Homeಮುಖಪುಟಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

- Advertisement -
- Advertisement -

ಈರುಳ್ಳಿ ಬೆಳೆಗೆ ಕನಿಷ್ಟ ಬೆಂಬಲ ಬೆಲೆ (MSP) ಸಿಗದುದ್ದಕ್ಕೆ ನರೇಂದ್ರ ಮೋದಿಯವರ ನಿರ್ಲಕ್ಷ್ಯವೆ ಕಾರಣ. ಹಾಗಾಗಿ ನನ್ನ ಸಾವಿಗೆ ಮೋದಿಯವರೆ ಹೊಣೆ ಎಂದು ಪತ್ರ ಬರೆದಿಟ್ಟು 42 ವರ್ಷದ ರೈತನೊಬ್ಬ ಸಾವಿಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಸಂಭವಿಸಿದೆ.

ದಶರಥ್ ಕೇದಾರಿ ಎಂಬ ರೈತ ಮೊದಲು ಸೋಯಾಬಿನ್ ಮತ್ತು ಟಮ್ಯಾಟೊ ಬೆಳೆದಿದ್ದರು. ಆದರೆ ಮಳೆಯಿಂದಾಗಿ ಬೆಳೆ ನಾಶವಾಗಿ ನಷ್ಟ ಅನುಭವಿಸಿದ್ದರು. ಈ ಭಾರಿ 2 ಲಕ್ಷ ರೂ ಮೌಲ್ಯದ ಈರುಳ್ಳಿ ಬೆಳೆದಿದ್ದರು. ಆದರೆ ಅದಕ್ಕೂ ನಿರೀಕ್ಷಿಸಿದ ಬೆಲೆ ಸಿಗದ ಕಾರಣ ಶನಿವಾರ ಕೀಟನಾಶಕ ಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಬೆಳೆ ಬೆಳೆಯುವುದಕ್ಕಾಗಿ ಆ ರೈತ ಸಹಕಾರಿ ಸಂಘದಲ್ಲಿ ಸಾಕಷ್ಟು ಸಾಲ ಮಾಡಿದ್ದರು. ಈರುಳ್ಳಿಯಂತಹ ಬೆಲೆಗಳಿಗೆ ಪ್ರಧಾನಿ ಮೋದಿಯವರು MSP ನೀಡಬೇಕು. ಕೃಷಿ ಎಂಬುದು ರೈತರ ಪಾಲಿಗೆ ಜೂಜಾಟವಾಗಿದೆ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರೆ, ನಿಮ್ಮ ನಿಷ್ಕ್ರಿಯತೆಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ದಯವಿಟ್ಟು ನಮ್ಮ ಪಾಲಿನ ನ್ಯಾಯಯುತ ಬೆಲೆ ನೀಡಿ ಎಂದು ಮರಾಠಿ ಭಾಷೆಯಲ್ಲಿ ಆತ್ಮಹತ್ಯೆ ಪತ್ರ ಬರೆಯಲಾಗಿದೆ. ಅಲ್ಲದೆ ಸಹಿ ಮಾಡಿದ ನಂತರ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಷಯಗಳನ್ನು ತಿಳಿಸಲಾಗಿದೆ.

ಅವರ ಬಟ್ಟೆಯಲ್ಲಿದ್ದ ಆತ್ಮಹತ್ಯೆ ಪತ್ರವನ್ನು ಸಂಬಂಧಿಗಳು ನೀಡಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ಸಮರ್ಪಕ ಬೆಲೆ ನೀಡದಿರುವುದಕ್ಕೆ ರಾಜ್ಯ ಸರ್ಕಾರವನ್ನು ಸಹ ತರಾಟೆಗೆ ತೆಗೆದುಕೊಂಡಿದ್ದಾರೆ. ಅದನ್ನು ಕೈಬರಹ ತಜ್ಞರಿಗೆ ಕಳಿಸಿಕೊಡಲಾಗುವುದು ಎಂದು ಪೊಲೀಸ್ ಅಧಿಕಾರಿ ಕ್ಷೀರಸಾಗರ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ವಸಂತರಾವ್ ನಾಯಕ್ ಶೆಟ್ಟಿ ಸ್ವಾವಲಂಬನ್ ಮಿಷನ್ ಅಧ್ಯಕ್ಷ ಮತ್ತು ಶಿವಸೇನೆಯ ವಕ್ತಾರ ಕಿಶೋರ್ ತಿವಾರಿ ಅವರು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ತಡೆಯಲು ಮತ್ತು ಪುಣೆಯ ಮೃತ ರೈತ ದಶರಥ್ ಕೇದಾರಿ ಅವರ ಗ್ರಾಮಕ್ಕೆ ಭೇಟಿ ನೀಡಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿಗೆ ಪತ್ರ ಬರೆದಿದ್ದಾರೆ.

“ಮಹಾರಾಷ್ಟ್ರದಾದ್ಯಂತ ಕೃಷಿ ಬಿಕ್ಕಟ್ಟು, ಸಂಕಷ್ಟ ಮತ್ತು ಖಿನ್ನತೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನೀತಿಗಳು ವಿಫಲವಾಗಿವೆ. ಈಗ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ತಡೆಯಲು ಕೇಂದ್ರ ಸರ್ಕಾರದಿಂದ ತುರ್ತು ಕ್ರಮಗಳ ಅಗತ್ಯವಿದೆ” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸಚಿವನ ವಜಾಕ್ಕೆ ಆಗ್ರಹಿಸಿ 75 ಗಂಟೆಗಳ ಧರಣಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...