Homeಮುಖಪುಟಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? - ರಾಹುಲ್ ಗಾಂಧಿ...

ಮಹಾರಾಷ್ಟ್ರ | ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಹೇಗೆ ಸಾಧ್ಯ? – ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ದೋಷಗಳ ಸರಣಿಯನ್ನು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದು, ಜೊತೆಗೆ 2024 ರ ಲೋಕಸಭಾ ಚುನಾವಣೆ ಮತ್ತು ಐದು ತಿಂಗಳ ಅಂತರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿನ ರಾಜ್ಯದ ಮತದಾರರ ಪಟ್ಟಿಯನ್ನು ಪ್ರತಿಪಕ್ಷಗಳೊಂದಿಗೆ ಹಂಚಿಕೊಳ್ಳುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ

ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದಿದ್ದು, ಅದರ ನಂತರ ನವೆಂಬರ್‌ನಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಿತು. ವಿಧಾನಸಭಾ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ಸಂಪೂರ್ಣ ವಯಸ್ಕ ಜನಸಂಖ್ಯೆಗಿಂತ (9.54 ಕೋಟಿ) ಹೇಗೆ ಹೆಚ್ಚಾಗಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಹುಲ್ ಗಾಂಧಿಯವರು ಚುನಾವಣಾ ಆಯೋಗವನ್ನು ಕೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವಿನ ಅವಧಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಲ್ಲಿ ಕಳೆದ ಐದು ವರ್ಷಗಳಿಗಿಂತ ಹೆಚ್ಚಿನ ಮತದಾರರನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ವಿವರಿಸುವಂತೆ ಅವರು ಒತ್ತಾಯಿಸಿದ್ದಾರೆ.

ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾದ ಸುಮಾರು 39 ಲಕ್ಷ ಮತದಾರರನ್ನು ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವೆ ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಹೋಲಿಸಿದರೆ, 2019 ರ ಮಹಾರಾಷ್ಟ್ರ ಚುನಾವಣೆ ಮತ್ತು 2024 ರ ಸಂಸತ್ ಚುನಾವಣೆಯ ನಡುವೆ ಕೇವಲ 32 ಲಕ್ಷ ಮತದಾರರನ್ನು ಸೇರಿಸಲಾಗಿದೆ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ. ಮಹಾರಾಷ್ಟ್ರ

ನಾಗ್ಪುರ ಜಿಲ್ಲೆಯ ಕಾಮ್ಥಿ ವಿಧಾನಸಭಾ ಕ್ಷೇತ್ರದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಅಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಅಂತರವು ಸೇರಿಸಲಾದ ಹೊಸ ಮತದಾರರ ಸಂಖ್ಯೆಗೆ ಬಹುತೇಕ ಸಮಾನವಾಗಿದೆ ಎಂದು ಹೇಳಿದ್ದಾರೆ. “ಚುನಾವಣಾ ಆಯೋಗ ಪಟ್ಟಿಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ಇದಕ್ಕಿಂತ ಉತ್ತಮ ಸಂದರ್ಭ ಬೇಕಿಲ್ಲ. ಆಯೋಗ ಈ ಪಟ್ಟಿಯ ತಿದ್ದುಪಡಿಯನ್ನು ನಿರ್ವಹಿಸಿದೆ. ಆದರೆ ಈಗ ಅದರಲ್ಲಿ ಏನಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದು ಆಯೋಗದ ಜವಾಬ್ದಾರಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವತ್ ಮತ್ತು ಎನ್‌ಸಿಪಿ (ಶರದ್ಚಂದ್ರ ಪವಾರ್)ಯ ಸುಪ್ರಿಯಾ ಸುಳೆ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪಗಳನ್ನು ಮಾಡಿದ್ದಾರೆ. ಈ ಮೂರು ಪಕ್ಷಗಳು ರಾಜ್ಯದ ವಿರೋಧ ಪಕ್ಷದ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಪ್ರಮುಖ ಘಟಕಗಳಾಗಿವೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷಗಳು ವಿಭಜನೆಯಾಗುವುದು, ಪಕ್ಷದ ಚಿಹ್ನೆಗಳ ಸುತ್ತಲಿನ ಗೊಂದಲ ಮತ್ತು ಮತದಾರರ ಪಟ್ಟಿಗಳಲ್ಲಿನ ವೈಪರೀತ್ಯಗಳ ಮೂಲಕ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಮೇಲೆ “ಬಹುಮುಖ ದಾಳಿ” ನಡೆದಿದೆ ಎಂದು ಎನ್‌ಸಿಪಿ ಸಂಸದೆ ಸುಲೆ ಆರೋಪಿಸಿದ್ದಾರೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡ ಆಡಳಿತಾರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತ್ತು. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತ್ತಿ.

ಆದಾಗ್ಯೂ, ಇದಕ್ಕಿಂತಲೂ ಕೇವಲ ಐದು ತಿಂಗಳ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ ಹಿನ್ನಡೆಯನ್ನು ಅನುಭವಿಸಿತ್ತು. ಜೊತೆಗೆ ರಾಜ್ಯದ 48 ಕ್ಷೇತ್ರಗಳಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ, ವಿರೋಧ ಪಕ್ಷವಾದ ಇಂಡಿಯಾ ಬಣವು 29 ಸ್ಥಾನಗಳನ್ನು ಗೆದ್ದಿತ್ತು. ಇವುಗಳಲ್ಲಿ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು (13) ಗಳಿಸಿತ್ತು. ಬಿಜೆಪಿ ಒಂಬತ್ತು ಸ್ಥಾನಗಳಿಗೆ ಇಳಿದಿತ್ತು.

ಇದನ್ನೂಓದಿ:  ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...