Homeಮುಖಪುಟಮಹಾರಾಷ್ಟ್ರ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಠಾಣೆಗಳು

ಮಹಾರಾಷ್ಟ್ರ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಠಾಣೆಗಳು

- Advertisement -
- Advertisement -

ಮಹಾರಾಷ್ಟ್ರದ ಮುಂಬೈಯ ಉಲ್ಲಾಸನಗರದಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಘಟನೆ ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಎರಡು ಪೊಲೀಸ್ ಠಾಣೆಗಳು ದೂರು ದಾಖಲಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ 15 ವರ್ಷದ ಬಾಲಕಿಯನ್ನು ಉಲ್ಲಾಸನಗರ ರೈಲ್ವೇ ನಿಲ್ದಾಣದ ಆವರಣದಲ್ಲಿ ರೈಲ್ವೆ ವಸತಿಗೃಹದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

“ಎರಡು ಪೊಲೀಸ್ ಠಾಣೆಗಳು ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆಯಲಿಲ್ಲ ಎಂಬ ಕಾರಣಕ್ಕೆ ಬಾಲಕಿಯ ದೂರನ್ನು ದಾಖಲಿಸಲು ನಿರಾಕರಿಸಿವೆ. ಸಂತ್ರಸ್ತೆಯ ದೂರನ್ನು ಏಕೆ ದಾಖಲಿಸಿಲ್ಲ ಎಂಬುದನ್ನು ತನಿಖೆ ಮಾಡಲಾಗುವುದು” ಎಂದು ರೈಲ್ವೆ ಪೊಲೀಸ್ ಆಯುಕ್ತ ಕೈಸರ್ ಖಾಲಿದ್ ಹೇಳಿದ್ದಾರೆ.

ಸದ್ಯ ಐಪಿಸಿ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಭೀಕರ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಸಾವು: ಆರೋಪಿ ಬಂಧನ 

ಘಟನೆಯ ವಿವರ: 

15 ವರ್ಷದ ಬಾಲಕಿ ಶಿರಡಿಯಿಂದ ಹಿಂದಿರುಗುತ್ತಿದ್ದರು. ಕಲ್ಯಾಣ್‌ನಿಂದ ಉಲ್ಲಾಸನಗರಕ್ಕೆ ಸ್ಥಳೀಯ ರೈಲನ್ನು ಹತ್ತಿ ರಾತ್ರಿ 9 ಗಂಟೆಗೆ ಬಂದಿದ್ದರು. ಅಲ್ಲಿ ಆಕೆ ತನ್ನ ಇಬ್ಬರು ಸ್ನೇಹಿತರನ್ನು ಭೇಟಿಯಾಗಿ ಮನೆಗೆ ತೆರಳುತ್ತಿದ್ದರು. ರೈಲ್ವೆ ನಿಲ್ದಾಣದ ಸ್ಕೈವಾಕ್‌ನಲ್ಲಿ ನಡೆಯುತ್ತಿದ್ದಾಗ ಆರೋಪಿ ಕೈಗೆ ಸಿಲುಕಿದ್ದಾರೆ.

ಆರೋಪಿ ತನ್ನ ಬಳಿ ಇದ್ದ ಸುತ್ತಿಗೆಯಿಂದ ಬಾಲಕಿಯ ಸ್ನೇಹಿತರನ್ನು ಹೆದರಿಸಿ, ಆಕೆಯನ್ನು ಅಪಹರಿಸಿ ಸ್ಕೈವಾಕ್ ನಿಂದ ಸುಮಾರು 50 ಮೀ ದೂರದಲ್ಲಿರುವ ನಿರ್ಜನ ರೈಲ್ವೆ ವಸತಿಗೃಹಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ.

ರಾತ್ರಿಯಿಡೀ ಬಂಧನದಲ್ಲಿದ್ದ ಬಾಲಕಿ ಬೆಳಿಗ್ಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ದಾರಿಹೋಕರ ಫೋನ್  ಪಡೆದು, ಸ್ನೇಹಿತನಿಗೆ ಕರೆ ಮಾಡಿದ್ದಾರೆ. ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ಸ್ನೇಹಿತ ಸಲಹೆ ನೀಡಿದ್ದಾರೆ. ಆದರೆ 2 ಪೊಲೀಸ್ ಠಾಣೆಗಳಿಗೆ ಹೋದರು, ಘಟನೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ದಾಖಲಿಸಿಕೊಂಡಿಲ್ಲ ಎಂದು ರೈಲ್ವೇ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

“ನಾವು ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದೇವೆ. ವಿಧಿವಿಜ್ಞಾನ ತಂಡವು ಘಟನಾ ಸ್ಥಳವನ್ನು ಪರಿಶೀಲಿಸಿದೆ. ತನಿಖೆ ನಡೆಯುತ್ತಿದೆ. ಆರೋಪಿಯ ಹಿನ್ನೆಲೆ ಪರಿಶೀಲನೆ ನಡೆಸಿದ್ದೇವೆ. ಆತನ ವಿರುದ್ಧ ಕಳ್ಳತನದಂತಹ ಅಪರಾಧಗಳಿಗಾಗಿ ಥಾಣೆ ನಗರದಲ್ಲಿ ಅನೇಕ ಪ್ರಕರಣಗಳು ದಾಖಲಾಗಿವೆ” ರೈಲ್ವೆ ಪೊಲೀಸ್ ಆಯುಕ್ತ ಕೈಸರ್ ಖಾಲಿದ್ ಹೇಳಿದ್ದಾರೆ.

ಮೊನ್ನೆಯಷ್ಟೇ ಮುಂಬೈನ ಸಕಿನಾಕಾದಲ್ಲಿ ಅತ್ಯಾಚಾರಕ್ಕೊಳಕ್ಕಾಗಿ ಭೀಕರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಮೋಹನ್ ಚೌಹಾಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...