Homeಮುಖಪುಟಮಹಾರಾಷ್ಟ್ರ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಠಾಣೆಗಳು

ಮಹಾರಾಷ್ಟ್ರ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಠಾಣೆಗಳು

- Advertisement -
- Advertisement -

ಮಹಾರಾಷ್ಟ್ರದ ಮುಂಬೈಯ ಉಲ್ಲಾಸನಗರದಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಘಟನೆ ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಎರಡು ಪೊಲೀಸ್ ಠಾಣೆಗಳು ದೂರು ದಾಖಲಿಸಲು ನಿರಾಕರಿಸಿರುವ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ 15 ವರ್ಷದ ಬಾಲಕಿಯನ್ನು ಉಲ್ಲಾಸನಗರ ರೈಲ್ವೇ ನಿಲ್ದಾಣದ ಆವರಣದಲ್ಲಿ ರೈಲ್ವೆ ವಸತಿಗೃಹದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

“ಎರಡು ಪೊಲೀಸ್ ಠಾಣೆಗಳು ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆಯಲಿಲ್ಲ ಎಂಬ ಕಾರಣಕ್ಕೆ ಬಾಲಕಿಯ ದೂರನ್ನು ದಾಖಲಿಸಲು ನಿರಾಕರಿಸಿವೆ. ಸಂತ್ರಸ್ತೆಯ ದೂರನ್ನು ಏಕೆ ದಾಖಲಿಸಿಲ್ಲ ಎಂಬುದನ್ನು ತನಿಖೆ ಮಾಡಲಾಗುವುದು” ಎಂದು ರೈಲ್ವೆ ಪೊಲೀಸ್ ಆಯುಕ್ತ ಕೈಸರ್ ಖಾಲಿದ್ ಹೇಳಿದ್ದಾರೆ.

ಸದ್ಯ ಐಪಿಸಿ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಭೀಕರ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಸಾವು: ಆರೋಪಿ ಬಂಧನ 

ಘಟನೆಯ ವಿವರ: 

15 ವರ್ಷದ ಬಾಲಕಿ ಶಿರಡಿಯಿಂದ ಹಿಂದಿರುಗುತ್ತಿದ್ದರು. ಕಲ್ಯಾಣ್‌ನಿಂದ ಉಲ್ಲಾಸನಗರಕ್ಕೆ ಸ್ಥಳೀಯ ರೈಲನ್ನು ಹತ್ತಿ ರಾತ್ರಿ 9 ಗಂಟೆಗೆ ಬಂದಿದ್ದರು. ಅಲ್ಲಿ ಆಕೆ ತನ್ನ ಇಬ್ಬರು ಸ್ನೇಹಿತರನ್ನು ಭೇಟಿಯಾಗಿ ಮನೆಗೆ ತೆರಳುತ್ತಿದ್ದರು. ರೈಲ್ವೆ ನಿಲ್ದಾಣದ ಸ್ಕೈವಾಕ್‌ನಲ್ಲಿ ನಡೆಯುತ್ತಿದ್ದಾಗ ಆರೋಪಿ ಕೈಗೆ ಸಿಲುಕಿದ್ದಾರೆ.

ಆರೋಪಿ ತನ್ನ ಬಳಿ ಇದ್ದ ಸುತ್ತಿಗೆಯಿಂದ ಬಾಲಕಿಯ ಸ್ನೇಹಿತರನ್ನು ಹೆದರಿಸಿ, ಆಕೆಯನ್ನು ಅಪಹರಿಸಿ ಸ್ಕೈವಾಕ್ ನಿಂದ ಸುಮಾರು 50 ಮೀ ದೂರದಲ್ಲಿರುವ ನಿರ್ಜನ ರೈಲ್ವೆ ವಸತಿಗೃಹಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ.

ರಾತ್ರಿಯಿಡೀ ಬಂಧನದಲ್ಲಿದ್ದ ಬಾಲಕಿ ಬೆಳಿಗ್ಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ದಾರಿಹೋಕರ ಫೋನ್  ಪಡೆದು, ಸ್ನೇಹಿತನಿಗೆ ಕರೆ ಮಾಡಿದ್ದಾರೆ. ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ಸ್ನೇಹಿತ ಸಲಹೆ ನೀಡಿದ್ದಾರೆ. ಆದರೆ 2 ಪೊಲೀಸ್ ಠಾಣೆಗಳಿಗೆ ಹೋದರು, ಘಟನೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ದಾಖಲಿಸಿಕೊಂಡಿಲ್ಲ ಎಂದು ರೈಲ್ವೇ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

“ನಾವು ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದೇವೆ. ವಿಧಿವಿಜ್ಞಾನ ತಂಡವು ಘಟನಾ ಸ್ಥಳವನ್ನು ಪರಿಶೀಲಿಸಿದೆ. ತನಿಖೆ ನಡೆಯುತ್ತಿದೆ. ಆರೋಪಿಯ ಹಿನ್ನೆಲೆ ಪರಿಶೀಲನೆ ನಡೆಸಿದ್ದೇವೆ. ಆತನ ವಿರುದ್ಧ ಕಳ್ಳತನದಂತಹ ಅಪರಾಧಗಳಿಗಾಗಿ ಥಾಣೆ ನಗರದಲ್ಲಿ ಅನೇಕ ಪ್ರಕರಣಗಳು ದಾಖಲಾಗಿವೆ” ರೈಲ್ವೆ ಪೊಲೀಸ್ ಆಯುಕ್ತ ಕೈಸರ್ ಖಾಲಿದ್ ಹೇಳಿದ್ದಾರೆ.

ಮೊನ್ನೆಯಷ್ಟೇ ಮುಂಬೈನ ಸಕಿನಾಕಾದಲ್ಲಿ ಅತ್ಯಾಚಾರಕ್ಕೊಳಕ್ಕಾಗಿ ಭೀಕರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಮೋಹನ್ ಚೌಹಾಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...