Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ಫೆ.28 ರವರೆಗೆ ಪುಣೆಯ ಜಿಲ್ಲಾಡಳಿತ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿದ ಕೆಲವೇ ಗಂಟೆಗಳ ನಂತರ ಅಮರಾವತಿಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ.

- Advertisement -
- Advertisement -

ಮಹಾರಾಷ್ಟ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ಮಹಾರಾಷ್ಟ್ರದ ಅಮರಾವತಿ  ಜಿಲ್ಲೆಯನ್ನು ಒಂದು ವಾರ ಲಾಕ್‌ಡೌನ್ ಮಾಡಲಾಗಿದೆ. ಸೋಮವಾರ (ಫೆ.22) ಸಂಜೆಯಿಂದ ಲಾಕ್‌ಡೌನ್ ಪ್ರಾರಂಭವಾಗಲಿದೆ ಎಂದು ಕ್ಯಾಬಿನೆಟ್ ಸಚಿವ ಯಶೋಮತಿ ಠಾಕೂರ್ ಹೇಳಿದ್ದಾರೆ.

ಕಟ್ಟುನಿಟ್ಟಾದ ಏಳು ದಿನಗಳ ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಜನರು ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಲಾಕ್‌ಡೌನ್ ವಿಸ್ತರಿಸಲಾಗುವುದು ಎಂದು ಹೇಳಿದರು, ಮಹಾರಾಷ್ಟ್ರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಲೇ ‌ಇರುವುದರಿಂದ ಅನಿವಾರ್ಯವಾಗಿ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ

ಫೆಬ್ರವರಿ 28 ರವರೆಗೆ ಪುಣೆಯ ಜಿಲ್ಲಾಡಳಿತ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿದ ಕೆಲವೇ ಗಂಟೆಗಳ ನಂತರ ಅಮರಾವತಿಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ.

ನಾಗ್ಪುರ, ಅಕೋಲಾ, ಅಮರಾವತಿ, ಯವತ್ಮಾಲ್, ಮುಂಬೈ ಮತ್ತು ಪುಣೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಪರಿಸ್ಥಿತಿಯನ್ನು ಅವಲೋಕಿಸಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚಿಸಿ, ನಿರ್ಣಯಿಸಿದ ನಂತರ ಲಾಕ್‌ಡೌನ್ ಅಥವಾ ಇತರ ನಿರ್ಬಂಧಗಳ ಬಗ್ಗೆ ನಾವು ಜಿಲ್ಲಾಡಳಿತಕ್ಕೆ ತಿಳಿಸಲಿದ್ದೇವೆ’ ಎಂದು ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಕೂಡ ಅಲ್ಲಿಂದ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ.

“ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ವೈಯಕ್ತಿಕ ಸಾರಿಗೆಯಿಂದ ಬರುವವರು 72 ಗಂಟೆಗಳ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರಬೇಕೆಂಬುದು ಕಡ್ಡಾಯವಾಗಿರುತ್ತದೆ” ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾನೂನುಗಳ ರದ್ದತಿಗೆ ಯಾವ ರಾಜ್ಯಗಳೂ ಒತ್ತಾಯಿಸಿಲ್ಲ: ನೀತಿ ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...