Homeಮುಖಪುಟಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

ಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

- Advertisement -
- Advertisement -

ಗೋಮಾಂಸವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗೋರಕ್ಷಕರ ಗುಂಪೊಂದು ಶನಿವಾರ ರಾತ್ರಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಾಗಿದೆ.

ಮುಂಬೈನ ಕುರ್ಲಾದ ಖುರೇಷಿ ನಗರದ ನಿವಾಸಿ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಎಂಬಾತ ಬಲಿಯಾದ ವ್ಯಕ್ತಿ. ಅನ್ಸಾರಿ ಮತ್ತು ಆತನ ಸ್ನೇಹಿತ ನಾಸಿರ್ ಹುಸೇನ್ ಶೇಖ್ ಅಹ್ಮದ್‌ನಗರದಿಂದ ಮುಂಬೈಗೆ ಕಾರಿನಲ್ಲಿ 450 ಕೆಜಿ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ನಾಸಿಕ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಶಹಾಜಿ ಉಮಾಪ್ ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದು, ”ಶೇಖ್‌ ಅವರು ಸಿನ್ನಾರ್ ಪಟ್ಟಣದ ಟೋಲ್ ಗೇಟ್ ತಲುಪಿದಾಗ, ಕಾರಿನಲ್ಲಿ ಮಾಂಸವನ್ನು ಯಾರೋ ನೋಡಿದ್ದಾರೆ. ಆಗ ಯಾರೋ ದಾಳಿಕೋರರಿಗೆ ಮಾಹಿತಿ ನೀಡಿದ್ದಾರೆ. ನಾವು ಆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಉಮಾಪ್ ಹೇಳಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಸುನಿಲ್ ಭಮ್ರೆ ಮಾತನಾಡಿ, ”ಘಟನಾ ಸ್ಥಳವನ್ನು ತಲುಪಿದಾಗ, ಕಾರು ಸಂಪೂರ್ಣವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಇದ್ದದ್ದು ಗಮನಕ್ಕೆ ಬಂದಿದೆ. ಇಬ್ಬರು ಗಾಯಾಳುಗಳು ಕಾರಿನೊಳಗೆ ಇದ್ದರು. ತಕ್ಷಣ ನಾವು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ, ಚಿಕಿತ್ಸೆ ವೇಳೆ ಅವರಲ್ಲಿ ಒಬ್ಬರು ಸಾವನ್ನಪ್ಪಿದರು” ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ನಾಸಿರ್ ಹುಸೇನ್ ಶೇಖ್ ಅವರು ತಮ್ಮ ಮೇಲೆ ದಾಳಿ ನಡೆದ ಬಗ್ಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಇದುವರೆಗೆ 11 ಜನರನ್ನು ಬಂಧಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಿದ್ದಾರೆ ಮತ್ತು ಅವರ ಮೊಬೈಲ್ ಫೋನ್ ಲೊಕೇಶನ್ ಆಧರಿಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಮಾಪ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.

”ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಹತ್ತು ಜನರನ್ನು ಬಂಧಿಸಲಾಗಿದೆ. ಗಾಯಾಳು ನೀಡಿದ ದೂರಿನ ಮೇರೆಗೆ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತರು ನಿಜವಾಗಿಯೂ ಗೋಮಾಂಸ ಸಾಗಿಸುತ್ತಿದ್ದಾರೋ ಇಲ್ಲವೋ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ತಿಳಿಯಲಿದೆ” ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವಾರ ಇದೇ ನಾಸಿಕ್ ಜಿಲ್ಲಯಲ್ಲಿ ಜಾನುವಾರುಗಳನ್ನು ಸಾಯಿಸಲು ಸಾಗಿಸುತ್ತಿದ್ದಾರೆ ಎನ್ನುವ ಶಂಕೆಯ ಮೇರೆಗೆ ಮುಸ್ಲಿಂ ವ್ಯಕ್ತಿಯನ್ನು ಕೊಲ್ಲಲಾಗಿತ್ತು. ಲುಕ್ಮಾನ್ ಅನ್ಸಾರಿಯನ್ನು ಕೊಂದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ, ಅವರಲ್ಲಿ ಕೆಲವರು ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದಾರೆ.

ಜೂನ್ 8 ರಂದು ಅನ್ಸಾರಿ ಮತ್ತು ಅವರ ಇಬ್ಬರು ಸಹಚರರಾದ ಅಕ್ವೀಲ್ ಗವಂಡಿ ಮತ್ತು ಪಪ್ಪು ಪಡ್ಡಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಈ ಘಟನೆ ನಡೆದಿತ್ತು. ನಾಸಿಕ್‌ನ ಇಗತ್‌ಪುರಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯ 10ರಿಂದ 15 ಮಂದಿ ಅವರನ್ನು ಅಡ್ಡಗಟ್ಟಿದ್ದರು. ಗವಂಡಿ ಓಡಿಹೋದರು, ಉಳಿದ ಇಬ್ಬರನ್ನು ಗೋರಕ್ಷಕರು ಥಳಿಸಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಗೋಮಾಂಸ ಕಳ್ಳಸಾಗಣೆ ಆರೋಪದ ಮೇಲೆ ನಾಸಿಕ್ ಜಿಲ್ಲೆಯಲ್ಲಿಹಿಂದುತ್ವ ಸಂಘಟನೆಯವರು ಗೋರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...