Homeಮುಖಪುಟಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

ಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

- Advertisement -
- Advertisement -

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತನನ್ನು ಕೊಲ್ಲಲಾಗಿದೆ. ಕಾರು ಹತ್ತಿಸಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವರದಿಗಾರನು ಕೊನೆಯುಸಿರೆದಿದ್ದಾನೆ.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದಾರೆ.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರಕರ್ ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಪತ್ರಕರ್ತ ಶಶಿಕಾಂತ ವಾರಿಷೆ

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಪ್ರಾಥಮಿಕ ಸಾಕ್ಷ್ಯಗಳು ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಆರೋಪಿ ಅಂಬರ್ಕರ್ ಬಂಧನವಾಗಿದ್ದು ಸ್ಥಳೀಯ ವರದಿಗಾರರ ಸಂಘವು ವಾರಿಷೆಯ ಹತ್ಯೆಯನ್ನು ಖಂಡಿಸಿದೆ. ಇದನ್ನು ‘ಕೊಲೆ’ ಎಂದು ಪರಿಗಣಿಸಬೇಕೆಂದು ಮನವಿ ಮಾಡಿದೆ.

ಮಹಾರಾಷ್ಟ್ರ ಟೈಮ್ಸ್‌ನ ಆನ್‌ಲೈನ್ ವರದಿಗಾರ ಪ್ರಸಾದ್ ರಾನಡೆ ಪ್ರತಿಕ್ರಿಯಿಸಿ, “ಇದು ನಮ್ಮಲ್ಲಿ ಯಾರಾಗಾದರೂ ಆಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...