Homeಮುಖಪುಟಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? - ರಾಹುಲ್ ಗಾಂಧಿ...

ಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? – ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ದೋಷಗಳ ಸರಣಿಯನ್ನು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದು, ಜೊತೆಗೆ 2024 ರ ಲೋಕಸಭಾ ಚುನಾವಣೆ ಮತ್ತು ಐದು ತಿಂಗಳ ಅಂತರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿನ ರಾಜ್ಯದ ಮತದಾರರ ಪಟ್ಟಿಯನ್ನು ಪ್ರತಿಪಕ್ಷಗಳೊಂದಿಗೆ ಹಂಚಿಕೊಳ್ಳುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ

ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದಿದ್ದು, ಅದರ ನಂತರ ನವೆಂಬರ್‌ನಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಿತು. ವಿಧಾನಸಭಾ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ಸಂಪೂರ್ಣ ವಯಸ್ಕ ಜನಸಂಖ್ಯೆಗಿಂತ (9.54 ಕೋಟಿ) ಹೇಗೆ ಹೆಚ್ಚಾಗಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಹುಲ್ ಗಾಂಧಿಯವರು ಚುನಾವಣಾ ಆಯೋಗವನ್ನು ಕೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವಿನ ಅವಧಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಲ್ಲಿ ಕಳೆದ ಐದು ವರ್ಷಗಳಿಗಿಂತ ಹೆಚ್ಚಿನ ಮತದಾರರನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ವಿವರಿಸುವಂತೆ ಅವರು ಒತ್ತಾಯಿಸಿದ್ದಾರೆ.

ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾದ ಸುಮಾರು 39 ಲಕ್ಷ ಮತದಾರರನ್ನು ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವೆ ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಹೋಲಿಸಿದರೆ, 2019 ರ ಮಹಾರಾಷ್ಟ್ರ ಚುನಾವಣೆ ಮತ್ತು 2024 ರ ಸಂಸತ್ ಚುನಾವಣೆಯ ನಡುವೆ ಕೇವಲ 32 ಲಕ್ಷ ಮತದಾರರನ್ನು ಸೇರಿಸಲಾಗಿದೆ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ. ಮಹಾರಾಷ್ಟ್ರ

ನಾಗ್ಪುರ ಜಿಲ್ಲೆಯ ಕಾಮ್ಥಿ ವಿಧಾನಸಭಾ ಕ್ಷೇತ್ರದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಅಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಅಂತರವು ಸೇರಿಸಲಾದ ಹೊಸ ಮತದಾರರ ಸಂಖ್ಯೆಗೆ ಬಹುತೇಕ ಸಮಾನವಾಗಿದೆ ಎಂದು ಹೇಳಿದ್ದಾರೆ. “ಚುನಾವಣಾ ಆಯೋಗ ಪಟ್ಟಿಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ಇದಕ್ಕಿಂತ ಉತ್ತಮ ಸಂದರ್ಭ ಬೇಕಿಲ್ಲ. ಆಯೋಗ ಈ ಪಟ್ಟಿಯ ತಿದ್ದುಪಡಿಯನ್ನು ನಿರ್ವಹಿಸಿದೆ. ಆದರೆ ಈಗ ಅದರಲ್ಲಿ ಏನಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದು ಆಯೋಗದ ಜವಾಬ್ದಾರಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವತ್ ಮತ್ತು ಎನ್‌ಸಿಪಿ (ಶರದ್ಚಂದ್ರ ಪವಾರ್)ಯ ಸುಪ್ರಿಯಾ ಸುಳೆ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪಗಳನ್ನು ಮಾಡಿದ್ದಾರೆ. ಈ ಮೂರು ಪಕ್ಷಗಳು ರಾಜ್ಯದ ವಿರೋಧ ಪಕ್ಷದ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಪ್ರಮುಖ ಘಟಕಗಳಾಗಿವೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷಗಳು ವಿಭಜನೆಯಾಗುವುದು, ಪಕ್ಷದ ಚಿಹ್ನೆಗಳ ಸುತ್ತಲಿನ ಗೊಂದಲ ಮತ್ತು ಮತದಾರರ ಪಟ್ಟಿಗಳಲ್ಲಿನ ವೈಪರೀತ್ಯಗಳ ಮೂಲಕ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಮೇಲೆ “ಬಹುಮುಖ ದಾಳಿ” ನಡೆದಿದೆ ಎಂದು ಎನ್‌ಸಿಪಿ ಸಂಸದೆ ಸುಲೆ ಆರೋಪಿಸಿದ್ದಾರೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡ ಆಡಳಿತಾರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತ್ತು. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತ್ತಿ.

ಆದಾಗ್ಯೂ, ಇದಕ್ಕಿಂತಲೂ ಕೇವಲ ಐದು ತಿಂಗಳ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ ಹಿನ್ನಡೆಯನ್ನು ಅನುಭವಿಸಿತ್ತು. ಜೊತೆಗೆ ರಾಜ್ಯದ 48 ಕ್ಷೇತ್ರಗಳಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ, ವಿರೋಧ ಪಕ್ಷವಾದ ಇಂಡಿಯಾ ಬಣವು 29 ಸ್ಥಾನಗಳನ್ನು ಗೆದ್ದಿತ್ತು. ಇವುಗಳಲ್ಲಿ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು (13) ಗಳಿಸಿತ್ತು. ಬಿಜೆಪಿ ಒಂಬತ್ತು ಸ್ಥಾನಗಳಿಗೆ ಇಳಿದಿತ್ತು.

ಇದನ್ನೂಓದಿ:  ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...