Homeಮುಖಪುಟಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಸಚಿವ ಏಕನಾಥ್‌ ಶಿಂಧೆ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಎಂಎಲ್‌ಸಿ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ, 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ.

ಸಚಿವ ಮತ್ತು ಶಿವಸೇನೆಯ ಉನ್ನತ ನಾಯಕ ಏಕನಾಥ್ ಶಿಂಧೆ, 13 ಶಾಸಕರೊಂದಿಗೆ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಇದು ಮಹಾರಾಷ್ಟ್ರದ ಸರ್ಕಾರದಲ್ಲಿ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡಿದೆ.

ಉದ್ಧವ್ ಠಾಕ್ರೆ ಕರೆದಿರುವ ತುರ್ತು ಸಭೆಗೆ ಎಲ್ಲಾ ಶಾಸಕರು ಸಭೆಯಲ್ಲಿ ಹಾಜರಿರಲು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಆದರೆ, ಗುಜರಾತ್‌ನ ಹೋಟೆಲ್‌ನಲ್ಲಿರುವ ಬಾಳ್ ಠಾಕ್ರೆ ನಿಷ್ಠಾವಂತ ನಾಯಕ ಏಕನಾಥ್ ಶಿಂದೆ ಇಂದು ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ತಲಾ ಐದು ಸ್ಥಾನಗಳನ್ನು ಗೆದ್ದ ಕೆಲವೇ ಗಂಟೆಗಳ ನಂತರದ ಬೆಳವಣಿಗೆಗಳು ಕಂಡುಬಂದಿವೆ. ಪ್ರತಿಪಕ್ಷ ಬಿಜೆಪಿ ಸ್ಪರ್ಧಿಸಿದ್ದ ಎಲ್ಲ ಐದು ಸ್ಥಾನಗಳನ್ನು ಗೆದ್ದಿದೆ. ಆದರೆ, ಆಡಳಿತಾರೂಢ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ ಹಂದೋರೆ ಸೋತಿದ್ದಾರೆ. ಇದು ಆಪರೇಷನ್ ಕಮಲದ ಸುಳಿವು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಗುರಿಯಾಗಿಸಿಕೊಂಡು ಶಿವಸೇನೆ ಸಂಸದ ಸಂಜಯ್ ರಾವತ್, ’ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಾಡಿದಂತೆಯೇ, ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸುವ ಸಂಚು ನಡೆಯುತ್ತಿದೆ. ಆದರೆ, ಶಿವಸೇನೆ ನಿಷ್ಠಾವಂತರ ಪಕ್ಷವಾಗಿದೆ, ನಾವು ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಜೊತೆಗೆ “ಏಕನಾಥ್ ಶಿಂಧೆ ಅವರು ಹೋಟೆಲ್‌ನಲ್ಲಿ ನಮ್ಮೊಂದಿಗೆ ಇದ್ದರು. ಮಹಾ ವಿಕಾಸ್ ಅಘಾಡಿ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈಗ ನಾವು ಅವರೊಂದಿಗೆ ಮಾತನಾಡುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ” ಎಂದು ಸಂಜಯ್ ರಾವತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಸಚಿವ ಏಕನಾಥ್‌ ಶಿಂಧೆ ಅವರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ. ಥಾಣೆಯ ಪ್ರಮುಖ  ಶಿವಸೇನಾ ನಾಯಕರಾಗಿರುವ ಶಿಂಧೆ ಅವರು ಈ ಪ್ರದೇಶದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ ಶಿವಸೇನೆಯ ಸಂಸದರಾಗಿದ್ದಾರೆ.

ಇತ್ತ, ಮಹಾರಾಷ್ಟ್ರದ ಬಿಜೆಪಿಯ ಪ್ರಮುಖ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಉದ್ಧವ್ ಸರ್ಕಾರಕ್ಕೆ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡುತ್ತಿದೆ.


ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....