Homeದಲಿತ್ ಫೈಲ್ಸ್ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

- Advertisement -
- Advertisement -

ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ಸ್ಥಳೀಯ ಗುತ್ತಿಗೆದಾರರು ಕರೆದೊಯ್ದಿದ್ದ ನೈಋತ್ಯ ಮಧ್ಯಪ್ರದೇಶದ ಬುಡಕಟ್ಟು ಜನಾಂಗದ 17 ಜನರನ್ನು ಮಹಾರಾಷ್ಟ್ರದ ಧರಾಶಿವ್ (ಉಸ್ಮಾನಾಬಾದ್) ಜಿಲ್ಲೆಯಲ್ಲಿ ಅವರಿಗೆ ಕೂಲಿಯೂ ಕೊಡದೆ, ಕೂಡಿ ಹಾಕಿ ಜೀತದಾಳುಗಳನ್ನಾಗಿ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಪೊಲೀಸ್ ದೂರಿನ ನಂತರ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಯಿತು ಎಂದು ವರದಿಯಾಗಿದೆ. ಮಹಾರಾಷ್ಟ್ರ

ಕೂಡಿ ಹಾಕಲ್ಪಟ್ಟ 17 ಜನರಲ್ಲಿ ಐವರು ಮಹಿಳೆಯರು ಮತ್ತು ಏಳು ಮಕ್ಕಳು ಇದ್ದರು ಎಂದು TNI ವರದಿ ಮಾಡಿದೆ. ಬುಡಕಟ್ಟು ಸಮುದಾಯದ ಈ ಕಾರ್ಮಿಕರು ನಾಲ್ಕು ತಿಂಗಳ ಹಿಂದೆ ಜಲಗಾಂವ್ (ಮಹಾರಾಷ್ಟ್ರ) ಮೂಲದ ಗುತ್ತಿಗೆದಾರ ದೇವಸಿಂಗ್ ಎಂಬುವವರ ಮೂಲಕ ಮಹಾರಾಷ್ಟ್ರದ ಧಾರಾಶಿವ್ (ಉಸ್ಮಾನಾಬಾದ್) ಜಿಲ್ಲೆಯ ಕಲಾಂಬ್ ತಹಸಿಲ್‌ನ ಗಂಭೀರ್ವಾಡಿ ಗ್ರಾಮದ ಶ್ರೀಮಂತ ರೈತನ ಕಬ್ಬಿನ ಹೊಲಗಳಲ್ಲಿ ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ತೆರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಗುತ್ತಿಗೆದಾರ ದೇವಸಿಂಗ್ ಕಾರ್ಮಿಕರನ್ನು ಧರಾಶಿವ್ ಜಿಲ್ಲೆಯಲ್ಲಿ ಬಿಟ್ಟು ಪರಾರಿಯಾಗಿದ್ದನು. ಗುತ್ತಿಗೆದಾರ ಪರಾರಿಯಾದ ಕಾರಣಕ್ಕೆ ಬುಡಕಟ್ಟು ಕಾರ್ಮಿಕರು ಅಲ್ಲಿಯೇ ಸಿಲುಕಿಕೊಂಡಿದ್ದು, ಅವರಿಗೆ ಸರಿಯಾದ ಆಹಾರ ಕೂಡಾ ಲಭ್ಯವಾಗಿಲ್ಲ ಎಂದು ಆರೋಪಿಸಲಾಗಿದೆ.

ಆಹಾರದ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಬುಡಕಟ್ಟು ಕಾರ್ಮಿಕರು ಕಬ್ಬಿನ ತೋಟದ ಮಾಲೀಕರ ಬಳಿ ತಮ್ಮ ವೇತನವನ್ನು ಪಾವತಿಸುವಂತೆ ಕೇಳಿಕೊಂಡಿದ್ದರು. ಆದರೆ ಈ ವೇಳೆ ಕಬ್ಬಿನ ತೋಟದ ಮಾಲಿಕ ಅವರಿಗೆ ಭರವಸೆ ನೀಡಿದ್ದ ವೇತನ ನೀಡುವ ಬದಲು, ಅವರ ಮೇಲೆಯೆ ಹಲ್ಲೆ ನಡೆಸಿದ್ದರು. ಮಹಾರಾಷ್ಟ್ರ

ಹಲ್ಲೆ ನಡೆಸಿದ್ದಲ್ಲದೆ, ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಹೊರಗಿನ ಪ್ರಪಂಚದೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಲು ಅವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಒಪ್ಪಿದ ವೇತನವನ್ನು ಪಾವತಿಸದೆ ಅವರನ್ನು ಬಂಧಿಸಿ ಜಮೀನಿನಲ್ಲಿ ಕೆಲಸ ಮಾಡಲು ಒತ್ತಾಯಿಸಲಾಯಿತು ಎಂದು ಎಂದು ಹೇಳಲಾಗಿದೆ.

ಕಳೆದ ವಾರ ಜನವರಿಯಲ್ಲಿ ಬಂಬಾಡಾ ಗ್ರಾಮದ (ಬುಡಕಟ್ಟು ಕಾರ್ಮಿಕರು ಮಧ್ಯಪ್ರದೇಶದಲ್ಲಿ ವಾಸಿಸುತ್ತಿದ್ದ ಗ್ರಾಮ) ನಿವಾಸಿಯೊಬ್ಬರು ಬುರ್ಹಾನ್‌ಪುರ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ದೂರಿನ ಮೇರೆಗೆ, ಬುರ್ಹಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಾಟಿದಾರ್ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಗೆ ಮೀಸಲಾದ ಪೊಲೀಸ್ ತಂಡವನ್ನು ಕಾರ್ಮಿಕರಿದ್ದ ತೋಟಕ್ಕೆ ಕಳುಹಿಸಿದ್ದರು. ಹಾಗಾಗಿ ಮಂಗಳವಾರ ಅಲ್ಲಿ ಬಂಧಿತರಾಗಿದ್ದ 17 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ:  ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...