಾಗಿದ್ದವು.


ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...