Homeಮುಖಪುಟಮಹಾರಾಷ್ಟ| 'ಲಡ್ಕಿ ಬಹಿನ್ ಯೋಜನೆ' ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ...

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

- Advertisement -
- Advertisement -

ಮಹಿಳೆಯರಿಗಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯ ಲಾಭವನ್ನು 14, 298 ಪುರುಷರು ಪಡೆದಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ 21.44 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.

ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,500 ರೂಪಾಯಿ ನೇರ ಜಮಾ ಮಾಡುವ ಈ ಯೋಜನೆಯ ಹಣವನ್ನು ಸುಮಾರು 10 ತಿಂಗಳ ಕಾಲ ಈ 14 ಸಾವಿರ ಪುರುಷರು ಪಡೆದಿದ್ದಾರೆ.

ಲಡ್ಕಿ ಬಹಿನ್ ಯೋಜನೆಯು ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರ ಹಿಡಿಯಲು ಪ್ರಮುಖ ಕಾರಣವಾಗಿತ್ತು. ಕಳೆದ ವರ್ಷ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಈ ಯೋಜನೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮತ ತಂದು ಕೊಟ್ಟಿತ್ತು. ಆರ್ಥಿಕವಾಗಿ ಹಿಂದುಳಿದ ಅಥವಾ ಸಂಕಷ್ಟ ಅನುಭವಿಸುತ್ತಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರು ಈ ಯೋಜನೆಗೆ ಆರ್ಹರು.

ಕಳೆದ ವರ್ಷ ಜೂನ್‌ನಲ್ಲಿ ಈ ಯೋಜನೆ ಆರಂಭಗೊಂಡಾಗ ರಾಜ್ಯದ ಆರ್ಥಿಕತೆಯ ಮೇಲೆ ಹೊರೆ ಬೀಳುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿತ್ತು. ನಂತರ ಯೋಜನೆಯ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ ಎಂಬುವುದು ಪತ್ತೆಯಾಗಿತ್ತು. ಇತ್ತೀಚಿನ ಪರಿಶೀಲನೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 14,298 ಪುರುಷರು ಸುಳ್ಳು ದಾಖಲೆಗಳನ್ನು ನೀಡಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ 10 ತಿಂಗಳಿನಿಂದ ಅವರ ಖಾತೆಗೆ ಹಣ ಜಮೆ ಆಗಿದೆ ಎಂಬುವುದು ಬಯಲಾಗಿದೆ.

ಲಡ್ಕಿ ಬಹಿನ್ ಯೋಜನೆಯಡಿ 24.1 ಮಿಲಿಯನ್ ಫಲಾನುಭವಿಗಳಿಗೆ ತಿಂಗಳಿಗೆ 1,500 ರೂ. ಪಾವತಿಸಲು ರಾಜ್ಯ ಸರ್ಕಾರ ಪ್ರಸ್ತುತ 3,700 ಕೋಟಿ ರೂ. ಖರ್ಚು ಮಾಡುತ್ತಿದೆ ಎಂದು ವರದಿಗಳು ಹೇಳಿವೆ.

ಇತ್ತೀಚಿನ ಪರಿಶೀಲನಾ ವರದಿಯ ಪ್ರಕಾರ, ಕಳೆದ 12 ತಿಂಗಳುಗಳಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳಿಗೆ ಹಣ ಪಾವತಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ. ನಷ್ಟ ಉಂಟಾಗಿದೆ. ಕಳೆದ ಫೆಬ್ರವರಿಯಲ್ಲಿ, ಯೋಜನೆಯನ್ನು ಜಾರಿಗೊಳಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುಮಾರು 500,000 ಫಲಾನುಭವಿಗಳನ್ನು ಕೈಬಿಡಲಾಗಿದೆ ಎಂದು ಹೇಳಿತ್ತು. ಇದರಲ್ಲಿ ನಾಲ್ಕು ಚಕ್ರಗಳ ವಾಹನಗಳನ್ನು ಹೊಂದಿರುವ ಕುಟುಂಬಗಳ ಸುಮಾರು 162,000 ಮಹಿಳೆಯರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 287,000 ಫಲಾನುಭವಿಗಳು ಸೇರಿದ್ದಾರೆ (ಅವರು ಬೇರೆ ಯೋಜನೆಯಡಿಯಲ್ಲಿ ಪ್ರಯೋಜನಗಳಿಗೆ ಅರ್ಹರು).

ಇನ್ನು ಮಾಸಿಕವಾಗಿ ಹಣ ಪಡೆಯುತ್ತಿರುವವರಲ್ಲಿ ಕುಟುಂಬದ ಮೂರನೇ ಸದಸ್ಯರಾದ ಮಹಿಳೆಯರು ಕೂಡ ಸೇರಿದ್ದಾರೆ. ಒಂದು ಕುಟುಂಬದಿಂದ ಇಬ್ಬರು ಮಹಿಳೆಯರು ಮಾತ್ರ ಯೋಜನೆಗೆ ಅರ್ಹರು. ಆದರೆ, ಲಕ್ಷಾಂತರ ಮಹಿಳೆಯರು ವಂಚನೆಯಿಂದ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಇಂತಹ ಸುಮಾರು 797,000 ಪ್ರಕರಣಗಳಿಂದ ಸರ್ಕಾರದ ಬೊಕ್ಕಸಕ್ಕೆ 1,196 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಲಾಖೆ ಪತ್ತೆಹಚ್ಚಿದೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ 14,000ಕ್ಕೂ ಹೆಚ್ಚು ಪುರುಷರು ಪ್ರಯೋಜನ ಪಡೆದಿದ್ದಾರೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಲಡ್ಕಿ ಬಹಿನ್ ಯೋಜನೆ ಪುರುಷರಿಗಾಗಿ ಅಲ್ಲ, ಕಡಿಮೆ ಆದಾಯದ ಗುಂಪುಗಳ ನಿರ್ಗತಿಕ ಮಹಿಳೆಯರಿಗಾಗಿ ರೂಪಿಸಲಾಗಿದೆ. ಯೋಜನೆಯಡಿಯಲ್ಲಿ ಹಣವನ್ನು ಪಡೆದ ಪುರುಷರಿಂದ ರಾಜ್ಯ ಸರ್ಕಾರ ಹಣವನ್ನು ವಸೂಲಿ ಮಾಡಲಿದೆ. ಅವರು ಸಹಕರಿಸದಿದ್ದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...