Homeಮುಖಪುಟಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

- Advertisement -
- Advertisement -

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ. 

ಹಾಸ್ಟೆಲ್‌ನಲ್ಲಿ ನೀಡಲಾದ ಊಟ ಸೇವಿಸಿದ ಕೆಲವೇ ಸಮಯದಲ್ಲೇ ಹಲವು ವಿದ್ಯಾರ್ಥಿಗಳಲ್ಲಿ ತೀವ್ರ ಸ್ವರೂಪದ ವಾಂತಿ, ಹೊಟ್ಟೆನೋವು ಹಾಗೂ ಜಠರದುರಿತದ (ಗ್ಯಾಸ್ಟ್ರೋಎಂಟರೈಟಿಸ್) ಲಕ್ಷಣಗಳು ಕಾಣಿಸಿಕೊಂಡವು. ಒಂದರ ಮೇಲೊಂದರಂತೆ ಮಕ್ಕಳು ಅಸ್ವಸ್ಥಗೊಳ್ಳಲು ಪ್ರಾರಂಭಿಸಿದ್ದರಿಂದ ಹಾಸ್ಟೆಲ್ ಆವರಣದಲ್ಲಿ ಹಾಗೂ ಪೋಷಕರಲ್ಲಿ ತೀವ್ರ ಭೀತ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಸುಳಿವು ಸಿಗುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಹಾಸ್ಟೆಲ್ ಸಿಬ್ಬಂದಿ ಮತ್ತು ಸ್ಥಳೀಯರು ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಹಾಡಾದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದರು. ಒಟ್ಟು 40 ಬಾಧಿತ ಮಕ್ಕಳ ಪೈಕಿ 25 ವಿದ್ಯಾರ್ಥಿಗಳಿಗೆ ತಕ್ಷಣದ ವೈದ್ಯಕೀಯ ತುರ್ತು ಚಿಕಿತ್ಸೆಯ ಅಗತ್ಯವಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿದೆ. ಇವರಲ್ಲಿ 20 ಮಕ್ಕಳು ಶಹಾಡಾದ ಸರ್ಕಾರಿ ಗ್ರಾಮೀಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐದು ವಿದ್ಯಾರ್ಥಿಗಳಲ್ಲಿ ರಕ್ತದೊತ್ತಡದ ತೀವ್ರ ಏರಿಳಿತ ಹಾಗೂ ಉಸಿರಾಟದ ತೊಂದರೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಕೈಮೀರದಂತೆ ತಡೆಯಲು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಿ ಕಂಟಿನ್ಯೂಯಸ್ ಆಕ್ಸಿಜನ್ ಸಪೋರ್ಟ್ ನೀಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ನಂದೂರ್ಬಾರ್ ಜಿಲ್ಲಾಧಿಕಾರಿ ಮಿತಾಲಿ ಸೇಥಿ ಅವರು ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ವೈಯಕ್ತಿಕವಾಗಿ ಭೇಟಿ ನೀಡಿ ಸ್ಥಿತಿಗತಿಯ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ಮಗುವಿನ ಬಳಿಗೂ ತೆರಳಿ ಆರೋಗ್ಯ ವಿಚಾರಿಸಿದ ಅವರು, ವೈದ್ಯರೊಂದಿಗೆ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿ ಆಸ್ಪತ್ರೆಯ ಆವರಣದಲ್ಲಿ ಕಣ್ಣೀರಿಡುತ್ತಿದ್ದ ಪೋಷಕರನ್ನು ಭೇಟಿಯಾದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಉತ್ತಮ ವೈದ್ಯಕೀಯ ಆರೈಕೆ ಸಿಗುತ್ತಿದ್ದು ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಿತಾಲಿ ಸೇಥಿ, ಶಹಾಡಾದ ಸಮಾಜ ಕಲ್ಯಾಣ ಹಾಸ್ಟೆಲ್‌ನಲ್ಲಿ ಸುಮಾರು 40 ಮಕ್ಕಳಿಗೆ ಆಹಾರ ವಿಷಪೂರಿತವಾಗಿ ಜಠರದುರಿತದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣವೇ 25 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಐವರಿಗೆ ಬಿಪಿ ಮತ್ತು ಆಮ್ಲಜನಕದ ಅಭಾವ ಕಂಡುಬಂದಿದ್ದರಿಂದ ಐಸಿಸಿಯುಗೆ ಸೇರಿಸಲಾಗಿತ್ತು. ವೈದ್ಯರು ನೀಡುತ್ತಿರುವ ನಿರಂತರ ಮಾಹಿತಿಯಂತೆ ಪ್ರಸ್ತುತ ಎಲ್ಲಾ 25 ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಅಪಾಯದ ವಲಯದಿಂದ ಹೊರಬಂದಿದ್ದಾರೆ. ಗ್ರಾಮೀಣ ಆಸ್ಪತ್ರೆಯಲ್ಲಿರುವ ಮಕ್ಕಳನ್ನು ಮುನ್ನೆಚ್ಚರಿಕೆಯಾಗಿ 24 ಗಂಟೆಗಳ ಕಾಲ ವೈದ್ಯರ ಕಣ್ಣಾವಲಿನಲ್ಲಿಯೇ ಇರಿಸಲಾಗುವುದು. ಪರಿಸ್ಥಿತಿ ಸಂಪೂರ್ಣ ಹದಕ್ಕೆ ಬಂದ ನಂತರವೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇನ್ನೊಂದೆಡೆ ಘಟನೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಮತ್ತು ಹೊಣೆಗಾರಿಕೆಯನ್ನು ನಿಗದಿಪಡಿಸಲು ಆಡಳಿತ ಮಂಡಳಿ ತನಿಖೆಯನ್ನು ಚುರುಕುಗೊಳಿಸಿದೆ. ಆಹಾರ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್‌ನ ಅಡುಗೆ ಕೋಣೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಆಹಾರ ಧಾನ್ಯಗಳು, ತಯಾರಿಸಿದ ಅಡುಗೆ ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಇದರ ಜೊತೆಗೆ ಅಸ್ವಸ್ಥಗೊಂಡ ವಿದ್ಯಾರ್ಥಿಗಳ ವಾಂತಿಯ ಮಾದರಿಗಳನ್ನು ಸಹ ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಮತ್ತು ವೈದ್ಯಕೀಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

ಲ್ಯಾಬ್ ವರದಿ ಬಂದ ತಕ್ಷಣವೇ ಘಟನೆಗೆ ಯಾರು ಹೊಣೆ ಎಂಬುದನ್ನು ಅಧಿಕೃತವಾಗಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹಾಸ್ಟೆಲ್‌ನ ಮುಖ್ಯೋಪಾಧ್ಯಾಯರು (HM), ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್ ಅವರ ಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಕುರಿತು ಕಟ್ಟುನಿಟ್ಟಿನ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಆತಂಕದಲ್ಲಿರುವ ಪೋಷಕರ ಸಂಶಯಗಳನ್ನು ನಿವಾರಿಸಲು ಪೊಲೀಸ್ ತಂಡವು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪೋಲಿಸ್ ಠಾಣೆಯೊಂದಿಗೆ ನಿಕಟ ಸಮನ್ವಯ ಸಾಧಿಸಲಾಗುತ್ತಿದೆ. ಬರುವ ಮುಂದಿನ ಎರಡು ತಿಂಗಳ ಒಳಗಾಗಿ ಜಿಲ್ಲೆಯ ಹಾಸ್ಟೆಲ್‌ಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ, ಅಲ್ಲಿನ ನೈರ್ಮಲ್ಯ, ಆಹಾರದ ಗುಣಮಟ್ಟ ಮತ್ತು ಭದ್ರತೆಗೆ ಸಂಬಂಧಿಸಿದ ಎಲ್ಲಾ ಕುಂದುಕೊರತೆಗಳನ್ನು ಶಾಶ್ವತವಾಗಿ ಬಗೆಹರಿಸುವುದಾಗಿ ಆಡಳಿತ ಭರವಸೆ ನೀಡಿದೆ. ಪ್ರಸ್ತುತ ತನಿಖೆ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...