Homeಮುಖಪುಟಮಹಾರಾಷ್ಟ್ರ: 80 ಲಕ್ಷ ಮಹಿಳೆಯರು 'ಲಡ್ಕಿ ಬಹಿನ್' ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್’ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು ಎದುರಿಸುತ್ತಿರುವ “ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ” ತಪ್ಪಿಸಿಕೊಳ್ಳಲು ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳನ್ನು ಉದ್ದೇಶಪೂರ್ವಕವಾಗಿಯೇ ಪಟ್ಟಿಯಿಂದ ಕೈಬಿಡುತ್ತಿದೆ ಎಂದು ವಿರೋಧ ಪಕ್ಷಗಳು ತೀವ್ರ ಆರೋಪ ಮಾಡಿವೆ.

ಏಪ್ರಿಲ್ 30ರ ಇ-ಕೆವೈಸಿ ಅಂತಿಮ ಗಡುವಿನ ನಂತರ ಯೋಜನೆಯ ಫಲಾನುಭವಿಗಳ ಸಂಖ್ಯೆಯು 2.4 ಕೋಟಿಯಿಂದ ಸುಮಾರು 1.7 ಕೋಟಿಗೆ ಕುಸಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆದರೆ, ಈ ಅನರ್ಹತೆಗಳು ಕೇವಲ ಇ-ಕೆವೈಸಿ ಕಾರಣಕ್ಕೆ ಮಾತ್ರವಲ್ಲದೆ, ಯೋಜನೆಯ ನಿಯಮ ಮತ್ತು ಅರ್ಹತಾ ಮಾನದಂಡಗಳನ್ನು ಪಾಲಿಸದ ಕಾರಣಕ್ಕೂ ನಡೆದಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪಿಟಿಐ ಮಾಹಿತಿ ಆಧರಿಸಿ ಡೆಕನ್ ಹೆರಾಲ್ಡ್ ವರದಿ ಪ್ರಕಟಿಸಿದೆ. 

ತಾಂತ್ರಿಕ ಕಾರಣ ಮತ್ತು ಮಾನದಂಡಗಳ ವಿವರ:

ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಎಂಟು ತಿಂಗಳ ಸುದೀರ್ಘ ಕಾಲಾವಕಾಶ ನೀಡಿತ್ತು ಎಂದು ತಿಳಿಸಿದ ಅಧಿಕಾರಿಗಳು ಮಾಧ್ಯಮಗಳ ಎದುರು ಮಹಿಳೆಯರನ್ನು ಯೋಜನೆಯಿಂದ ಕೈಬಿಡಲು ಕಾರಣಗಳನ್ನು ತಿಳಿಸಿದ್ದಾರೆ. 

  • ಪ್ರಕ್ರಿಯೆ ಪೂರ್ಣಗೊಳಿಸದವರು: ಸುಮಾರು 50 ರಿಂದ 55 ಲಕ್ಷ ಮಹಿಳೆಯರು ಇ-ಕೆವೈಸಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ವಿಫಲರಾಗಿದ್ದಾರೆ. ಆದಾಗ್ಯೂ, ಈ ಅವಧಿಯಲ್ಲಿ ಕಂಡುಬಂದಿದ್ದ 2 ರಿಂದ 3 ಲಕ್ಷ ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. 
  • ಆದಾಯ ಮಿತಿ ಮೀರಿದವರು: ಸುಮಾರು 12 ಲಕ್ಷ ಮಹಿಳೆಯರು ವಾರ್ಷಿಕ 2.5 ಲಕ್ಷ ರೂ. ಆದಾಯ ಮಿತಿಗಿಂತ ಹೆಚ್ಚು ಗಳಿಸುವ ಆದಾಯ ತೆರಿಗೆ ಪಾವತಿದಾರರು (IT Payers) ಎಂದು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ
  • ವಯೋಮಿತಿ ಮೀರಿದವರು: 4.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಯೋಜನೆಯ ಗರಿಷ್ಠ ವಯೋಮಿತಿಯಾದ 65 ವರ್ಷಗಳನ್ನು ದಾಟಿದ್ದಾರೆ ಎಂಬ ಕಾರಣ ನೀಡಿದ್ದಾರೆ. 
  • ಇತರ ಯೋಜನೆಗಳ ಫಲಾನುಭವಿಗಳು: ಸುಮಾರು 5 ಲಕ್ಷ ಮಹಿಳೆಯರು ಈಗಾಗಲೇ ‘ನಮೋ ಶೇತ್ಕರಿ ಯೋಜನೆ’ಯಡಿ ಆರ್ಥಿಕ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಕಾರಣ ಮುಂದಿಟ್ಟಿದ್ದಾರೆ. 

ಇ-ಕೆವೈಸಿ ಪೂರ್ಣಗೊಳಿಸಿದರೂ ಮಾಸಿಕ ಕಂತುಗಳ ಹಣ ಜಮೆಯಾಗದ ಕುರಿತು ಬರುತ್ತಿರುವ ದೂರುಗಳಿಗೆ ಪ್ರತಿಕ್ರಿಯಿಸಿದ ಅಧಿಕಾರಿ, “ನಿಜವಾದ ಫಲಾನುಭವಿಗಳ ಅಂತಿಮ ಅಂಕಿ-ಅಂಶಗಳು ಇನ್ನು ಒಂದು ವಾರದಲ್ಲಿ ಸ್ಪಷ್ಟವಾಗಲಿವೆ ಮತ್ತು ಸಲ್ಲಿಕೆಯಾಗಿರುವ ದೂರುಗಳನ್ನು ಪರಿಶೀಲಿಸಲಾಗುತ್ತಿದೆ. ಕೇವಲ ಇ-ಕೆವೈಸಿ ನೆಪದಲ್ಲಿ 80 ಲಕ್ಷ ಮಹಿಳೆಯರನ್ನು ಕೈಬಿಡಲಾಗಿದೆ ಎಂಬ ಆರೋಪ ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

‘ಲಡ್ಕಿ ಬಹಿನ್‌’ಗಳಿಗೆ ಬಿದ್ದ ಮೊದಲ ಹೊಡೆತ: ಜಯಂತ್ ಪಾಟೀಲ್ ಆಕ್ರೋಶ

ಮತ್ತೊಂದೆಡೆ, ಸರ್ಕಾರದ ಈ ಕ್ರಮದ ವಿರುದ್ಧ ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕ ಜಯಂತ್ ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯೋಜನೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯ ಫಲಾನುಭವಿಗಳನ್ನು ಕೈಬಿಡುತ್ತಿರುವುದು ರಾಜ್ಯ ಸರ್ಕಾರ ಎದುರಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ಕಳೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಕಳಪೆ ಪ್ರದರ್ಶನದ ನಂತರ, 2024ರ ರಾಜ್ಯ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ. ನೀಡುವ ಈ ಯೋಜನೆಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗಿತ್ತು. ಈಗ ಚುನಾವಣೆ ಮುಗಿಯುತ್ತಿದ್ದಂತೆ 80 ಲಕ್ಷ ಮಹಿಳೆಯರನ್ನು ಅನರ್ಹರೆಂದು ಘೋಷಿಸಲಾಗಿದೆ. ಇದು ನಂಬಿ ಮತಹಾಕಿದ ಜನರಿಗೆ ಮಾಡಿದ ದ್ರೋಹ. ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರವೂ ದೊಡ್ಡ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಇದರ ಮೊದಲ ಹೊಡೆತ ನಮ್ಮ ‘ಲಡ್ಕಿ ಬಹಿನ್’ (ಆತ್ಮೀಯ ಸಹೋದರಿಯರ) ಮೇಲೆ ಬಿದ್ದಿದೆ. ಹಣಕಾಸಿನ ಕೊರತೆ ಮತ್ತು ಜಾಗತಿಕ ಆರ್ಥಿಕ ಕುಸಿತದ ಪರಿಸ್ಥಿತಿಯನ್ನು ಸರಿಯಾದ ಯೋಜನೆ ಮತ್ತು ಮುನ್ನೆಚ್ಚರಿಕೆಯ ಕ್ರಮಗಳ ಮೂಲಕ ನಿಭಾಯಿಸಬಹುದಿತ್ತು” ಎಂದು ಮಾಜಿ ಸಚಿವರೂ ಆದ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಯೋಜನೆ ನಿಲ್ಲಿಸುವುದೇ ಸರ್ಕಾರದ ಅಂತಿಮ ಗುರಿ: ಶಾಸಕ ರೋಹಿತ್ ಪವಾರ್ ಆರೋಪ

ಇದೇ ಧಾಟಿಯಲ್ಲಿ ಮಾತನಾಡಿದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, “ರಾಜ್ಯ ಸರ್ಕಾರವು ಯೋಜನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಅಂತಿಮ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಹಂತಹಂತವಾಗಿ ಫಲಾನುಭವಿಗಳನ್ನು ಪಟ್ಟಿಯಿಂದ ಹೊರಹಾಕುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುನ್ನ ಈ ಯೋಜನೆಯಡಿ 2.47 ಕೋಟಿ ಫಲಾನುಭವಿಗಳಿದ್ದರು. ಆದರೆ ಈಗ ಸುಮಾರು 81 ಲಕ್ಷ ಮಹಿಳೆಯರ ಹೆಸರುಗಳನ್ನು ಕೈಬಿಡಲಾಗಿದೆ. ಕೆವೈಸಿ (KYC) ಎಂಬುದು ಕೇವಲ ನೆಪವಷ್ಟೇ. ಫಲಾನುಭವಿಗಳನ್ನು ಕಡಿಮೆ ಮಾಡಿ ಕೊನೆಗೆ ಯೋಜನೆಯನ್ನೇ ನಿಲ್ಲಿಸುವುದು ಸರ್ಕಾರದ ಅಸಲಿ ಉದ್ದೇಶ” ಎಂದು ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಗೆ ಮುನ್ನ ಸರಿಯಾದ ಪರಿಶೀಲನೆ ನಡೆಸದ ಸರ್ಕಾರದ ನಡೆಯನ್ನು ಪ್ರಶ್ನಿಸಿದ ಅವರು, “ಈಗ ಕೈಬಿಡಲಾದ ಮಹಿಳೆಯರನ್ನು ಸರ್ಕಾರ ನಕಲಿ ಫಲಾನುಭವಿಗಳು ಎನ್ನುವುದಾದರೆ, ಚುನಾವಣೆಗೆ ಮುನ್ನ ಸೂಕ್ತ ಕೆವೈಸಿ ಪರಿಶೀಲನೆ ನಡೆಸದೆ ಯೋಜನೆಯನ್ನು ಜಾರಿಗೆ ತಂದಿದ್ದು ಸರ್ಕಾರದ ವೈಫಲ್ಯವಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಮಹಿಳಾ ಫಲಾನುಭವಿಗಳಿಂದ ಈಗಾಗಲೇ ನೀಡಿರುವ ಹಣವನ್ನು ವಸೂಲಿ ಮಾಡಲು ಪ್ರಯತ್ನಿಸಿದರೆ ಅಥವಾ ಅವರಿಗೆ ಅನಾನುಕೂಲ ಉಂಟುಮಾಡಿದರೆ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...