Homeಮುಖಪುಟಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

ಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

- Advertisement -
- Advertisement -

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತನನ್ನು ಕೊಲ್ಲಲಾಗಿದೆ. ಕಾರು ಹತ್ತಿಸಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವರದಿಗಾರನು ಕೊನೆಯುಸಿರೆದಿದ್ದಾನೆ.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದಾರೆ.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರಕರ್ ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಪತ್ರಕರ್ತ ಶಶಿಕಾಂತ ವಾರಿಷೆ

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಪ್ರಾಥಮಿಕ ಸಾಕ್ಷ್ಯಗಳು ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಆರೋಪಿ ಅಂಬರ್ಕರ್ ಬಂಧನವಾಗಿದ್ದು ಸ್ಥಳೀಯ ವರದಿಗಾರರ ಸಂಘವು ವಾರಿಷೆಯ ಹತ್ಯೆಯನ್ನು ಖಂಡಿಸಿದೆ. ಇದನ್ನು ‘ಕೊಲೆ’ ಎಂದು ಪರಿಗಣಿಸಬೇಕೆಂದು ಮನವಿ ಮಾಡಿದೆ.

ಮಹಾರಾಷ್ಟ್ರ ಟೈಮ್ಸ್‌ನ ಆನ್‌ಲೈನ್ ವರದಿಗಾರ ಪ್ರಸಾದ್ ರಾನಡೆ ಪ್ರತಿಕ್ರಿಯಿಸಿ, “ಇದು ನಮ್ಮಲ್ಲಿ ಯಾರಾಗಾದರೂ ಆಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...