Homeಮುಖಪುಟಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? - ರಾಹುಲ್ ಗಾಂಧಿ...

ಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? – ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ದೋಷಗಳ ಸರಣಿಯನ್ನು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದು, ಜೊತೆಗೆ 2024 ರ ಲೋಕಸಭಾ ಚುನಾವಣೆ ಮತ್ತು ಐದು ತಿಂಗಳ ಅಂತರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿನ ರಾಜ್ಯದ ಮತದಾರರ ಪಟ್ಟಿಯನ್ನು ಪ್ರತಿಪಕ್ಷಗಳೊಂದಿಗೆ ಹಂಚಿಕೊಳ್ಳುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ

ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದಿದ್ದು, ಅದರ ನಂತರ ನವೆಂಬರ್‌ನಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಿತು. ವಿಧಾನಸಭಾ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ಸಂಪೂರ್ಣ ವಯಸ್ಕ ಜನಸಂಖ್ಯೆಗಿಂತ (9.54 ಕೋಟಿ) ಹೇಗೆ ಹೆಚ್ಚಾಗಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಹುಲ್ ಗಾಂಧಿಯವರು ಚುನಾವಣಾ ಆಯೋಗವನ್ನು ಕೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವಿನ ಅವಧಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಲ್ಲಿ ಕಳೆದ ಐದು ವರ್ಷಗಳಿಗಿಂತ ಹೆಚ್ಚಿನ ಮತದಾರರನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ವಿವರಿಸುವಂತೆ ಅವರು ಒತ್ತಾಯಿಸಿದ್ದಾರೆ.

ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾದ ಸುಮಾರು 39 ಲಕ್ಷ ಮತದಾರರನ್ನು ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವೆ ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಹೋಲಿಸಿದರೆ, 2019 ರ ಮಹಾರಾಷ್ಟ್ರ ಚುನಾವಣೆ ಮತ್ತು 2024 ರ ಸಂಸತ್ ಚುನಾವಣೆಯ ನಡುವೆ ಕೇವಲ 32 ಲಕ್ಷ ಮತದಾರರನ್ನು ಸೇರಿಸಲಾಗಿದೆ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ. ಮಹಾರಾಷ್ಟ್ರ

ನಾಗ್ಪುರ ಜಿಲ್ಲೆಯ ಕಾಮ್ಥಿ ವಿಧಾನಸಭಾ ಕ್ಷೇತ್ರದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಅಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಅಂತರವು ಸೇರಿಸಲಾದ ಹೊಸ ಮತದಾರರ ಸಂಖ್ಯೆಗೆ ಬಹುತೇಕ ಸಮಾನವಾಗಿದೆ ಎಂದು ಹೇಳಿದ್ದಾರೆ. “ಚುನಾವಣಾ ಆಯೋಗ ಪಟ್ಟಿಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ಇದಕ್ಕಿಂತ ಉತ್ತಮ ಸಂದರ್ಭ ಬೇಕಿಲ್ಲ. ಆಯೋಗ ಈ ಪಟ್ಟಿಯ ತಿದ್ದುಪಡಿಯನ್ನು ನಿರ್ವಹಿಸಿದೆ. ಆದರೆ ಈಗ ಅದರಲ್ಲಿ ಏನಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದು ಆಯೋಗದ ಜವಾಬ್ದಾರಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವತ್ ಮತ್ತು ಎನ್‌ಸಿಪಿ (ಶರದ್ಚಂದ್ರ ಪವಾರ್)ಯ ಸುಪ್ರಿಯಾ ಸುಳೆ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪಗಳನ್ನು ಮಾಡಿದ್ದಾರೆ. ಈ ಮೂರು ಪಕ್ಷಗಳು ರಾಜ್ಯದ ವಿರೋಧ ಪಕ್ಷದ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಪ್ರಮುಖ ಘಟಕಗಳಾಗಿವೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷಗಳು ವಿಭಜನೆಯಾಗುವುದು, ಪಕ್ಷದ ಚಿಹ್ನೆಗಳ ಸುತ್ತಲಿನ ಗೊಂದಲ ಮತ್ತು ಮತದಾರರ ಪಟ್ಟಿಗಳಲ್ಲಿನ ವೈಪರೀತ್ಯಗಳ ಮೂಲಕ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಮೇಲೆ “ಬಹುಮುಖ ದಾಳಿ” ನಡೆದಿದೆ ಎಂದು ಎನ್‌ಸಿಪಿ ಸಂಸದೆ ಸುಲೆ ಆರೋಪಿಸಿದ್ದಾರೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡ ಆಡಳಿತಾರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತ್ತು. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತ್ತಿ.

ಆದಾಗ್ಯೂ, ಇದಕ್ಕಿಂತಲೂ ಕೇವಲ ಐದು ತಿಂಗಳ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ ಹಿನ್ನಡೆಯನ್ನು ಅನುಭವಿಸಿತ್ತು. ಜೊತೆಗೆ ರಾಜ್ಯದ 48 ಕ್ಷೇತ್ರಗಳಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ, ವಿರೋಧ ಪಕ್ಷವಾದ ಇಂಡಿಯಾ ಬಣವು 29 ಸ್ಥಾನಗಳನ್ನು ಗೆದ್ದಿತ್ತು. ಇವುಗಳಲ್ಲಿ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು (13) ಗಳಿಸಿತ್ತು. ಬಿಜೆಪಿ ಒಂಬತ್ತು ಸ್ಥಾನಗಳಿಗೆ ಇಳಿದಿತ್ತು.

ಇದನ್ನೂಓದಿ:  ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...