Homeಮುಖಪುಟಮಹಾರಾಷ್ಟ| 'ಲಡ್ಕಿ ಬಹಿನ್ ಯೋಜನೆ' ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ...

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

- Advertisement -
- Advertisement -

ಮಹಿಳೆಯರಿಗಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯ ಲಾಭವನ್ನು 14, 298 ಪುರುಷರು ಪಡೆದಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ 21.44 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.

ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,500 ರೂಪಾಯಿ ನೇರ ಜಮಾ ಮಾಡುವ ಈ ಯೋಜನೆಯ ಹಣವನ್ನು ಸುಮಾರು 10 ತಿಂಗಳ ಕಾಲ ಈ 14 ಸಾವಿರ ಪುರುಷರು ಪಡೆದಿದ್ದಾರೆ.

ಲಡ್ಕಿ ಬಹಿನ್ ಯೋಜನೆಯು ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರ ಹಿಡಿಯಲು ಪ್ರಮುಖ ಕಾರಣವಾಗಿತ್ತು. ಕಳೆದ ವರ್ಷ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಈ ಯೋಜನೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮತ ತಂದು ಕೊಟ್ಟಿತ್ತು. ಆರ್ಥಿಕವಾಗಿ ಹಿಂದುಳಿದ ಅಥವಾ ಸಂಕಷ್ಟ ಅನುಭವಿಸುತ್ತಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರು ಈ ಯೋಜನೆಗೆ ಆರ್ಹರು.

ಕಳೆದ ವರ್ಷ ಜೂನ್‌ನಲ್ಲಿ ಈ ಯೋಜನೆ ಆರಂಭಗೊಂಡಾಗ ರಾಜ್ಯದ ಆರ್ಥಿಕತೆಯ ಮೇಲೆ ಹೊರೆ ಬೀಳುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿತ್ತು. ನಂತರ ಯೋಜನೆಯ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ ಎಂಬುವುದು ಪತ್ತೆಯಾಗಿತ್ತು. ಇತ್ತೀಚಿನ ಪರಿಶೀಲನೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 14,298 ಪುರುಷರು ಸುಳ್ಳು ದಾಖಲೆಗಳನ್ನು ನೀಡಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ 10 ತಿಂಗಳಿನಿಂದ ಅವರ ಖಾತೆಗೆ ಹಣ ಜಮೆ ಆಗಿದೆ ಎಂಬುವುದು ಬಯಲಾಗಿದೆ.

ಲಡ್ಕಿ ಬಹಿನ್ ಯೋಜನೆಯಡಿ 24.1 ಮಿಲಿಯನ್ ಫಲಾನುಭವಿಗಳಿಗೆ ತಿಂಗಳಿಗೆ 1,500 ರೂ. ಪಾವತಿಸಲು ರಾಜ್ಯ ಸರ್ಕಾರ ಪ್ರಸ್ತುತ 3,700 ಕೋಟಿ ರೂ. ಖರ್ಚು ಮಾಡುತ್ತಿದೆ ಎಂದು ವರದಿಗಳು ಹೇಳಿವೆ.

ಇತ್ತೀಚಿನ ಪರಿಶೀಲನಾ ವರದಿಯ ಪ್ರಕಾರ, ಕಳೆದ 12 ತಿಂಗಳುಗಳಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳಿಗೆ ಹಣ ಪಾವತಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ. ನಷ್ಟ ಉಂಟಾಗಿದೆ. ಕಳೆದ ಫೆಬ್ರವರಿಯಲ್ಲಿ, ಯೋಜನೆಯನ್ನು ಜಾರಿಗೊಳಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುಮಾರು 500,000 ಫಲಾನುಭವಿಗಳನ್ನು ಕೈಬಿಡಲಾಗಿದೆ ಎಂದು ಹೇಳಿತ್ತು. ಇದರಲ್ಲಿ ನಾಲ್ಕು ಚಕ್ರಗಳ ವಾಹನಗಳನ್ನು ಹೊಂದಿರುವ ಕುಟುಂಬಗಳ ಸುಮಾರು 162,000 ಮಹಿಳೆಯರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 287,000 ಫಲಾನುಭವಿಗಳು ಸೇರಿದ್ದಾರೆ (ಅವರು ಬೇರೆ ಯೋಜನೆಯಡಿಯಲ್ಲಿ ಪ್ರಯೋಜನಗಳಿಗೆ ಅರ್ಹರು).

ಇನ್ನು ಮಾಸಿಕವಾಗಿ ಹಣ ಪಡೆಯುತ್ತಿರುವವರಲ್ಲಿ ಕುಟುಂಬದ ಮೂರನೇ ಸದಸ್ಯರಾದ ಮಹಿಳೆಯರು ಕೂಡ ಸೇರಿದ್ದಾರೆ. ಒಂದು ಕುಟುಂಬದಿಂದ ಇಬ್ಬರು ಮಹಿಳೆಯರು ಮಾತ್ರ ಯೋಜನೆಗೆ ಅರ್ಹರು. ಆದರೆ, ಲಕ್ಷಾಂತರ ಮಹಿಳೆಯರು ವಂಚನೆಯಿಂದ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಇಂತಹ ಸುಮಾರು 797,000 ಪ್ರಕರಣಗಳಿಂದ ಸರ್ಕಾರದ ಬೊಕ್ಕಸಕ್ಕೆ 1,196 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಲಾಖೆ ಪತ್ತೆಹಚ್ಚಿದೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ 14,000ಕ್ಕೂ ಹೆಚ್ಚು ಪುರುಷರು ಪ್ರಯೋಜನ ಪಡೆದಿದ್ದಾರೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಲಡ್ಕಿ ಬಹಿನ್ ಯೋಜನೆ ಪುರುಷರಿಗಾಗಿ ಅಲ್ಲ, ಕಡಿಮೆ ಆದಾಯದ ಗುಂಪುಗಳ ನಿರ್ಗತಿಕ ಮಹಿಳೆಯರಿಗಾಗಿ ರೂಪಿಸಲಾಗಿದೆ. ಯೋಜನೆಯಡಿಯಲ್ಲಿ ಹಣವನ್ನು ಪಡೆದ ಪುರುಷರಿಂದ ರಾಜ್ಯ ಸರ್ಕಾರ ಹಣವನ್ನು ವಸೂಲಿ ಮಾಡಲಿದೆ. ಅವರು ಸಹಕರಿಸದಿದ್ದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...